AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ತುಟಿಗೆ ಬಣ್ಣ, ಕೈಗೆ ಬಳೆ, ಕಿವಿಗೆ ಓಲೆ ಏನಿದು ಅಲ್ಲು ಅರ್ಜುನ್ ಅವತಾರ

Pushpa 2: ತುಟಿಗೆ ಬಣ್ಣ, ಕಿವಿಗೆ ಓಲೆ, ಮೂಗಿಗೆ ಮೂಗುತಿ, ಕೈಗೆ ಬಳೆ, ಮೆಹಂದಿ ಏನಿದು ಅಲ್ಲು ಅರ್ಜುನ್ ಅವತಾರ?

Pushpa 2: ತುಟಿಗೆ ಬಣ್ಣ, ಕೈಗೆ ಬಳೆ, ಕಿವಿಗೆ ಓಲೆ ಏನಿದು ಅಲ್ಲು ಅರ್ಜುನ್ ಅವತಾರ
ಪುಷ್ಪ 2
ಮಂಜುನಾಥ ಸಿ.
|

Updated on:Apr 07, 2023 | 9:01 PM

Share

ಅಲ್ಲು ಅರ್ಜುನ್ (Allu Arjun) ಹುಟ್ಟುಹಬ್ಬದ (Birthday) ಪ್ರಯುಕ್ತ ಅವರ ನಟನೆಯ ಬಹುನಿರೀಕ್ಷಿತ ಸಿನಿಮಾ ಪುಷ್ಪ 2 (Pushpa 2) ನ ಟೀಸರ್ ಬಿಡುಗಡೆ ಆಗಿ ಭಾರಿ ಸದ್ದು ಮಾಡುತ್ತಿದೆ. ಟೀಸರ್ ಜೊತೆಗೆ ಪೋಸ್ಟರ್ ಒಂದನ್ನು ಸಹ ಚಿತ್ರತಂಡ ಬಿಡುಗಡೆ ಮಾಡಿದ್ದು, ಪೋಸ್ಟರ್​ನಲ್ಲಿ ಅಲ್ಲು ಅರ್ಜುನ್ ಅವತಾರ ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸ್ಟೈಲಿಷ್ ಸ್ಟಾರ್ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಅಲ್ಲು ಅರ್ಜುನ್, ಪುಷ್ಪ 2 ಸಿನಿಮಾದ ಪೋಸ್ಟರ್​ನಲ್ಲಿ ಮಹಿಳೆಯ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಅದೂ ಸಾಮಾನ್ಯ ಮಹಿಳೆಯಲ್ಲ, ಶಕ್ತಿದೇವತೆ ಕಾಳಿಯ ಅವತಾರದಲ್ಲಿ!

ಮೂಗಿಗೆ ಮೂಗುತಿ, ನತ್ತು, ಕಿವಿಯಲ್ಲಿ ತೂಗಾಡುವ ಓಲೆ, ತುಟಿಗೆ ಕೆಂಪು ಬಣ್ಣದ ಲಿಪ್​ಸ್ಟಿಕ್ಕು, ತೋಳಿಗೆ ತೋಳುಬಂಧಿ, ಕೊರಳಿಗೆ ಎರಡೆರಡು ಸರ ಜೊತೆಗೆ ನಿಂಬೆ ಹಾರ, ಕೆಂಪು ಬಣ್ಣದ ರವಿಕೆ, ಅದರ ಮೇಲೆ ನೀಲಿ ಸೀರೆ, ಕೈಗೆ ಕೆಂಪು ಬಳೆ, ಉಗುರಿಗೆ ಬಣ್ಣ, ಕೈಗೆ ಮೆಹಂದಿ, ಬೆರಳುಗಳಿಗೆ ಹಲವು ಉಂಗುರ ಧರಿಸಿರುವ ಜೊತೆಗೆ ಕೈಯಲ್ಲಿ ಬಂದೂಕು ಹಿಡಿದು, ಬಹು ತೀಕ್ಷಣ ದೃಷ್ಟಿಯಿಂದ ನೋಡುತ್ತಿರುವ ಅಲ್ಲು ಅರ್ಜುನ್ ಅಂದವಾಗಿ ಕಾಣುತ್ತಿರುವ ಜೊತೆಗೆ ಭಯಾನಕವಾಗಿಯೂ ಕಾಣುತ್ತಿದ್ದಾರೆ. ಯಾರನ್ನೋ ಸಂಹರಿಸಲು ಹೊರಟಂತಿದೆ ಅವರ ಅವತಾರ. ಆದರೆ ಈ ಕಾಳಿ ಅವತಾರದಲ್ಲಿಯೂ ಗಡ್ಡ ಹಾಗೆಯೇ ಬಿಟ್ಟಿದ್ದಾರೆ ಅಲ್ಲು.

ಪುಷ್ಪ 2 ಸಿನಿಮಾದ ಪೋಸ್ಟರ್ ಇದಾಗಿದ್ದು, ಸ್ವತಃ ಅಲ್ಲು ಅರ್ಜುನ್ ಈ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಪುಷ್ಪ 2 ಪ್ರಾರಂಭ ಎಂದು ಬರೆದುಕೊಂಡಿದ್ದಾರೆ. ಹಲವರು, ಅಲ್ಲು ಅರ್ಜುನ್​ರ ಈ ಪೋಸ್ಟರ್ ಅನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ ಅಭಿಮಾನಿಗಳು. ದೊಡ್ಡ ಸ್ಟಾರ್ ಆಗಿದ್ದರು ಪಾತ್ರಕ್ಕಾಗಿ ಮಹಿಳೆಯ ಅಥವಾ ದೇವತೆಯ ವೇಷ ಧರಿಸಿರುವುದಕ್ಕೆ ಭರಪೂರ ಮೆಚ್ಚುಗೆಯೂ ವ್ಯಕ್ತವಾಗಿದೆ.

ಇದೇ ದಿನ ಪುಷ್ಪ 2 ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿದ್ದು, ಟೀಸರ್​ನಲ್ಲಿ ಸಿನಿಮಾದ ಕತೆಯ ಬಗ್ಗೆ ಕೆಲವು ಸುಳಿವುಗಳನ್ನು ಬಿಟ್ಟುಕೊಡಲಾಗಿದೆ. ಮೊದಲ ಭಾಗದಲ್ಲಿ ಸಾಮಾನ್ಯ ಕೂಲಿಯವನಾಗಿದ್ದ ಪುಷ್ಪ, ಈಗ ದೊಡ್ಡ ವ್ಯಕ್ತಿಯಾಗಿ ಬೆಳೆದಿದ್ದಾನೆ. ರಕ್ತ ಚಂದನ ಸಾಗಾಣಿಕೆಯಿಂದ ಕೋಟ್ಯಂತರ ಹಣ ಸಂಪಾದನೆ ಮಾಡಿದ್ದಾನೆ. ಆ ಹಣವನ್ನು ಬಡವರ ಏಳ್ಗೆಗಾಗಿ ಖರ್ಚು ಮಾಡಿ ದೊಡ್ಡ ಸಂಖ್ಯೆಯ ಜನರನ್ನು ತನ್ನ ಬೆಂಬಲಿಗರನ್ನಾಗಿ ಮಾಡಿಕೊಂಡಿದ್ದಾನೆ. ಮಕ್ಕಳ ಆಪರೇಷನ್​ಗೆ, ಶಿಕ್ಷಣಕ್ಕೆ ಹಣ ಕೊಟ್ಟಿದ್ದಾನೆ, ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾನೆ. ಆದರೆ ರಾಜಕಾರಣಿಗಳಿಗೆ, ಪೊಲೀಸರಿಗೆ ಮಾಧ್ಯಮದವರಿಗೆ ಅವನು ಸಂಪಾದಿಸಿರುವ ಕೋಟ್ಯಂತರ ಹಣದ ಮೇಲಷ್ಟೆ ಕಣ್ಣು, ಆ ಹಣವನ್ನು ಅವನು ಏನು ಮಾಡಿದ ಎಂಬುದು ಅವರಿಗೆ ಬೇಕಿಲ್ಲ. ಪೊಲೀಸರು ರಾಜಕಾರಣಿಗಳು ಪುಷ್ಪನ ಬೆನ್ನು ಬಿದ್ದಿದ್ದಾರೆ ಇದರ ಫಲಿತವಾಗಿ ಪುಷ್ಪ ಜೈಲು ಸಹ ಸೇರಿದ್ದಾನೆ, ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಸಹ.

ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಹುಟ್ಟುಹಬ್ಬವಿದ್ದು ಇದೇ ಕಾರಣಕ್ಕೆ ಪುಷ್ಪ 2 ಸಿನಿಮಾದ ಟೀಸರ್ ಹಾಗೂ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದ್ದು, ರಶ್ಮಿಕಾ ಮಂದಣ್ಣ ನಾಯಕಿ. ಫಹಾದ್ ಫಾಸಿಲ್ ವಿಲನ್. ಸಿನಿಮಾದಲ್ಲಿ ಡಾಲಿ ಧನಂಜಯ್ ಸಹ ನಟಿಸಿದ್ದಾರೆ. ಸಿನಿಮಾದ ಬಿಡುಗಡೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Fri, 7 April 23

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ