AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ತುಟಿಗೆ ಬಣ್ಣ, ಕೈಗೆ ಬಳೆ, ಕಿವಿಗೆ ಓಲೆ ಏನಿದು ಅಲ್ಲು ಅರ್ಜುನ್ ಅವತಾರ

Pushpa 2: ತುಟಿಗೆ ಬಣ್ಣ, ಕಿವಿಗೆ ಓಲೆ, ಮೂಗಿಗೆ ಮೂಗುತಿ, ಕೈಗೆ ಬಳೆ, ಮೆಹಂದಿ ಏನಿದು ಅಲ್ಲು ಅರ್ಜುನ್ ಅವತಾರ?

Pushpa 2: ತುಟಿಗೆ ಬಣ್ಣ, ಕೈಗೆ ಬಳೆ, ಕಿವಿಗೆ ಓಲೆ ಏನಿದು ಅಲ್ಲು ಅರ್ಜುನ್ ಅವತಾರ
ಪುಷ್ಪ 2
ಮಂಜುನಾಥ ಸಿ.
|

Updated on:Apr 07, 2023 | 9:01 PM

Share

ಅಲ್ಲು ಅರ್ಜುನ್ (Allu Arjun) ಹುಟ್ಟುಹಬ್ಬದ (Birthday) ಪ್ರಯುಕ್ತ ಅವರ ನಟನೆಯ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 (Pushpa 2) ನ ಟೀಸರ್ ಬಿಡುಗಡೆ ಆಗಿ ಭಾರಿ ಸದ್ದು ಮಾಡುತ್ತಿದೆ. ಟೀಸರ್ ಜೊತೆಗೆ ಪೋಸ್ಟರ್ ಒಂದನ್ನು ಸಹ ಚಿತ್ರತಂಡ ಬಿಡುಗಡೆ ಮಾಡಿದ್ದು, ಪೋಸ್ಟರ್​ನಲ್ಲಿ ಅಲ್ಲು ಅರ್ಜುನ್ ಅವತಾರ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸ್ಟೈಲಿಷ್ ಸ್ಟಾರ್ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಅಲ್ಲು ಅರ್ಜುನ್, ಪುಷ್ಪ 2 ಸಿನಿಮಾದ ಪೋಸ್ಟರ್​ನಲ್ಲಿ ಮಹಿಳೆಯ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಅದೂ ಸಾಮಾನ್ಯ ಮಹಿಳೆಯಲ್ಲ, ಶಕ್ತಿದೇವತೆ ಕಾಳಿಯ ಅವತಾರದಲ್ಲಿ!

ಮೂಗಿಗೆ ಮೂಗುತಿ, ನತ್ತು, ಕಿವಿಯಲ್ಲಿ ತೂಗಾಡುವ ಓಲೆ, ತುಟಿಗೆ ಕೆಂಪು ಬಣ್ಣದ ಲಿಪ್​ಸ್ಟಿಕ್ಕು, ತೋಳಿಗೆ ತೋಳುಬಂಧಿ, ಕೊರಳಿಗೆ ಎರಡೆರಡು ಸರ ಜೊತೆಗೆ ನಿಂಬೆ ಹಾರ, ಕೆಂಪು ಬಣ್ಣದ ರವಿಕೆ, ಅದರ ಮೇಲೆ ನೀಲಿ ಸೀರೆ, ಕೈಗೆ ಕೆಂಪು ಬಳೆ, ಉಗುರಿಗೆ ಬಣ್ಣ, ಕೈಗೆ ಮೆಹಂದಿ, ಬೆರಳುಗಳಿಗೆ ಹಲವು ಉಂಗುರ ಧರಿಸಿರುವ ಜೊತೆಗೆ ಕೈಯಲ್ಲಿ ಬಂದೂಕು ಹಿಡಿದು, ಬಹು ತೀಕ್ಷಣ ದೃಷ್ಟಿಯಿಂದ ನೋಡುತ್ತಿರುವ ಅಲ್ಲು ಅರ್ಜುನ್ ಅಂದವಾಗಿ ಕಾಣುತ್ತಿರುವ ಜೊತೆಗೆ ಭಯಾನಕವಾಗಿಯೂ ಕಾಣುತ್ತಿದ್ದಾರೆ. ಯಾರನ್ನೋ ಸಂಹರಿಸಲು ಹೊರಟಂತಿದೆ ಅವರ ಅವತಾರ. ಆದರೆ ಈ ಕಾಳಿ ಅವತಾರದಲ್ಲಿಯೂ ಗಡ್ಡ ಹಾಗೆಯೇ ಬಿಟ್ಟಿದ್ದಾರೆ ಅಲ್ಲು.

ಪುಷ್ಪ 2 ಸಿನಿಮಾದ ಪೋಸ್ಟರ್ ಇದಾಗಿದ್ದು, ಸ್ವತಃ ಅಲ್ಲು ಅರ್ಜುನ್ ಈ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಪುಷ್ಪ 2 ಪ್ರಾರಂಭ ಎಂದು ಬರೆದುಕೊಂಡಿದ್ದಾರೆ. ಹಲವರು, ಅಲ್ಲು ಅರ್ಜುನ್​ರ ಈ ಪೋಸ್ಟರ್ ಅನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ ಅಭಿಮಾನಿಗಳು. ದೊಡ್ಡ ಸ್ಟಾರ್ ಆಗಿದ್ದರು ಪಾತ್ರಕ್ಕಾಗಿ ಮಹಿಳೆಯ ಅಥವಾ ದೇವತೆಯ ವೇಷ ಧರಿಸಿರುವುದಕ್ಕೆ ಭರಪೂರ ಮೆಚ್ಚುಗೆಯೂ ವ್ಯಕ್ತವಾಗಿದೆ.

ಇದೇ ದಿನ ಪುಷ್ಪ 2 ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿದ್ದು, ಟೀಸರ್​ನಲ್ಲಿ ಸಿನಿಮಾದ ಕತೆಯ ಬಗ್ಗೆ ಕೆಲವು ಸುಳಿವುಗಳನ್ನು ಬಿಟ್ಟುಕೊಡಲಾಗಿದೆ. ಮೊದಲ ಭಾಗದಲ್ಲಿ ಸಾಮಾನ್ಯ ಕೂಲಿಯವನಾಗಿದ್ದ ಪುಷ್ಪ, ಈಗ ದೊಡ್ಡ ವ್ಯಕ್ತಿಯಾಗಿ ಬೆಳೆದಿದ್ದಾನೆ. ರಕ್ತ ಚಂದನ ಸಾಗಾಣಿಕೆಯಿಂದ ಕೋಟ್ಯಂತರ ಹಣ ಸಂಪಾದನೆ ಮಾಡಿದ್ದಾನೆ. ಆ ಹಣವನ್ನು ಬಡವರ ಏಳ್ಗೆಗಾಗಿ ಖರ್ಚು ಮಾಡಿ ದೊಡ್ಡ ಸಂಖ್ಯೆಯ ಜನರನ್ನು ತನ್ನ ಬೆಂಬಲಿಗರನ್ನಾಗಿ ಮಾಡಿಕೊಂಡಿದ್ದಾನೆ. ಮಕ್ಕಳ ಆಪರೇಷನ್​ಗೆ, ಶಿಕ್ಷಣಕ್ಕೆ ಹಣ ಕೊಟ್ಟಿದ್ದಾನೆ, ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾನೆ. ಆದರೆ ರಾಜಕಾರಣಿಗಳಿಗೆ, ಪೊಲೀಸರಿಗೆ ಮಾಧ್ಯಮದವರಿಗೆ ಅವನು ಸಂಪಾದಿಸಿರುವ ಕೋಟ್ಯಂತರ ಹಣದ ಮೇಲಷ್ಟೆ ಕಣ್ಣು, ಆ ಹಣವನ್ನು ಅವನು ಏನು ಮಾಡಿದ ಎಂಬುದು ಅವರಿಗೆ ಬೇಕಿಲ್ಲ. ಪೊಲೀಸರು ರಾಜಕಾರಣಿಗಳು ಪುಷ್ಪನ ಬೆನ್ನು ಬಿದ್ದಿದ್ದಾರೆ ಇದರ ಫಲಿತವಾಗಿ ಪುಷ್ಪ ಜೈಲು ಸಹ ಸೇರಿದ್ದಾನೆ, ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಸಹ.

ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಹುಟ್ಟುಹಬ್ಬವಿದ್ದು ಇದೇ ಕಾರಣಕ್ಕೆ ಪುಷ್ಪ 2 ಸಿನಿಮಾದ ಟೀಸರ್ ಹಾಗೂ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದ್ದು, ರಶ್ಮಿಕಾ ಮಂದಣ್ಣ ನಾಯಕಿ. ಫಹಾದ್ ಫಾಸಿಲ್ ವಿಲನ್. ಸಿನಿಮಾದಲ್ಲಿ ಡಾಲಿ ಧನಂಜಯ್ ಸಹ ನಟಿಸಿದ್ದಾರೆ. ಸಿನಿಮಾದ ಬಿಡುಗಡೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Fri, 7 April 23

ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ