AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

Pushpa Movie Success Meet: ‘ನೀವಿಲ್ಲದೇ ನಾನಿಲ್ಲ ಡಾರ್ಲಿಂಗ್​’ ಎಂದು ಹೇಳುತ್ತ ಅಲ್ಲು ಅರ್ಜುನ್​ ಆನಂದಭಾಷ್ಪ ಸುರಿಸಿದರು. ಆ ವೇಳೆ ನಿರ್ದೇಶಕ ಸುಕುಮಾರ್​ ಕೂಡ ಎಮೋಷನಲ್​ ಆದರು.

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?
ಅಲ್ಲು ಅರ್ಜುನ್​
TV9 Web
| Edited By: |

Updated on: Dec 29, 2021 | 9:36 AM

Share

ನಟ ಅಲ್ಲು ಅರ್ಜುನ್​ (Allu Arjun) ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ನಟಿಸಿದ ‘ಪುಷ್ಪ’ ಸಿನಿಮಾ (Pushpa Movie) ನೂರಾರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ಗೆ ರಶ್ಮಿಕಾ ಮಂದಣ್ಣ (Rashmika Mandanna) ಜೋಡಿ. ಕರ್ನಾಟಕದಲ್ಲೂ ‘ಪುಷ್ಪ’ ಚಿತ್ರ ಉತ್ತಮ ಕಮಾಯಿ ಮಾಡಿದೆ. ನಿರ್ದೇಶಕ ಸುಕುಮಾರ್​ (Sukumar) ಅವರು ಈ ಸಿನಿಮಾ ಮೂಲಕ ಮತ್ತೊಂದು ಗೆಲುವು ಪಡೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ಮಂಗಳವಾರ (ಡಿ.27) ಸಕ್ಸಸ್​ ಮೀಟ್​ ಆಯೋಜಿಸಲಾಗಿತ್ತು. ಎಲ್ಲರೂ ನೆರೆದಿದ್ದ ಆ ಕಾರ್ಯುಕ್ರಮದಲ್ಲಿ ಅಲ್ಲು ಅರ್ಜುನ್​ ಅವರು ಸಖತ್​ ಎಮೋಷನಲ್​ ಆದರು. ಆ ವಿಡಿಯೋ ಕೂಡ ಈಗ ವೈರಲ್​ ಆಗುತ್ತಿದೆ.

ಅಲ್ಲು ಅರ್ಜುನ್ ಅವರು ‘ಪುಷ್ಪ’ ಸಿನಿಮಾದ ಥ್ಯಾಂಕ್ಸ್​ ಮೀಟ್​ನಲ್ಲಿ ಕಣ್ಣೀರು ಹಾಕಿದ್ದಾರೆ. ಈ ವೇದಿಕೆಯಲ್ಲಿ ಅವರು 40 ನಿಮಿಷಕ್ಕೂ ಹೆಚ್ಚು ಕಾಲ ಮಾತನಾಡಿದರು. ತಮ್ಮ ಗೆಲುವಿಗೆ ಕಾರಣರಾದ ಎಲ್ಲರನ್ನೂ ಅವರು ನೆನಪಿಸಿಕೊಂಡರು. ‘ಕಳೆದ ಎರಡು ವರ್ಷ ತುಂಬ ಕಠಿಣವಾಗಿತ್ತು. ನಿಮ್ಮೆಲ್ಲರಿಗೂ ಧನ್ಯವಾದ ಹೇಳಬೇಕು ಎಂದು ನಾನು ಈ ಕ್ಷಣಕ್ಕಾಗಿ ಕಾದಿದ್ದೆ. ಇನ್ಮುಂದೆ ನನ್ನ ಸಿನಿಮಾ ಸೋತರೂ ಸಹ ನಾನು ಥ್ಯಾಂಕ್ಸ್​ ಮೀಟ್​ ಆಯೋಜಿಸುತ್ತೇನೆ. ಯಾಕೆಂದರೆ ಸೋತ ಚಿತ್ರದ ಹಿಂದೆಯೂ ತಂಡದ ಶ್ರಮ ಇರುತ್ತದೆ’ ಎಂದು ಅಲ್ಲು ಅರ್ಜುನ್​ ಹೇಳಿದರು.

ಅಲ್ಲು ಅರ್ಜುನ್​ ಅವರ ವೃತ್ತಿಜೀವನದಲ್ಲಿ ನಿರ್ದೇಶಕ ಸುಕುಮಾರ್​ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಆ ಕಾರಣಕ್ಕಾಗಿ ಸುಕುಮಾರ್​ ಅವರನ್ನು ಕಂಡರೆ ಅಲ್ಲು ಅರ್ಜುನ್​ಗೆ ವಿಶೇಷ ಗೌರವ. ಅದನ್ನು ‘ಪುಷ್ಪ’ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ಅಲ್ಲು ಅರ್ಜುನ್​ ನೆನಪಿಸಿಕೊಂಡರು. ಆ ವೇಳೆ ಅವರು ಸಖತ್​ ಎಮೋಷನಲ್​ ಆಗಿದ್ದರು. ಸುಕುಮಾರ್​ ನಿರ್ದೇಶನ ಮಾಡಿದ್ದ ಅಲ್ಲು ಅರ್ಜುನ್​ ಅವರ ‘ಆರ್ಯ’ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಗೆಲುವಿನ ಬಳಿಕ ಅಲ್ಲು ಅರ್ಜುನ್​ ಅವರು 85 ಲಕ್ಷ ರೂ. ಬೆಲೆಯ ಸ್ಪೋರ್ಟ್ಸ್​ ಕಾರು ಖರೀದಿಸಿದ್ದರು.

‘ಆ ಕಾರಿನ ಸ್ಟೇರಿಂಗ್​ ಹಿಡಿದಾಗ ನಾನು ಸುಕುಮಾರ್​ ಅವರನ್ನು ನೆನಪು ಮಾಡಿಕೊಂಡೆ. ಯಾಕೆಂದರೆ ನನ್ನ ಗೆಲುವಿಗೆ ಅವರೇ ಕಾರಣ’ ಎಂದು ಅಲ್ಲು ಅರ್ಜುನ್​ ಹೇಳಿದರು. ಅಲ್ಲದೇ, ಸುಕುಮಾರ್​ ಕಡೆಗೆ ತಿರುಗಿ ‘ನೀವಿಲ್ಲದೇ ನಾನಿಲ್ಲ ಡಾರ್ಲಿಂಗ್​’ ಎಂದು ಹೇಳುತ್ತ ಆನಂದಭಾಷ್ಪ ಸುರಿಸಿದರು. ಆ ವೇಳೆ ಸುಕುಮಾರ್​ ಕೂಡ ಎಮೋಷನಲ್​ ಆದರು.

‘ಪುಷ್ಪ’ ಚಿತ್ರದ 2ನೇ ಪಾರ್ಟ್​ ಮೇಲೆ ಭಾರಿ ನಿರೀಕ್ಷೆ ಮೂಡಿದೆ. ಆ ಚಿತ್ರವನ್ನು ಇನ್ನಷ್ಟು ಹೆಚ್ಚಿನ ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಅಲ್ಲು ಅರ್ಜುನ್ ಹೇಳಿದ್ದಾರೆ.

ಇದನ್ನೂ ಓದಿ:

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

Follow Us
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ