AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರ ಬಂದ ಅಲ್ಲು ಅರ್ಜುನ್ ಮೊದಲ ರಿಯಾಕ್ಷನ್; ದೂರಿದ್ದು ಯಾರನ್ನ ಗೊತ್ತೇ?

ಹೈದರಾಬಾದ್ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದು, ಕಾನೂನಿಗೆ ತಲೆಬಾಗುವುದಾಗಿ ಹೇಳಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಅವರು, ಈ ಘಟನೆ ಅಪಘಾತ ಎಂದಿದ್ದಾರೆ.

ಜೈಲಿನಿಂದ ಹೊರ ಬಂದ ಅಲ್ಲು ಅರ್ಜುನ್ ಮೊದಲ ರಿಯಾಕ್ಷನ್; ದೂರಿದ್ದು ಯಾರನ್ನ ಗೊತ್ತೇ?
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Dec 14, 2024 | 9:16 AM

Share

ಹೈದರಾಬಾದ್​ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಎ11 ಆರೋಪಿ ಆಗಿರೋ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಈಗ ಅವರು ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ ಇಂದು ಮುಂಜಾನೆ ರಿಲೀಸ್ ಆದ ಅವರು, ಪೊಲೀಸ್ ಭಧ್ರತೆಯೊಂದಿಗೆ ನೇರವಾಗಿ ಮನೆ ಸೇರಿದರು. ಅವರು ನಿವಾಸಕ್ಕೆ ಬಂದ ಬಳಿಕ ಮಾಧ್ಯಮಗಳಿಗೆ ರಿಯಾಕ್ಷನ್ ನೀಡಿದ್ದಾರೆ. ಅವರು ಅಭಿಮಾನಿಗಳಿಗೆ ಧನ್ಯವಾದ ಹೇಳುವುದನ್ನು ಮರೆತಿಲ್ಲ. ಜೊತೆಗೆ ಕಾನೂನಿಗೆ ತಲೆ ಬಾಗೋದಾಗಿ ಹೇಳಿದ್ದಾರೆ.

‘ಅಭಿಮಾನಿಗಳಿಗೆ ಧನ್ಯವಾದ. ನಾನು ಆರಾಮಗಿದ್ದೇನೆ. ಆ ಬಗ್ಗೆ ಚಿಂತಿಸೋದು ಬೇಡ. ನಾನು ಕಾನೂನನ್ನು ಗೌರವಿಸುತ್ತೇನೆ. ನಾನು ತನಿಖೆಗೆ ಸಹಕರಿಸುತ್ತೇನೆ’ ಎಂದು ಅಲ್ಲು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಮೃತಪಟ್ಟ ರೇವತಿ ಕುಟುಂಬದವರ ಬಗ್ಗೆ ಮಾತನಾಡಲು ಮರೆತಿಲ್ಲ. ‘ನಾನು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಸಿನಿಮಾ ನೋಡಲು ಹೋದಾಗ ಈ ಘಟನೆ ನಡೆಯಿತು. ಅದು ಅಚಾನಕ್ಕಾಗಿ ಆಗಿದ್ದು. ಅದೊಂದು ಅಪಘಾತ’ ಎಂದಿದ್ದಾರೆ ಅಲ್ಲು ಅರ್ಜುನ್.

‘ಆ ರೀತಿ ಮಾಡಬೇಕು ಎಂಬ ಯಾವುದೇ ಉದ್ದೇಶ ಇರಲಿಲ್ಲ. ಅವರ ಕುಟುಂಬಕ್ಕೆ ನಾನು ಕ್ಷಮೆ ಕೇಳುತ್ತೇನೆ. ಅದು ನನ್ನ ವೈಯಕ್ತಿಕ ನಿಯಂತ್ರಣದಲ್ಲಿ ಇರಲಿಲ್ಲ. ನಾನು ಕಳೆದ 20 ವರ್ಷಗಳಿಂದ ಅಲ್ಲಿಗೆ ಸಿನಿಮಾ ನೋಡಲು ಹೋಗುತ್ತಿದ್ದೇನೆ. ನನ್ನದು ಮಾತ್ರವಲ್ಲದೆ, ನನ್ನ ಅಂಕಲ್ ಸಿನಿಮಾಗಳನ್ನೂ ಅಲ್ಲಿ ನೋಡಿದ್ದೇನೆ. 30ಕ್ಕೂ ಹೆಚ್ಚು ಬಾರಿ ಆ ಥಿಯೇಟರ್​ಗೆ ಭೇಟಿ ಕೊಟ್ಟಿದ್ದೇನೆ. ಯಾವಾಗಲೂ ಈ ರೀತಿ ಆಗಿರಲಿಲ್ಲ. ಸಾವಿನ ನಷ್ಟ ತುಂಬಲು ಸಾಧ್ಯವಿಲ್ಲ. ಆದರೆ, ನನ್ನ ಕೈಲಾದ ಸಹಾಯ ಮಾಡುತ್ತೇನೆ’ ಎಂದು ಅಲ್ಲು ಅರ್ಜುನ್ ಭರವಸೆ ನೀಡಿದ್ದಾರೆ.

ಈ ಬಂಧನದ ಹಿಂದೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೈವಾಡ ಇದೆ ಎಂಬ ಆರೋಪ ಇದೆ. ಈ ಬಗ್ಗೆ ಅವರಿಗೆ ಪ್ರಶ್ನೆ ಮಾಡಲಾಗಿದೆ. ಆದರೆ, ಈ ಬಗ್ಗೆ ಅಲ್ಲು ಅರ್ಜುನ್ ಅವರು ಪ್ರತಿಕ್ರಿಯೆ ನೀಡಿಲ್ಲ. ಅವರು ಈ ಬಂಧನಕ್ಕೆ ಯಾರನ್ನೂ ದೂರಿಲ್ಲ. ಇತ್ತೀಚೆಗೆ ಮಾತನಾಡಿದ್ದ ರೇವಂತ್ ರೆಡ್ಡಿ ಅವರು, ‘ನನ್ನ ಹಸ್ತಕ್ಷೇಪ ಇಲ್ಲ’ ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿ ಮನೆಯತ್ತ ಹೊರಟ ಅಲ್ಲು ಅರ್ಜುನ್; ಹೇಗಿದೆ ನೋಡಿ ಭದ್ರತೆ

‘ಏನೇ ಇದ್ದರೂ ಕಾನೂನು ನೋಡಿಕೊಳ್ಳುತ್ತದೆ. ಪ್ರಕರಣ ತನಿಖೆಯಲ್ಲಿ ಇದೆ. ಹೀಗಾಗಿ, ಆ ಬಗ್ಗೆ ಮಾತನಾಡುವುದಿಲ್ಲ. ನಾನು ಕಾನೂನನ್ನು ಗೌರವಿಸುತ್ತೇನೆ’ ಎಂದು ಹೇಳಿಕೆ ನೀಡಿದ್ದಾರೆ ಅಲ್ಲು ಅರ್ಜುನ್. ಅವರು ಬಂಧನಕ್ಕೆ ಒಳಗಾದಾಗ ಕುಟುಂಬ ಸವಾಲಿನ ಪರಿಸ್ಥಿತಿ ಎದುರಿಸಿತ್ತು. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಪ್ರೀತಿಗೆ ಧನ್ಯವಾದ. ಎಲ್ಲರಿಗೂ ಧನ್ಯವಾದ. ಅಭಿಮಾನಿಗಳು ತೋರಿದ ಪ್ರೀತಿ-ಬೆಂಬಲಕ್ಕೆ ಧನ್ಯವಾದ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:13 am, Sat, 14 December 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ