AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

Pushpa Movie Success Meet: ‘ನೀವಿಲ್ಲದೇ ನಾನಿಲ್ಲ ಡಾರ್ಲಿಂಗ್​’ ಎಂದು ಹೇಳುತ್ತ ಅಲ್ಲು ಅರ್ಜುನ್​ ಆನಂದಭಾಷ್ಪ ಸುರಿಸಿದರು. ಆ ವೇಳೆ ನಿರ್ದೇಶಕ ಸುಕುಮಾರ್​ ಕೂಡ ಎಮೋಷನಲ್​ ಆದರು.

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?
ಅಲ್ಲು ಅರ್ಜುನ್​
TV9 Web
| Edited By: |

Updated on: Dec 29, 2021 | 9:36 AM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ನಟಿಸಿದ ‘ಪುಷ್ಪ’ ಸಿನಿಮಾ (Pushpa Movie) ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ರಶ್ಮಿಕಾ ಮಂದಣ್ಣ (Rashmika Mandanna) ಜೋಡಿ. ಕರ್ನಾಟಕದಲ್ಲೂ ‘ಪುಷ್ಪ’ ಚಿತ್ರ ಉತ್ತಮ ಕಮಾಯಿ ಮಾಡಿದೆ. ನಿರ್ದೇಶಕ ಸುಕುಮಾರ್​ (Sukumar) ಅವರು ಈ ಸಿನಿಮಾ ಮೂಲಕ ಮತ್ತೊಂದು ಗೆಲುವು ಪಡೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ಮಂಗಳವಾರ (ಡಿ.27) ಸಕ್ಸಸ್​ ಮೀಟ್​ ಆಯೋಜಿಸಲಾಗಿತ್ತು. ಎಲ್ಲರೂ ನೆರೆದಿದ್ದ ಆ ಕಾರ್ಯುಕ್ರಮದಲ್ಲಿ ಅಲ್ಲು ಅರ್ಜುನ್​ ಅವರು ಸಖತ್​ ಎಮೋಷನಲ್​ ಆದರು. ಆ ವಿಡಿಯೋ ಕೂಡ ಈಗ ವೈರಲ್​ ಆಗುತ್ತಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ’ ಸಿನಿಮಾದ ಥ್ಯಾಂಕ್ಸ್​ ಮೀಟ್​ನಲ್ಲಿ ಕಣ್ಣೀರು ಹಾಕಿದ್ದಾರೆ. ಈ ವೇದಿಕೆಯಲ್ಲಿ ಅವರು 40 ನಿಮಿಷಕ್ಕೂ ಹೆಚ್ಚು ಕಾಲ ಮಾತನಾಡಿದರು. ತಮ್ಮ ಗೆಲುವಿಗೆ ಕಾರಣರಾದ ಎಲ್ಲರನ್ನೂ ಅವರು ನೆನಪಿಸಿಕೊಂಡರು. ‘ಕಳೆದ ಎರಡು ವರ್ಷ ತುಂಬ ಕಠಿಣವಾಗಿತ್ತು. ನಿಮ್ಮೆಲ್ಲರಿಗೂ ಧನ್ಯವಾದ ಹೇಳಬೇಕು ಎಂದು ನಾನು ಈ ಕ್ಷಣಕ್ಕಾಗಿ ಕಾದಿದ್ದೆ. ಇನ್ಮುಂದೆ ನನ್ನ ಸಿನಿಮಾ ಸೋತರೂ ಸಹ ನಾನು ಥ್ಯಾಂಕ್ಸ್​ ಮೀಟ್​ ಆಯೋಜಿಸುತ್ತೇನೆ. ಯಾಕೆಂದರೆ ಸೋತ ಚಿತ್ರದ ಹಿಂದೆಯೂ ತಂಡದ ಶ್ರಮ ಇರುತ್ತದೆ’ ಎಂದು ಅಲ್ಲು ಅರ್ಜುನ್​ ಹೇಳಿದರು.

ಅಲ್ಲು ಅರ್ಜುನ್​ ಅವರ ವೃತ್ತಿಜೀವನದಲ್ಲಿ ನಿರ್ದೇಶಕ ಸುಕುಮಾರ್​ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಆ ಕಾರಣಕ್ಕಾಗಿ ಸುಕುಮಾರ್​ ಅವರನ್ನು ಕಂಡರೆ ಅಲ್ಲು ಅರ್ಜುನ್​ಗೆ ವಿಶೇಷ ಗೌರವ. ಅದನ್ನು ‘ಪುಷ್ಪ’ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ಅಲ್ಲು ಅರ್ಜುನ್​ ನೆನಪಿಸಿಕೊಂಡರು. ಆ ವೇಳೆ ಅವರು ಸಖತ್​ ಎಮೋಷನಲ್​ ಆಗಿದ್ದರು. ಸುಕುಮಾರ್​ ನಿರ್ದೇಶನ ಮಾಡಿದ್ದ ಅಲ್ಲು ಅರ್ಜುನ್​ ಅವರ ‘ಆರ್ಯ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಗೆಲುವಿನ ಬಳಿಕ ಅಲ್ಲು ಅರ್ಜುನ್​ ಅವರು 85 ಲಕ್ಷ ರೂ. ಬೆಲೆಯ ಸ್ಪೋರ್ಟ್ಸ್​ ಕಾರು ಖರೀದಿಸಿದ್ದರು.

‘ಆ ಕಾರಿನ ಸ್ಟೇರಿಂಗ್​ ಹಿಡಿದಾಗ ನಾನು ಸುಕುಮಾರ್​ ಅವರನ್ನು ನೆನಪು ಮಾಡಿಕೊಂಡೆ. ಯಾಕೆಂದರೆ ನನ್ನ ಗೆಲುವಿಗೆ ಅವರೇ ಕಾರಣ’ ಎಂದು ಅಲ್ಲು ಅರ್ಜುನ್​ ಹೇಳಿದರು. ಅಲ್ಲದೇ, ಸುಕುಮಾರ್​ ಕಡೆಗೆ ತಿರುಗಿ ‘ನೀವಿಲ್ಲದೇ ನಾನಿಲ್ಲ ಡಾರ್ಲಿಂಗ್​’ ಎಂದು ಹೇಳುತ್ತ ಆನಂದಭಾಷ್ಪ ಸುರಿಸಿದರು. ಆ ವೇಳೆ ಸುಕುಮಾರ್​ ಕೂಡ ಎಮೋಷನಲ್​ ಆದರು.

‘ಪುಷ್ಪ’ ಚಿತ್ರದ 2ನೇ ಪಾರ್ಟ್​ ಮೇಲೆ ಭಾರಿ ನಿರೀಕ್ಷೆ ಮೂಡಿದೆ. ಆ ಚಿತ್ರವನ್ನು ಇನ್ನಷ್ಟು ಹೆಚ್ಚಿನ ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ:

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್