AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಟೀಸರ್ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ; ಅಲ್ಲಿ ಬಂದಿದ್ದೇ ಬೇರೆ

ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್​ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್​ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

‘ಪುಷ್ಪ 2’ ಟೀಸರ್ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ; ಅಲ್ಲಿ ಬಂದಿದ್ದೇ ಬೇರೆ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Apr 09, 2024 | 6:59 AM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ’ ಚಿತ್ರದಿಂದ ದೊಡ್ಡ ಖ್ಯಾತಿ ಪಡೆದಿದ್ದಾರೆ. ಈ ಕಾರಣದಿಂದಲೇ ‘ಪುಷ್ಪ 2’ ಚಿತ್ರದ ಮೇಲೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಳ್ಳುವಂತೆ ಆಗಿದೆ. ಆದರೆ, ಚಿತ್ರತಂಡದವರು ಸಿನಿಮಾ ಬಗ್ಗೆ ಯಾವುದೇ ಸರಿಯಾದ ಮಾಹಿತಿಯನ್ನು ಬಿಟ್ಟುಕೊಡುತ್ತಿಲ್ಲ. ಹೌದು, ಈ ಮೊದಲು ಪೋಸ್ಟರ್ ರಿಲೀಸ್ ಮಾಡಿದ್ದ ತಂಡ, ಅಲ್ಲು ಅರ್ಜುನ್​ ಬರ್ತ್​ಡೇಗೆ (ಏಪ್ರಿಲ್ 8) ಟೀಸರ್ ರಿಲೀಸ್ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ಅವರು ರಿಲೀಸ್ ಮಾಡಿದ್ದು ಗ್ಲಿಂಪ್ಸ್ ಅಷ್ಟೇ ಅನ್ನೋದು ಅನೇಕರ ಅಭಿಪ್ರಾಯ.

ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್​ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್​ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ. ‘ನಾವು ಇನ್ನೂ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದೆವು’ ಎಂದಿದ್ದಾರೆ ಕೆಲವರು.

ಟೀಸರ್ ಎಂದರೆ ಹೊಸ ಹೊಸ ವಿಚಾರಗಳನ್ನು ರಿವೀಲ್ ಮಾಡಬೇಕು. ಕೆಲವೇ ಕೆಲವು ಕಲಾವಿದರ ಪಾತ್ರದ ಬಗ್ಗೆಯಾದರೂ ಮಾಹಿತಿ ರಿವೀಲ್ ಆಗಬೇಕು. ಆದರೆ, ಇಲ್ಲಿ ಅದ್ಯಾವುದೂ ಇಲ್ಲ. ಅಲ್ಲು ಅರ್ಜುನ್ ಅವರು ಸೀರೆಯಲ್ಲಿ ಎಂಟ್ರಿ ಕೊಡುತ್ತಾರೆ ಮತ್ತು ಕೆಲವರನ್ನು ಹೊಡೆದುರುಳಿಸುತ್ತಾರೆ. ಈ ಕಾರಣಕ್ಕೆ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದ ಫ್ಯಾನ್ಸ್​ಗೆ ನಿರಾಸೆ ಆಗಿದೆ.

‘ಪುಷ್ಪ 2’ ರಿಲೀಸ್​ಗೆ ಇನ್ನೂ ಕೆಲವು ತಿಂಗಳು ಬಾಕಿ ಇದೆ. ಹೀಗಾಗಿ, ಹೆಚ್ಚಿನದ್ದನ್ನು ಬಿಟ್ಟುಕೊಡಬಾರದು ಎಂಬುದು ತಂಡದ ಉದ್ದೇಶವೂ ಇರಬಹುದು. ಈ ಕಾರಣದಿಂದಲೇ ಹಳೆ ಪೋಸ್ಟರ್​ಗೆ ಸಂಬಂಧಿಸಿದ ದೃಶ್ಯವನ್ನೇ ತಂಡ ಪ್ರೇಕ್ಷಕರ ಮುಂದೆ ಇಟ್ಟಿರಬಹುದು ಎಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ಅವತಾರದಲ್ಲಿ ಬಂದ ರಶ್ಮಿಕಾ ಮಂದಣ್ಣ; ಬರ್ತ್​​ಡೇಗೆ ಪೋಸ್ಟರ್ ಗಿಫ್ಟ್

‘ಪುಷ್ಪ 2’ ತಂಡದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದು, ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು