AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

Pushpa Movie Success Meet: ‘ನೀವಿಲ್ಲದೇ ನಾನಿಲ್ಲ ಡಾರ್ಲಿಂಗ್​’ ಎಂದು ಹೇಳುತ್ತ ಅಲ್ಲು ಅರ್ಜುನ್​ ಆನಂದಭಾಷ್ಪ ಸುರಿಸಿದರು. ಆ ವೇಳೆ ನಿರ್ದೇಶಕ ಸುಕುಮಾರ್​ ಕೂಡ ಎಮೋಷನಲ್​ ಆದರು.

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?
ಅಲ್ಲು ಅರ್ಜುನ್​
TV9 Web
| Edited By: |

Updated on: Dec 29, 2021 | 9:36 AM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ನಟಿಸಿದ ‘ಪುಷ್ಪ’ ಸಿನಿಮಾ (Pushpa Movie) ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ರಶ್ಮಿಕಾ ಮಂದಣ್ಣ (Rashmika Mandanna) ಜೋಡಿ. ಕರ್ನಾಟಕದಲ್ಲೂ ‘ಪುಷ್ಪ’ ಚಿತ್ರ ಉತ್ತಮ ಕಮಾಯಿ ಮಾಡಿದೆ. ನಿರ್ದೇಶಕ ಸುಕುಮಾರ್​ (Sukumar) ಅವರು ಈ ಸಿನಿಮಾ ಮೂಲಕ ಮತ್ತೊಂದು ಗೆಲುವು ಪಡೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ಮಂಗಳವಾರ (ಡಿ.27) ಸಕ್ಸಸ್​ ಮೀಟ್​ ಆಯೋಜಿಸಲಾಗಿತ್ತು. ಎಲ್ಲರೂ ನೆರೆದಿದ್ದ ಆ ಕಾರ್ಯುಕ್ರಮದಲ್ಲಿ ಅಲ್ಲು ಅರ್ಜುನ್​ ಅವರು ಸಖತ್​ ಎಮೋಷನಲ್​ ಆದರು. ಆ ವಿಡಿಯೋ ಕೂಡ ಈಗ ವೈರಲ್​ ಆಗುತ್ತಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ’ ಸಿನಿಮಾದ ಥ್ಯಾಂಕ್ಸ್​ ಮೀಟ್​ನಲ್ಲಿ ಕಣ್ಣೀರು ಹಾಕಿದ್ದಾರೆ. ಈ ವೇದಿಕೆಯಲ್ಲಿ ಅವರು 40 ನಿಮಿಷಕ್ಕೂ ಹೆಚ್ಚು ಕಾಲ ಮಾತನಾಡಿದರು. ತಮ್ಮ ಗೆಲುವಿಗೆ ಕಾರಣರಾದ ಎಲ್ಲರನ್ನೂ ಅವರು ನೆನಪಿಸಿಕೊಂಡರು. ‘ಕಳೆದ ಎರಡು ವರ್ಷ ತುಂಬ ಕಠಿಣವಾಗಿತ್ತು. ನಿಮ್ಮೆಲ್ಲರಿಗೂ ಧನ್ಯವಾದ ಹೇಳಬೇಕು ಎಂದು ನಾನು ಈ ಕ್ಷಣಕ್ಕಾಗಿ ಕಾದಿದ್ದೆ. ಇನ್ಮುಂದೆ ನನ್ನ ಸಿನಿಮಾ ಸೋತರೂ ಸಹ ನಾನು ಥ್ಯಾಂಕ್ಸ್​ ಮೀಟ್​ ಆಯೋಜಿಸುತ್ತೇನೆ. ಯಾಕೆಂದರೆ ಸೋತ ಚಿತ್ರದ ಹಿಂದೆಯೂ ತಂಡದ ಶ್ರಮ ಇರುತ್ತದೆ’ ಎಂದು ಅಲ್ಲು ಅರ್ಜುನ್​ ಹೇಳಿದರು.

ಅಲ್ಲು ಅರ್ಜುನ್​ ಅವರ ವೃತ್ತಿಜೀವನದಲ್ಲಿ ನಿರ್ದೇಶಕ ಸುಕುಮಾರ್​ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಆ ಕಾರಣಕ್ಕಾಗಿ ಸುಕುಮಾರ್​ ಅವರನ್ನು ಕಂಡರೆ ಅಲ್ಲು ಅರ್ಜುನ್​ಗೆ ವಿಶೇಷ ಗೌರವ. ಅದನ್ನು ‘ಪುಷ್ಪ’ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ಅಲ್ಲು ಅರ್ಜುನ್​ ನೆನಪಿಸಿಕೊಂಡರು. ಆ ವೇಳೆ ಅವರು ಸಖತ್​ ಎಮೋಷನಲ್​ ಆಗಿದ್ದರು. ಸುಕುಮಾರ್​ ನಿರ್ದೇಶನ ಮಾಡಿದ್ದ ಅಲ್ಲು ಅರ್ಜುನ್​ ಅವರ ‘ಆರ್ಯ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಗೆಲುವಿನ ಬಳಿಕ ಅಲ್ಲು ಅರ್ಜುನ್​ ಅವರು 85 ಲಕ್ಷ ರೂ. ಬೆಲೆಯ ಸ್ಪೋರ್ಟ್ಸ್​ ಕಾರು ಖರೀದಿಸಿದ್ದರು.

‘ಆ ಕಾರಿನ ಸ್ಟೇರಿಂಗ್​ ಹಿಡಿದಾಗ ನಾನು ಸುಕುಮಾರ್​ ಅವರನ್ನು ನೆನಪು ಮಾಡಿಕೊಂಡೆ. ಯಾಕೆಂದರೆ ನನ್ನ ಗೆಲುವಿಗೆ ಅವರೇ ಕಾರಣ’ ಎಂದು ಅಲ್ಲು ಅರ್ಜುನ್​ ಹೇಳಿದರು. ಅಲ್ಲದೇ, ಸುಕುಮಾರ್​ ಕಡೆಗೆ ತಿರುಗಿ ‘ನೀವಿಲ್ಲದೇ ನಾನಿಲ್ಲ ಡಾರ್ಲಿಂಗ್​’ ಎಂದು ಹೇಳುತ್ತ ಆನಂದಭಾಷ್ಪ ಸುರಿಸಿದರು. ಆ ವೇಳೆ ಸುಕುಮಾರ್​ ಕೂಡ ಎಮೋಷನಲ್​ ಆದರು.

‘ಪುಷ್ಪ’ ಚಿತ್ರದ 2ನೇ ಪಾರ್ಟ್​ ಮೇಲೆ ಭಾರಿ ನಿರೀಕ್ಷೆ ಮೂಡಿದೆ. ಆ ಚಿತ್ರವನ್ನು ಇನ್ನಷ್ಟು ಹೆಚ್ಚಿನ ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ:

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ