AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಟೀಸರ್ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ; ಅಲ್ಲಿ ಬಂದಿದ್ದೇ ಬೇರೆ

ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್​ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್​ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

‘ಪುಷ್ಪ 2’ ಟೀಸರ್ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ; ಅಲ್ಲಿ ಬಂದಿದ್ದೇ ಬೇರೆ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Apr 09, 2024 | 6:59 AM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ’ ಚಿತ್ರದಿಂದ ದೊಡ್ಡ ಖ್ಯಾತಿ ಪಡೆದಿದ್ದಾರೆ. ಈ ಕಾರಣದಿಂದಲೇ ‘ಪುಷ್ಪ 2’ ಚಿತ್ರದ ಮೇಲೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಳ್ಳುವಂತೆ ಆಗಿದೆ. ಆದರೆ, ಚಿತ್ರತಂಡದವರು ಸಿನಿಮಾ ಬಗ್ಗೆ ಯಾವುದೇ ಸರಿಯಾದ ಮಾಹಿತಿಯನ್ನು ಬಿಟ್ಟುಕೊಡುತ್ತಿಲ್ಲ. ಹೌದು, ಈ ಮೊದಲು ಪೋಸ್ಟರ್ ರಿಲೀಸ್ ಮಾಡಿದ್ದ ತಂಡ, ಅಲ್ಲು ಅರ್ಜುನ್​ ಬರ್ತ್​ಡೇಗೆ (ಏಪ್ರಿಲ್ 8) ಟೀಸರ್ ರಿಲೀಸ್ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ಅವರು ರಿಲೀಸ್ ಮಾಡಿದ್ದು ಗ್ಲಿಂಪ್ಸ್ ಅಷ್ಟೇ ಅನ್ನೋದು ಅನೇಕರ ಅಭಿಪ್ರಾಯ.

ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್​ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್​ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ. ‘ನಾವು ಇನ್ನೂ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದೆವು’ ಎಂದಿದ್ದಾರೆ ಕೆಲವರು.

ಟೀಸರ್ ಎಂದರೆ ಹೊಸ ಹೊಸ ವಿಚಾರಗಳನ್ನು ರಿವೀಲ್ ಮಾಡಬೇಕು. ಕೆಲವೇ ಕೆಲವು ಕಲಾವಿದರ ಪಾತ್ರದ ಬಗ್ಗೆಯಾದರೂ ಮಾಹಿತಿ ರಿವೀಲ್ ಆಗಬೇಕು. ಆದರೆ, ಇಲ್ಲಿ ಅದ್ಯಾವುದೂ ಇಲ್ಲ. ಅಲ್ಲು ಅರ್ಜುನ್ ಅವರು ಸೀರೆಯಲ್ಲಿ ಎಂಟ್ರಿ ಕೊಡುತ್ತಾರೆ ಮತ್ತು ಕೆಲವರನ್ನು ಹೊಡೆದುರುಳಿಸುತ್ತಾರೆ. ಈ ಕಾರಣಕ್ಕೆ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದ ಫ್ಯಾನ್ಸ್​ಗೆ ನಿರಾಸೆ ಆಗಿದೆ.

‘ಪುಷ್ಪ 2’ ರಿಲೀಸ್​ಗೆ ಇನ್ನೂ ಕೆಲವು ತಿಂಗಳು ಬಾಕಿ ಇದೆ. ಹೀಗಾಗಿ, ಹೆಚ್ಚಿನದ್ದನ್ನು ಬಿಟ್ಟುಕೊಡಬಾರದು ಎಂಬುದು ತಂಡದ ಉದ್ದೇಶವೂ ಇರಬಹುದು. ಈ ಕಾರಣದಿಂದಲೇ ಹಳೆ ಪೋಸ್ಟರ್​ಗೆ ಸಂಬಂಧಿಸಿದ ದೃಶ್ಯವನ್ನೇ ತಂಡ ಪ್ರೇಕ್ಷಕರ ಮುಂದೆ ಇಟ್ಟಿರಬಹುದು ಎಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ಅವತಾರದಲ್ಲಿ ಬಂದ ರಶ್ಮಿಕಾ ಮಂದಣ್ಣ; ಬರ್ತ್​​ಡೇಗೆ ಪೋಸ್ಟರ್ ಗಿಫ್ಟ್

‘ಪುಷ್ಪ 2’ ತಂಡದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದು, ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ