ಮುನಿಸು ಮರೆತು ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ ಅಲ್ಲು ಅರ್ಜುನ್

ಹಳೆಯ ಮುನಿಸು ಮರೆತು ನಟ ಅಲ್ಲು ಅರ್ಜುನ್, ಪವನ್ ಕಲ್ಯಾಣ್​ರ ಚುನಾವಣಾ ಪಯಣಕ್ಕೆ ಶುಭ ಹಾರೈಸಿದ್ದಾರೆ. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.

ಮುನಿಸು ಮರೆತು ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ ಅಲ್ಲು ಅರ್ಜುನ್
Follow us
|

Updated on: May 10, 2024 | 12:52 PM

ನಟ ಅಲ್ಲು ಅರ್ಜುನ್ (Allu Arjun) ಈಗ ತೆಲುಗು ಚಿತ್ರರಂಗದ ಸ್ಟಾರ್ ನಟ. ಮೆಗಾಸ್ಟಾರ್ ಕುಟುಂಬಕ್ಕೆ ಸೇರಿದ ಅಲ್ಲು ಅರ್ಜುನ್, ಕುಟುಂಬದ ಇತರೆ ಸದಸ್ಯರೊಡನೆ ಉತ್ತಮ ಬಂಧ ಹೊಂದಿದ್ದಾರೆ. ಇದೀಗ ಮೆಗಾಸ್ಟಾರ್ ಕುಟುಂಬದ ಪವನ್ ಕಲ್ಯಾಣ್ ಚುನಾವಣೆಗೆ ನಿಂತಿದ್ದು, ಆಂಧ್ರ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸಿದ್ದಾರೆ. ಪವನ್ ಕಲ್ಯಾಣ್​ಗೆ ನಟ ಮೆಗಾಸ್ಟಾರ್ ಚಿರಂಜೀವಿ, ಅವರ ಪುತ್ರ ರಾಮ್​ ಚರಣ್ ಸೇರಿದಂತೆ ಇನ್ನೂ ಕೆಲವರು ಬೆಂಬಲ ಸೂಚಿಸಿದ್ದಾರೆ. ಆದರೆ ಅಲ್ಲು ಅರ್ಜುನ್ ಮಾತ್ರ ಪವನ್ ರಾಜಕೀಯದ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಈಗ ಹಳೆಯದೆಲ್ಲವನ್ನೂ ಮರೆತು ಅಲ್ಲು ಅರ್ಜುನ್ ತಮ್ಮ ಮಾವ ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ್ದಾರೆ.

ಮೆಗಾಸ್ಟಾರ್ ಕುಟುಂಬದಲ್ಲಿ ಈಗ ಎಲ್ಲವೂ ಸರಿಯಾಗಿದೆಯಾದರೂ ಕೆಲ ವರ್ಷದ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಅದಕ್ಕೆ ಕಾರಣವಾಗಿದ್ದು ಸ್ವತಃ ಪವನ್ ಕಲ್ಯಾಣ್ ಅವರೇ. ಪವನ್ ಕಲ್ಯಾಣ್, ತಮ್ಮ ಅಣ್ಣ ಚಿರಂಜೀವಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಣ್ಣನ ವಿರುದ್ಧ ಒಂದೆರಡು ಹೇಳಿಕೆಗಳನ್ನು ಸಹ ನೀಡಿದ್ದರು. ಕಾರ್ಯಕ್ರಮವೊಂದರಲ್ಲಿ ಪವನ್ ಅಭಿಮಾನಿಗಳು, ಚಿರಂಜೀವಿಗೆ ಅವಮಾನವಾಗುವಂತೆ ನಡೆದುಕೊಂಡಿದ್ದರು.

ಅದಾದ ಕೆಲವು ದಿನಗಳ ಬಳಿಕ ನಡೆದ ಅಲ್ಲು ಅರ್ಜುನ್​ರ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಸಹ ಪವನ್ ಅಭಿಮಾನಿಗಳು ಪವನ್ ಪರವಾಗಿ ಘೋಷಣೆಗಳನ್ನು ಕೂಗಿ ಗದ್ದಲ ಎಬ್ಬಿಸಿದ್ದರು. ಅಲ್ಲು ಅರ್ಜುನ್ ಅನ್ನು ಪವನ್ ಬಗ್ಗೆ ಮಾತನಾಡುವಂತೆ ಒತ್ತಾಯಿಸಿದ್ದರು. ಅಂದು ಅಲ್ಲು ಅರ್ಜುನ್ ಬಹಿರಂಗವಾಗಿ ‘ನಾನು ಅವರ ಬಗ್ಗೆ ಮಾತನಾಡುವುದಿಲ್ಲ’ ಎನ್ನುವ ಮೂಲಕ ತಮ್ಮ ಬೆಂಬಲ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಎಂಬ ಸಂದೇಶ ರವಾನಿಸಿದ್ದರು.

ಇದನ್ನೂ ಓದಿ:‘ಪುಷ್ಪ 2’ ಬಿಡುಗಡೆಗೂ ಮುನ್ನ 150 ಕೋಟಿ ರೂಪಾಯಿಗೆ ಹೆಚ್ಚಿತು ಅಲ್ಲು ಅರ್ಜುನ್​ ಸಂಬಳ

ಬಳಿಕ ಮೆಗಾಸ್ಟಾರ್ ಕುಟುಂಬದಲ್ಲಿ ಎಲ್ಲವೂ ಸರಿಹೋಯ್ತು. ಚಿರಂಜೀವಿ ಹಾಗೂ ಪವನ್ ಕಲ್ಯಾಣ್ ಮತ್ತೆ ಒಂದಾದರು. ಇದೀಗ ತಮ್ಮನ ರಾಜಕೀಯ ಪಯಣಕ್ಕೆ ಚಿರಂಜೀವಿ ಸಹ ಬೆಂಬಲ ಕೋರಿದರು. ರಾಮ್ ಚರಣ್ ಸಹ ಎಲ್ಲವನ್ನೂ ಮರೆತು ಚಿಕ್ಕಪ್ಪನ ಪರವಾಗಿ ಹೇಳಿಕೆಗಳನ್ನು ನೀಡಿದರು. ಒಟ್ಟಿಗೆ ಹಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡರು. ಆದರೆ ಅಲ್ಲು ಅರ್ಜುನ್ ಮಾತ್ರ ಪವನ್ ಕಲ್ಯಾಣ್ ಜೊತೆ ಕಾಣಿಸಿಕೊಂಡಿರಲಿಲ್ಲ. ಇದು ಅಭಿಮಾನಿಗಳಲ್ಲಿ ಅನುಮಾನಕ್ಕೆ ಕಾರಣವಾಗಿತ್ತು. ಆದರೆ ಈಗ ಹಳೆಯ ಮುನಿಸು ಮರೆತು ಅಲ್ಲು ಅರ್ಜುನ್, ಪವನ್ ಕಲ್ಯಾಣ್ ಪರವಾಗಿ ಟ್ವೀಟ್ ಮಾಡಿದ್ದಾರೆ.

‘ನಿಮ್ಮ ಚುನಾವಣಾ ಪಯಣ ಯಶಸ್ವಿಯಾಗಲಿ ಎಂದು ನಾನು ಹೃದಯಪೂರ್ವಕವಾಗಿ ಆಶಿಸುತ್ತೇನೆ. ಸೇವೆಗಾಗಿ ನಿಮ್ಮ ಜೀವನವನ್ನು ಮುಡಿಪಾಗಿಟ್ಟು ನೀವು ಆರಿಸಿಕೊಂಡ ಮಾರ್ಗದ ಬಗ್ಗೆ ನಾನು ಯಾವಾಗಲೂ ಹೆಮ್ಮೆಪಡುತ್ತೇನೆ. ಕುಟುಂಬದ ಸದಸ್ಯನಾಗಿ, ನನ್ನ ಪ್ರೀತಿ ಮತ್ತು ಬೆಂಬಲ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ನೀವು ಬಯಸುವ ಎಲ್ಲವನ್ನೂ ಸಾಧಿಸಲಿ ಎಂದು ಆಶಿಸುತ್ತೇನೆ’ ಎಂದಿದ್ದಾರೆ ಅಲ್ಲು ಅರ್ಜುನ್.

ಜನಸೇನಾ ರಾಜಕೀಯ ಪಕ್ಷದ ಸ್ಥಾಪಕರಾಗಿರುವ ಪವನ್ ಕಲ್ಯಾಣ್, ಆಂಧ್ರ ವಿಧಾನಸಭೆ ಚುನಾವಣೆಗೆ ಪೀಠಾಪುರಂನಿಂದ ಸ್ಪರ್ಧಿಸಿದ್ದಾರೆ. ಜನಸೇನಾ ಪಕ್ಷ ಈ ಬಾರಿ ಟಿಡಿಪಿ ಹಾಗೂ ಬಿಜೆಪಿ ಜೊತೆ ಕೈಜೋಡಿಸಿ ಚುನಾವಣೆ ಎದುರಿಸುತ್ತಿದೆ. ಆಂಧ್ರದ ಹಾಲಿ ಜಗನ್ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಪಣತೊಟ್ಟು ಪವನ್ ಕಲ್ಯಾಣ್ ಸತತ ಪ್ರಚಾರ ಸಭೆಗಳನ್ನು ಮಾಡುತ್ತಿದ್ದಾರೆ. ಈ ಬಾರಿ ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಪಕ್ಷ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆ ಇದೆಯೆಂದು ವಿಶ್ಲೇಷಕರು ಲೆಕ್ಕ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ