AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿಸು ಮರೆತು ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ ಅಲ್ಲು ಅರ್ಜುನ್

ಹಳೆಯ ಮುನಿಸು ಮರೆತು ನಟ ಅಲ್ಲು ಅರ್ಜುನ್, ಪವನ್ ಕಲ್ಯಾಣ್​ರ ಚುನಾವಣಾ ಪಯಣಕ್ಕೆ ಶುಭ ಹಾರೈಸಿದ್ದಾರೆ. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.

ಮುನಿಸು ಮರೆತು ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ ಅಲ್ಲು ಅರ್ಜುನ್
ಮಂಜುನಾಥ ಸಿ.
|

Updated on: May 10, 2024 | 12:52 PM

Share

ನಟ ಅಲ್ಲು ಅರ್ಜುನ್ (Allu Arjun) ಈಗ ತೆಲುಗು ಚಿತ್ರರಂಗದ ಸ್ಟಾರ್ ನಟ. ಮೆಗಾಸ್ಟಾರ್ ಕುಟುಂಬಕ್ಕೆ ಸೇರಿದ ಅಲ್ಲು ಅರ್ಜುನ್, ಕುಟುಂಬದ ಇತರೆ ಸದಸ್ಯರೊಡನೆ ಉತ್ತಮ ಬಂಧ ಹೊಂದಿದ್ದಾರೆ. ಇದೀಗ ಮೆಗಾಸ್ಟಾರ್ ಕುಟುಂಬದ ಪವನ್ ಕಲ್ಯಾಣ್ ಚುನಾವಣೆಗೆ ನಿಂತಿದ್ದು, ಆಂಧ್ರ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸಿದ್ದಾರೆ. ಪವನ್ ಕಲ್ಯಾಣ್​ಗೆ ನಟ ಮೆಗಾಸ್ಟಾರ್ ಚಿರಂಜೀವಿ, ಅವರ ಪುತ್ರ ರಾಮ್​ ಚರಣ್ ಸೇರಿದಂತೆ ಇನ್ನೂ ಕೆಲವರು ಬೆಂಬಲ ಸೂಚಿಸಿದ್ದಾರೆ. ಆದರೆ ಅಲ್ಲು ಅರ್ಜುನ್ ಮಾತ್ರ ಪವನ್ ರಾಜಕೀಯದ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಈಗ ಹಳೆಯದೆಲ್ಲವನ್ನೂ ಮರೆತು ಅಲ್ಲು ಅರ್ಜುನ್ ತಮ್ಮ ಮಾವ ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ್ದಾರೆ.

ಮೆಗಾಸ್ಟಾರ್ ಕುಟುಂಬದಲ್ಲಿ ಈಗ ಎಲ್ಲವೂ ಸರಿಯಾಗಿದೆಯಾದರೂ ಕೆಲ ವರ್ಷದ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಅದಕ್ಕೆ ಕಾರಣವಾಗಿದ್ದು ಸ್ವತಃ ಪವನ್ ಕಲ್ಯಾಣ್ ಅವರೇ. ಪವನ್ ಕಲ್ಯಾಣ್, ತಮ್ಮ ಅಣ್ಣ ಚಿರಂಜೀವಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಣ್ಣನ ವಿರುದ್ಧ ಒಂದೆರಡು ಹೇಳಿಕೆಗಳನ್ನು ಸಹ ನೀಡಿದ್ದರು. ಕಾರ್ಯಕ್ರಮವೊಂದರಲ್ಲಿ ಪವನ್ ಅಭಿಮಾನಿಗಳು, ಚಿರಂಜೀವಿಗೆ ಅವಮಾನವಾಗುವಂತೆ ನಡೆದುಕೊಂಡಿದ್ದರು.

ಅದಾದ ಕೆಲವು ದಿನಗಳ ಬಳಿಕ ನಡೆದ ಅಲ್ಲು ಅರ್ಜುನ್​ರ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಸಹ ಪವನ್ ಅಭಿಮಾನಿಗಳು ಪವನ್ ಪರವಾಗಿ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸಿದ್ದರು. ಅಲ್ಲು ಅರ್ಜುನ್ ಅನ್ನು ಪವನ್ ಬಗ್ಗೆ ಮಾತನಾಡುವಂತೆ ಒತ್ತಾಯಿಸಿದ್ದರು. ಅಂದು ಅಲ್ಲು ಅರ್ಜುನ್ ಬಹಿರಂಗವಾಗಿ ‘ನಾನು ಅವರ ಬಗ್ಗೆ ಮಾತನಾಡುವುದಿಲ್ಲ’ ಎನ್ನುವ ಮೂಲಕ ತಮ್ಮ ಬೆಂಬಲ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಎಂಬ ಸಂದೇಶ ರವಾನಿಸಿದ್ದರು.

ಇದನ್ನೂ ಓದಿ:‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ

ಬಳಿಕ ಮೆಗಾಸ್ಟಾರ್ ಕುಟುಂಬದಲ್ಲಿ ಎಲ್ಲವೂ ಸರಿಹೋಯ್ತು. ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಮತ್ತೆ ಒಂದಾದರು. ಇದೀಗ ತಮ್ಮನ ರಾಜಕೀಯ ಪಯಣಕ್ಕೆ ಚಿರಂಜೀವಿ ಸಹ ಬೆಂಬಲ ಕೋರಿದರು. ರಾಮ್ ಚರಣ್ ಸಹ ಎಲ್ಲವನ್ನೂ ಮರೆತು ಚಿಕ್ಕಪ್ಪನ ಪರವಾಗಿ ಹೇಳಿಕೆಗಳನ್ನು ನೀಡಿದರು. ಒಟ್ಟಿಗೆ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡರು. ಆದರೆ ಅಲ್ಲು ಅರ್ಜುನ್ ಮಾತ್ರ ಪವನ್ ಕಲ್ಯಾಣ್ ಜೊತೆ ಕಾಣಿಸಿಕೊಂಡಿರಲಿಲ್ಲ. ಇದು ಅಭಿಮಾನಿಗಳಲ್ಲಿ ಅನುಮಾನಕ್ಕೆ ಕಾರಣವಾಗಿತ್ತು. ಆದರೆ ಈಗ ಹಳೆಯ ಮುನಿಸು ಮರೆತು ಅಲ್ಲು ಅರ್ಜುನ್, ಪವನ್ ಕಲ್ಯಾಣ್ ಪರವಾಗಿ ಟ್ವೀಟ್ ಮಾಡಿದ್ದಾರೆ.

‘ನಿಮ್ಮ ಚುನಾವಣಾ ಪಯಣ ಯಶಸ್ವಿಯಾಗಲಿ ಎಂದು ನಾನು ಹೃದಯಪೂರ್ವಕವಾಗಿ ಆಶಿಸುತ್ತೇನೆ. ಸೇವೆಗಾಗಿ ನಿಮ್ಮ ಜೀವನವನ್ನು ಮುಡಿಪಾಗಿಟ್ಟು ನೀವು ಆರಿಸಿಕೊಂಡ ಮಾರ್ಗದ ಬಗ್ಗೆ ನಾನು ಯಾವಾಗಲೂ ಹೆಮ್ಮೆಪಡುತ್ತೇನೆ. ಕುಟುಂಬದ ಸದಸ್ಯನಾಗಿ, ನನ್ನ ಪ್ರೀತಿ ಮತ್ತು ಬೆಂಬಲ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ನೀವು ಬಯಸುವ ಎಲ್ಲವನ್ನೂ ಸಾಧಿಸಲಿ ಎಂದು ಆಶಿಸುತ್ತೇನೆ’ ಎಂದಿದ್ದಾರೆ ಅಲ್ಲು ಅರ್ಜುನ್.

ಜನಸೇನಾ ರಾಜಕೀಯ ಪಕ್ಷದ ಸ್ಥಾಪಕರಾಗಿರುವ ಪವನ್ ಕಲ್ಯಾಣ್, ಆಂಧ್ರ ವಿಧಾನಸಭೆ ಚುನಾವಣೆಗೆ ಪೀಠಾಪುರಂನಿಂದ ಸ್ಪರ್ಧಿಸಿದ್ದಾರೆ. ಜನಸೇನಾ ಪಕ್ಷ ಈ ಬಾರಿ ಟಿಡಿಪಿ ಹಾಗೂ ಬಿಜೆಪಿ ಜೊತೆ ಕೈಜೋಡಿಸಿ ಚುನಾವಣೆ ಎದುರಿಸುತ್ತಿದೆ. ಆಂಧ್ರದ ಹಾಲಿ ಜಗನ್ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಪಣತೊಟ್ಟು ಪವನ್ ಕಲ್ಯಾಣ್ ಸತತ ಪ್ರಚಾರ ಸಭೆಗಳನ್ನು ಮಾಡುತ್ತಿದ್ದಾರೆ. ಈ ಬಾರಿ ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಪಕ್ಷ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆ ಇದೆಯೆಂದು ವಿಶ್ಲೇಷಕರು ಲೆಕ್ಕ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ