AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹತ್ವದ ಕಾರ್ಯಕ್ಕೆ ಕೈ ಹಾಕಿದ ಅಲ್ಲು ಅರ್ಜುನ್ ಅಭಿಮಾನಿಗಳು, ಎಲ್ಲರಿಗೂ ಮಾದರಿ

Allu Arjun movie: ದಕ್ಷಿಣದಲ್ಲಿ ಸ್ಟಾರ್ ನಟರುಗಳ ಅಭಿಮಾನಿಗಳು ಪರಸ್ಪರ ಕಿತ್ತಾಡುವುದು, ಜಗಳ ಮಾಡುವುದು, ಪರಸ್ಪರರ ನಟರ ನಿಂದನೆ ಮಾಡುವುದು, ಚಿತ್ರಮಂದಿರಗಳಲ್ಲಿ ಗಲಾಟೆ ಮಾಡುವುದು ಕೆಲವು ಸಂದರ್ಭದಲ್ಲಿ ಇದೇ ಕಾರಣಕ್ಕೆ ಕೊಲೆಗಳು ಸಹ ನಡೆದಿರುವುದು ಇದೆ. ಆದರೆ ತೀರಾ ಅಪರೂಪಕ್ಕೆ ಈ ಅಭಿಮಾನಿ ಸಂಘಗಳು ನಿಜಕ್ಕೂ ಸಮಾಜದಲ್ಲಿ ಬದಲಾವಣೆ ತರುವ ಕಾರ್ಯಗಳನ್ನು ಮಾಡುತ್ತವೆ. ಇದೀಗ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಈ ರೀತಿಯ ಒಂದು ಅಭಿನಂದನಾರ್ಹ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಮಹತ್ವದ ಕಾರ್ಯಕ್ಕೆ ಕೈ ಹಾಕಿದ ಅಲ್ಲು ಅರ್ಜುನ್ ಅಭಿಮಾನಿಗಳು, ಎಲ್ಲರಿಗೂ ಮಾದರಿ
Allu Arjun
ಮಂಜುನಾಥ ಸಿ.
|

Updated on: Apr 01, 2026 | 6:35 PM

Share

ಭಾರತದಲ್ಲಿ ಸಿನಿಮಾ (Cinema) ನಟರನ್ನು ಆರಾಧಿಸುವವರ ಸಂಖ್ಯೆ ಹೆಚ್ಚು. ಅದರಲ್ಲೂ ದಕ್ಷಿಣ ಭಾರತ ಚಿತ್ರರಂಗದಲ್ಲಿ ಈ ಸಂಸ್ಕೃತಿ ತುಸು ಹೆಚ್ಚಾಗಿಯೇ ಇದೆ. ದಕ್ಷಿಣದಲ್ಲಿ ಸ್ಟಾರ್ ನಟರುಗಳ ಅಭಿಮಾನಿಗಳು ಪರಸ್ಪರ ಕಿತ್ತಾಡುವುದು, ಜಗಳ ಮಾಡುವುದು, ಪರಸ್ಪರರ ನಟರ ನಿಂದನೆ ಮಾಡುವುದು, ಚಿತ್ರಮಂದಿರಗಳಲ್ಲಿ ಗಲಾಟೆ ಮಾಡುವುದು ಕೆಲವು ಸಂದರ್ಭದಲ್ಲಿ ಇದೇ ಕಾರಣಕ್ಕೆ ಕೊಲೆಗಳು ಸಹ ನಡೆದಿರುವುದು ಇದೆ. ಆದರೆ ತೀರಾ ಅಪರೂಪಕ್ಕೆ ಈ ಅಭಿಮಾನಿ ಸಂಘಗಳು ನಿಜಕ್ಕೂ ಸಮಾಜದಲ್ಲಿ ಬದಲಾವಣೆ ತರುವ ಕಾರ್ಯಗಳನ್ನು ಮಾಡುತ್ತವೆ. ಇದೀಗ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಈ ರೀತಿಯ ಒಂದು ಅಭಿನಂದನಾರ್ಹ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಅಭಿಮಾನಿ ಸಂಘಗಳು ಸಾಮಾನ್ಯವಾಗಿ ಸ್ಟಾರ್ ನಟನ ಹುಟ್ಟುಹಬ್ಬದಂದು ಅನ್ನದಾನ ಮಾಡುತ್ತಾರೆ, ತೀರ ಹೆಚ್ಚೆಂದರೆ ರಕ್ತದಾನ ಮಾಡುತ್ತಾರೆ. ಎಲ್ಲೋ ಕೆಲವರು ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ ಬ್ಯಾಗು ವಿತರಣೆ ಮಾಡುತ್ತಾರೆ. ಇವು ಸಹ ಒಳ್ಳೆಯ ಸಮಾಜ ಮುಖಿ ಕೆಲಸಗಳೇ ಆದರೆ ಇದೀಗ ಅಲ್ಲು ಅರ್ಜುನ್ ಅಭಿಮಾನಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಇಡೀ ಸಮಾಜದ ಮೇಲೆ ಪರಿಣಾಮ ಬೀರಬಹುದಾದಂಥಹ ಒಂದು ಕಾರ್ಯಕ್ಕೆ ಕೈ ಹಾಕಿದ್ದಾರೆ. ಅದುವೇ ಎಚ್​​ಪಿವಿ (HPV) ಲಸಿಕೆ ಅಭಿಯಾನ.

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ (Cervical Cancer) ಉಂಟುಮಾಡುವ ಪ್ರಮುಖ ಕಾರಣಗಳಲ್ಲಿ ಒಂದಾದ HPV (ಹ್ಯೂಮನ್ ಪ್ಯಾಪಿಲೋಮವೈರಸ್) ಬಗ್ಗೆ ಜಾಗೃತಿ ಮೂಡಿಸಲು ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ಮುಂದಾಗಿದ್ದಾರೆ. ಭಾರತ ಸರ್ಕಾರವು ದೇಶಾದ್ಯಂತ HPV ಲಸಿಕೆಯನ್ನು ಉತ್ತೇಜಿಸುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 13 ರಿಂದ 16 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಈ ಲಸಿಕೆ ಉಚಿತವಾಗಿ ಲಭ್ಯವಿದೆ. ಇದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ‘ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್’ ವಿಶೇಷ ಅಭಿಯಾನ ಕೈಗೆತ್ತಿಕೊಂಡಿದೆ.

ಇದನ್ನೂ ಓದಿ:ಜೂ ಎನ್​​ಟಿಆರ್-ನೀಲ್ ಸಿನಿಮಾಕ್ಕೆ ಜೊತೆಯಾದ ಹಾಲಿವುಡ್ ತಂಡ

ಪ್ರತಿ ವರ್ಷ ಒಂದು ಅರ್ಥಪೂರ್ಣ ಸಾಮಾಜಿಕ ಕಾರ್ಯ ಮಾಡಬೇಕು ಎನ್ನುವ ಅಲ್ಲು ಅರ್ಜುನ್ ಅವರ ಆಶಯದಂತೆ, ಈ ಬಾರಿ ಅಭಿಮಾನಿಗಳು HPV ಲಸಿಕೆ ಜಾಗೃತಿಯನ್ನು ತಮ್ಮ ಗುರಿಯನ್ನಾಗಿ ಮಾಡಿಕೊಂಡಿದ್ದಾರೆ. ಹಳ್ಳಿಗಳಲ್ಲಿ ಮತ್ತು ಅರೆ-ನಗರ ಪ್ರದೇಶಗಳಲ್ಲಿ ಈ ಆರೋಗ್ಯ ಸಮಸ್ಯೆಯ ಬಗ್ಗೆ ಅರಿವು ಕಡಿಮೆ ಇರುವುದರಿಂದ, ಅಲ್ಲಿನ ಜನರಿಗೆ ಲಸಿಕೆಯ ಪ್ರಾಮುಖ್ಯತೆಯನ್ನು ತಿಳಿಸುವುದು ಮತ್ತು ಉಚಿತ ಲಸಿಕೆಯ ಪ್ರಯೋಜನ ಪಡೆಯುವಂತೆ ಪ್ರೇರೇಪಿಸುವುದು ಅಭಿಮಾನಿಗಳ ಮುಖ್ಯ ಉದ್ದೇಶವಾಗಿದೆ.

ಅಭಿಮಾನಿ ಸಂಘವನ್ನು ಸಮಾಜದ ಒಳಿತಿಗಾಗಿ ಬಳಸುತ್ತಿರುವ ಅಲ್ಲು ಅರ್ಜುನ್ ಅವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಭಿಮಾನಿ ಸಂಘದ ಉದ್ದೇಶ ಕೇವಲ ಸ್ಟಾರ್ ನಟನ ಬೆಂಬಲ ಮಾತ್ರವಲ್ಲದೆ, ಸಮಾಜಕ್ಕೆ ಒಳ್ಳೆಯದನ್ನು ಮಾಡುವುದು ಕೂಡ ಆಗಿದೆ ಎಂದು ಈ ಅಭಿಯಾನ ಸಾಕ್ಷಿಯಾಗಲಿದೆ. ಅಭಿಮಾನಿಗಳು, ಕಟೌಟ್ ಕಟ್ಟಲು, ಹಾಲಿನಭಿಷೇಕ ಮಾಡಲು, ಚಿತ್ರಮಂದಿರಗಳನ್ನು ಸಿಂಗರಿಸಲು ಮಾತ್ರವಲ್ಲ, ಅವರನ್ನು ಸಮಾಜದ ಆಸ್ತಿಯನ್ನಾಗಿಸಬೇಕು ಎಂಬುದಕ್ಕೆ ಅಲ್ಲು ಅರ್ಜುನ್ ಮಾದರಿ ಹಾಕಿಕೊಟ್ಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ