AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಟೀಸರ್ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ; ಅಲ್ಲಿ ಬಂದಿದ್ದೇ ಬೇರೆ

ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್​ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್​ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

‘ಪುಷ್ಪ 2’ ಟೀಸರ್ ನಿರೀಕ್ಷಿಸಿದ್ದ ಅಭಿಮಾನಿಗಳಿಗೆ ನಿರಾಸೆ; ಅಲ್ಲಿ ಬಂದಿದ್ದೇ ಬೇರೆ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Apr 09, 2024 | 6:59 AM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ’ ಚಿತ್ರದಿಂದ ದೊಡ್ಡ ಖ್ಯಾತಿ ಪಡೆದಿದ್ದಾರೆ. ಈ ಕಾರಣದಿಂದಲೇ ‘ಪುಷ್ಪ 2’ ಚಿತ್ರದ ಮೇಲೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಳ್ಳುವಂತೆ ಆಗಿದೆ. ಆದರೆ, ಚಿತ್ರತಂಡದವರು ಸಿನಿಮಾ ಬಗ್ಗೆ ಯಾವುದೇ ಸರಿಯಾದ ಮಾಹಿತಿಯನ್ನು ಬಿಟ್ಟುಕೊಡುತ್ತಿಲ್ಲ. ಹೌದು, ಈ ಮೊದಲು ಪೋಸ್ಟರ್ ರಿಲೀಸ್ ಮಾಡಿದ್ದ ತಂಡ, ಅಲ್ಲು ಅರ್ಜುನ್​ ಬರ್ತ್​ಡೇಗೆ (ಏಪ್ರಿಲ್ 8) ಟೀಸರ್ ರಿಲೀಸ್ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ಅವರು ರಿಲೀಸ್ ಮಾಡಿದ್ದು ಗ್ಲಿಂಪ್ಸ್ ಅಷ್ಟೇ ಅನ್ನೋದು ಅನೇಕರ ಅಭಿಪ್ರಾಯ.

ಅಲ್ಲು ಅರ್ಜುನ್ ಮುಖಕ್ಕೆ ಬಣ್ಣ ಬಳಿದುಕೊಂಡು, ಸೀರೆ ಉಟ್ಟುಕೊಂಡಿರೋ ಪೋಸ್ಟರ್​ನ ಈ ಮೊದಲು ಕೂಡ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತದೇ ಲುಕ್​ನ ದೃಶ್ಯವನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ. ‘ನಾವು ಇನ್ನೂ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದೆವು’ ಎಂದಿದ್ದಾರೆ ಕೆಲವರು.

ಟೀಸರ್ ಎಂದರೆ ಹೊಸ ಹೊಸ ವಿಚಾರಗಳನ್ನು ರಿವೀಲ್ ಮಾಡಬೇಕು. ಕೆಲವೇ ಕೆಲವು ಕಲಾವಿದರ ಪಾತ್ರದ ಬಗ್ಗೆಯಾದರೂ ಮಾಹಿತಿ ರಿವೀಲ್ ಆಗಬೇಕು. ಆದರೆ, ಇಲ್ಲಿ ಅದ್ಯಾವುದೂ ಇಲ್ಲ. ಅಲ್ಲು ಅರ್ಜುನ್ ಅವರು ಸೀರೆಯಲ್ಲಿ ಎಂಟ್ರಿ ಕೊಡುತ್ತಾರೆ ಮತ್ತು ಕೆಲವರನ್ನು ಹೊಡೆದುರುಳಿಸುತ್ತಾರೆ. ಈ ಕಾರಣಕ್ಕೆ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದ ಫ್ಯಾನ್ಸ್​ಗೆ ನಿರಾಸೆ ಆಗಿದೆ.

‘ಪುಷ್ಪ 2’ ರಿಲೀಸ್​ಗೆ ಇನ್ನೂ ಕೆಲವು ತಿಂಗಳು ಬಾಕಿ ಇದೆ. ಹೀಗಾಗಿ, ಹೆಚ್ಚಿನದ್ದನ್ನು ಬಿಟ್ಟುಕೊಡಬಾರದು ಎಂಬುದು ತಂಡದ ಉದ್ದೇಶವೂ ಇರಬಹುದು. ಈ ಕಾರಣದಿಂದಲೇ ಹಳೆ ಪೋಸ್ಟರ್​ಗೆ ಸಂಬಂಧಿಸಿದ ದೃಶ್ಯವನ್ನೇ ತಂಡ ಪ್ರೇಕ್ಷಕರ ಮುಂದೆ ಇಟ್ಟಿರಬಹುದು ಎಂದು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ಅವತಾರದಲ್ಲಿ ಬಂದ ರಶ್ಮಿಕಾ ಮಂದಣ್ಣ; ಬರ್ತ್​​ಡೇಗೆ ಪೋಸ್ಟರ್ ಗಿಫ್ಟ್

‘ಪುಷ್ಪ 2’ ತಂಡದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ ನಿರ್ದೇಶನ ಮಾಡುತ್ತಿದ್ದು, ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು