AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡ ‘ಪುಷ್ಪ 2’ ನಿರ್ದೇಶಕ ಸುಕುಮಾರ್; ಓಪನ್ ಹೇಳಿಕೆ

ಅಲ್ಲು ಅರ್ಜುನ್ ಅವರ ಬಂಧನದ ಬಳಿಕ ಹಲವು ವಿಚಾರ ಚರ್ಚೆ ಆಗಿದೆ. 'ಪುಷ್ಪ 2' ಚಿತ್ರದ ಯಶಸ್ಸಿನ ನಡುವೆಯೇ ಉಂಟಾದ ಈ ವಿವಾದದಿಂದ ಅಲ್ಲು ಅರ್ಜುನ್ ಹೆಸರು ಚರ್ಚೆಯಲ್ಲಿದೆ. ಈಗ ಸುಕುಮಾರ್ ಅವರು ನೀಡಿದ ಹೇಳಿಕೆ ಚರ್ಚೆಯಲ್ಲಿದೆ. ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಚಿತ್ರರಂಗ ತೊರೆಯುವ ನಿರ್ಧಾರ ತೆಗೆದುಕೊಂಡ ‘ಪುಷ್ಪ 2’ ನಿರ್ದೇಶಕ ಸುಕುಮಾರ್; ಓಪನ್ ಹೇಳಿಕೆ
ಅಲ್ಲು ಅರ್ಜುನ್-ಸುಕುಮಾರ್
ರಾಜೇಶ್ ದುಗ್ಗುಮನೆ
|

Updated on:Dec 24, 2024 | 3:17 PM

Share

ಎಲ್ಲ ಕಡೆಗಳಲ್ಲಿ ಅಲ್ಲು ಅರ್ಜುನ್ ಅವರ ವಿವಾದ ಚರ್ಚೆ ಆಗುತ್ತಿದೆ. ನಟನ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಇದು ಸಾಕಷ್ಟು ಶಾಕಿಂಗ್ ಎನಿಸಿದೆ. ಈ ಮಧ್ಯೆ ಅವರು ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಈ ವಿಚಾರ ಕೇಳಿ ಅನೇಕರು ಶಾಕ್ ಆಗಿದ್ದಾರೆ. ಸ್ವತಃ ಪಕ್ಕದಲ್ಲೇ ಇದ್ದ ರಾಮ್ ಚರಣ್ ಕೂಡ ಈ ವಿಚಾರದಿಂದ ಬೆಚ್ಚಿ ಬಿದ್ದರು. ಅವರು ಸಿನಿಮಾ ರಂಗ ತೊರೆಯಬಾರದು ಎನ್ನುವ ಆಗ್ರಹ ಜೋರಾಗಿದೆ.

ಹೈದರಾಬಾದ್​ನ ಈವೆಂಟ್ ಒಂದರಲ್ಲಿ ರಾಮ್ ಚರಣ್ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ‘ನೀವು ಏನನ್ನು ತೊರೆಯಲು ಬಯಸುತ್ತೀರಿ’ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರವಾಗಿ ‘ಸಿನಿಮಾ’ ಎಂದಿದ್ದಾರೆ ಸುಕುಮಾರ್. ಇದನ್ನು ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ಆಗ ಅಲ್ಲಿದ್ದವರು, ‘ನೀವು ಚಿತ್ರರಂಗ ತೊರೆಯಬಾರದು ಎಂದು ಹೇಳಿದ್ದಾರೆ. ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಮೊದಲು ಕೂಡ ಅವರು ಚಿತ್ರರಂಗ ತೊರೆಯುವ ಬಗ್ಗೆ ಮಾತನಾಡಿದ್ದರು. ಆದರೆ, ಚಿತ್ರರಂಗ ಬಿಟ್ಟು ಹೋಗಿಲ್ಲ.

ಅಲ್ಲು ಅರ್ಜುನ್ ಅವರು ಸದ್ಯ ವಿವಾದದ ಮೂಲಕ ಸುದ್ದಿ ಆಗಿದ್ದಾರೆ. ಅವರ ನಟನೆಯ ‘ಪುಷ್ಪ 2’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವಾಗಲೇ ಬಂಧನಕ್ಕೆ ಒಳಗಾಗಬೇಕಾಯಿತು. ಇದು ಅವರಿಗೆ ಸಾಕಷ್ಟು ನೋವನ್ನುಂಟು ಮಾಡಿದೆ. ಅವರು ಒಂದು ದಿನ ಜೈಲಿನಲ್ಲಿ ಇದ್ದು ಬರಬೇಕಾಯಿತು. ಕೇವಲ ಅಲ್ಲು ಅರ್ಜುನ್ ಮಾತ್ರವಲ್ಲದೆ, ಇಡೀ ಕುಟುಂಬಕ್ಕೆ ಇದು ನೋವನ್ನು ತಂದಿದೆ.

ಇದನ್ನೂ ಓದಿ: ವಕೀಲರ ಜೊತೆಗೆ ಪೊಲೀಸರ ವಿಚಾರಣೆಗೆ ಹಾಜರಾದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈಗ ಅಲ್ಲು ಅರ್ಜುನ್ ಅವರು ಸಂಕಷ್ಟು ಅನುಭವಿಸುತ್ತಿರುವ ವಿಚಾರ ಅವರಿಗೆ ನೋವು ತಂದಿದೆ. ಮುಂದೇನು ಎನ್ನುವ ಪ್ರಶ್ನೆ ಅವರನ್ನು ಬಲವಾಗಿ ಕಾಡುತ್ತಿದೆ. ಈ ಸಂಕಷ್ಟದಿಂದ ಅಲ್ಲು ಅರ್ಜುನ್ ಹೊರಬರಲಿ ಎಂದು ಸುಕುಮಾರ್ ಅವರು ಬಯಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:50 am, Tue, 24 December 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ