AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಟೀಸರ್ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ; ಅಲ್ಲಿ ಬಂದಿದ್ದೇ ಬೇರೆ

ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್​ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್​ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

‘ಪುಷ್ಪ 2’ ಟೀಸರ್ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ; ಅಲ್ಲಿ ಬಂದಿದ್ದೇ ಬೇರೆ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Apr 09, 2024 | 6:59 AM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ’ ಚಿತ್ರದಿಂದ ದೊಡ್ಡ ಖ್ಯಾತಿ ಪಡೆದಿದ್ದಾರೆ. ಈ ಕಾರಣದಿಂದಲೇ ‘ಪುಷ್ಪ 2’ ಚಿತ್ರದ ಮೇಲೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಳ್ಳುವಂತೆ ಆಗಿದೆ. ಆದರೆ, ಚಿತ್ರತಂಡದವರು ಸಿನಿಮಾ ಬಗ್ಗೆ ಯಾವುದೇ ಸರಿಯಾದ ಮಾಹಿತಿಯನ್ನು ಬಿಟ್ಟುಕೊಡುತ್ತಿಲ್ಲ. ಹೌದು, ಈ ಮೊದಲು ಪೋಸ್ಟರ್ ರಿಲೀಸ್ ಮಾಡಿದ್ದ ತಂಡ, ಅಲ್ಲು ಅರ್ಜುನ್​ ಬರ್ತ್​ಡೇಗೆ (ಏಪ್ರಿಲ್ 8) ಟೀಸರ್ ರಿಲೀಸ್ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ಅವರು ರಿಲೀಸ್ ಮಾಡಿದ್ದು ಗ್ಲಿಂಪ್ಸ್ ಅಷ್ಟೇ ಅನ್ನೋದು ಅನೇಕರ ಅಭಿಪ್ರಾಯ.

ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್​ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್​ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ. ‘ನಾವು ಇನ್ನೂ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದೆವು’ ಎಂದಿದ್ದಾರೆ ಕೆಲವರು.

ಟೀಸರ್ ಎಂದರೆ ಹೊಸ ಹೊಸ ವಿಚಾರಗಳನ್ನು ರಿವೀಲ್ ಮಾಡಬೇಕು. ಕೆಲವೇ ಕೆಲವು ಕಲಾವಿದರ ಪಾತ್ರದ ಬಗ್ಗೆಯಾದರೂ ಮಾಹಿತಿ ರಿವೀಲ್ ಆಗಬೇಕು. ಆದರೆ, ಇಲ್ಲಿ ಅದ್ಯಾವುದೂ ಇಲ್ಲ. ಅಲ್ಲು ಅರ್ಜುನ್ ಅವರು ಸೀರೆಯಲ್ಲಿ ಎಂಟ್ರಿ ಕೊಡುತ್ತಾರೆ ಮತ್ತು ಕೆಲವರನ್ನು ಹೊಡೆದುರುಳಿಸುತ್ತಾರೆ. ಈ ಕಾರಣಕ್ಕೆ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದ ಫ್ಯಾನ್ಸ್​ಗೆ ನಿರಾಸೆ ಆಗಿದೆ.

‘ಪುಷ್ಪ 2’ ರಿಲೀಸ್​ಗೆ ಇನ್ನೂ ಕೆಲವು ತಿಂಗಳು ಬಾಕಿ ಇದೆ. ಹೀಗಾಗಿ, ಹೆಚ್ಚಿನದ್ದನ್ನು ಬಿಟ್ಟುಕೊಡಬಾರದು ಎಂಬುದು ತಂಡದ ಉದ್ದೇಶವೂ ಇರಬಹುದು. ಈ ಕಾರಣದಿಂದಲೇ ಹಳೆ ಪೋಸ್ಟರ್​ಗೆ ಸಂಬಂಧಿಸಿದ ದೃಶ್ಯವನ್ನೇ ತಂಡ ಪ್ರೇಕ್ಷಕರ ಮುಂದೆ ಇಟ್ಟಿರಬಹುದು ಎಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ಅವತಾರದಲ್ಲಿ ಬಂದ ರಶ್ಮಿಕಾ ಮಂದಣ್ಣ; ಬರ್ತ್​​ಡೇಗೆ ಪೋಸ್ಟರ್ ಗಿಫ್ಟ್

‘ಪುಷ್ಪ 2’ ತಂಡದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದು, ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್