1,600 ಕಿಮೀ ಸೈಕಲ್ ತುಳಿದುಕೊಂಡು ಬಂದು ಅಲ್ಲು ಅರ್ಜುನ್ ಭೇಟಿ ಮಾಡಿದ ಅಭಿಮಾನಿ

ಟಾಲಿವುಡ್ ನಟ ಅಲ್ಲು ಅರ್ಜುನ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಅವರನ್ನು ನೋಡಬೇಕು ಎಂಬ ಆಸೆ ಎಲ್ಲ ಅಭಿಮಾನಿಗಳಿಗೂ ಇರುತ್ತದೆ. ಅದಕ್ಕಾಗಿ ಹಲವಾರು ಬಗೆಯ ಸರ್ಕಸ್ ಮಾಡುತ್ತಾರೆ. ಉತ್ತರ ಭಾರತದ ಅಭಿಮಾನಿಯೊಬ್ಬರು ಸಾವಿರಾರು ಕಿಮೀ ಸೈಕಲ್ ತುಳಿದುಕೊಂಡು ಬಂದು ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಿದ್ದಾರೆ.

1,600 ಕಿಮೀ ಸೈಕಲ್ ತುಳಿದುಕೊಂಡು ಬಂದು ಅಲ್ಲು ಅರ್ಜುನ್ ಭೇಟಿ ಮಾಡಿದ ಅಭಿಮಾನಿ
ಅಭಿಮಾನಿ ಜೊತೆ ಅಲ್ಲು ಅರ್ಜುನ್
Follow us
|

Updated on: Oct 16, 2024 | 8:07 PM

‘ಪುಷ್ಪ’ ಸಿನಿಮಾ ರಿಲೀಸ್​ ಆದ ಬಳಿಕ ಅಲ್ಲು ಅರ್ಜುನ್​ ಅವರ ಖ್ಯಾತಿ ಹೆಚ್ಚಿತು. ಮೊದಲು ತೆಲುಗು ಪ್ರೇಕ್ಷಕರಿಗೆ ಮಾತ್ರ ಸೀಮಿತವಾಗಿದ್ದ ಅಲ್ಲು ಅರ್ಜುನ್ ಅವರ ಹವಾ ಉತ್ತರ ಭಾರತಕ್ಕೂ ಹಬ್ಬಿತು. ಈಗ ‘ಪುಷ್ಪ 2’ ಸಿನಿಮಾಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಈ ನಡುವೆ ಓರ್ವ ಅಭಿಮಾನಿಯು ವಿಶೇಷವಾಗಿ ಗಮನ ಸೆಳೆದಿದ್ದಾರೆ. ಬರೋಬ್ಬರಿ 1600 ಕಿಲೋ ಮೀಟರ್ ಸೈಕಲ್ ತುಳಿದುಕೊಂಡು ಬಂದು ತಮ್ಮ ನೆಚ್ಚಿನ ನಟನನ್ನು ಭೇಟಿ ಮಾಡಿ ಖುಷಿಪಟ್ಟಿದ್ದಾರೆ. ತಮ್ಮನ್ನು ನೋಡಲು ಬಂದ ಅಭಿಮಾನಿಯನ್ನು ಅಲ್ಲು ಅರ್ಜುನ್ ಅವರು ಪ್ರೀತಿಯಿಂದ ಮಾತನಾಡಿಸಿದ್ದಾರೆ.

ಈ ಅಭಿಮಾನಿಯ ಹೆಸರು ಮೋಹಿತ್ ಯಾದವ್. ಮೂಲತಃ ಉತ್ತರ ಪ್ರದೇಶದ ಅಲಿಗಡ್​ನಿಂದ ಸೈಕಲ್ ಸವಾರಿ ಮಾಡಿಕೊಂಡು ಹೈದರಾಬಾದ್​ಗೆ ಬಂದಿದ್ದಾರೆ. ಅಲ್ಲು ಅರ್ಜುನ್ ಅವರನ್ನು ಭೇಟಿಯಾದ ಖುಷಿಯಲ್ಲಿ ಅವರು ವಿಡಿಯೋ ಹಂಚಿಕೊಂಡಿದ್ದಾರೆ. ಅಭಿಮಾನಿಯನ್ನು ಆಪ್ತವಾಗಿ ಮಾತನಾಡಿಸಿದ ಅಲ್ಲು ಅರ್ಜುನ್ ಅವರ ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

‘ಕಡೆಗೂ ನಾನು ನನ್ನ ಹೀರೋ ಭೇಟಿ ಮಾಡಿದೆ. ಅಲ್ಲು ಅರ್ಜುನ್ ಅವರು ನಿಜಕ್ಕೂ ವಿನಯವಂತ ಮತ್ತು ಉತ್ತಮವಾದ ವ್ಯಕ್ತಿ. ಈಗ ನನ್ನ ಭಾವನೆಯನ್ನು ಹೇಳಿಕೊಳ್ಳಲು ಪದಗಳೇ ಬರುತ್ತಿಲ್ಲ. ಅವರನ್ನು ಸಿನಿಮಾದಲ್ಲಿ ನೋಡುವುದು ಒಂದು ರೀತಿ. ಆದರೆ ನೇರವಾಗಿ ಭೇಟಿಯಾಗಿದ್ದು ಒಂದು ಭಾವುಕ ಅನುಭವ. ನನ್ನ ತಂದೆ-ತಾಯಿ, ಫಾಲೋವರ್ಸ್​ ಆಶೀರ್ವಾದದಿಂದ ನನ್ನ ಕನಸು ನಿಜವಾಗಿದೆ. ತುಂಬ ಖುಷಿ ಆಗುತ್ತಿದೆ’ ಎಂದ ಮೋಹಿತ್ ಯಾದವ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್-ರಶ್ಮಿಕಾ ರೀತಿ ಡ್ರೆಸ್ ಮಾಡಿಕೊಂಡು ರಸ್ತೆಯಲ್ಲಿ ಮಕ್ಕಳ ಡ್ಯಾನ್ಸ್

ಅಭಿಮಾನಿಗಳ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ‘ಪುಷ್ಪ 2’ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಡಿಸೆಂಬರ್​ 6ರಂದು ಬಿಡುಗಡೆ ಆಗಲಿದೆ. ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್ ಅವರು ಜೋಡಿಯಾಗಿ ನಟಿಸಿದ್ದು, ಸುಕುಮಾರ್ ನಿರ್ದೇಶನ ಮಾಡಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ನಿರ್ಮಾಣ ಮಾಡಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಹೊಸ ದಾಖಲೆ ಬರೆಯಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದಾರೆ. ಡಾಲಿ ಧನಂಜಯ್, ಫಹಾದ್ ಫಾಸಿಲ್ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್