AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಪುತ್ರಿಗೆ ಅಲ್ಲು ಅರ್ಜುನ್ ಕೊಟ್ಟ ದುಬಾರಿ ಉಡುಗೊರೆ ಏನು ನೋಡಿ

ಬನ್ನಿ ಕೊಟ್ಟ ಗಿಫ್ಟ್ ನೋಡಿ ರಾಮ್ ಚರಣ್ ದಂಪತಿ ಸಖತ್ ಖಷಿ ಆಗಿದ್ದಾರೆ. ಅವರು ಬನ್ನಿಗೆ ಧನ್ಯವಾದ ತಿಳಿಸಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಅಭಿಮಾನಿಗಳ ವಲಯದಲ್ಲಿ ಮೆಚ್ಚುಗೆ ಸಿಕ್ಕಿದೆ.

ರಾಮ್ ಚರಣ್ ಪುತ್ರಿಗೆ ಅಲ್ಲು ಅರ್ಜುನ್ ಕೊಟ್ಟ ದುಬಾರಿ ಉಡುಗೊರೆ ಏನು ನೋಡಿ
ರಾಮ್ ಚರಣ್ ಕುಟುಂಬ-ಅಲ್ಲು ಅರ್ಜುನ್ ಕುಟುಂಬ
ರಾಜೇಶ್ ದುಗ್ಗುಮನೆ
|

Updated on: Aug 03, 2023 | 7:08 AM

Share

ಟಾಲಿವುಡ್ ನಟ ರಾಮ್ ಚರಣ್ (Ram Charan) ಹಾಗೂ ಅವರ ಪತ್ನಿ ಉಪಾಸನಾ ದಂಪತಿ ಇತ್ತೀಚೆಗೆ ಮನೆಗೆ ಹೊಸ ಸದಸ್ಯನನ್ನು ಸ್ವಾಗತಿಸಿದ್ದರು. ಉಪಾಸನಾ ಅವರು ಹೆಣ್ಣು ಮಗುವಿಗೆ ಜನ್ಮನೀಡುವ ಮೂಲಕ ಖುಷಿ ಸುದ್ದಿ ನೀಡಿದ್ದರು. ಮದುವೆ ಆಗಿ 11 ವರ್ಷ ಕಳೆದ ಬಳಿಕ ದಂಪತಿ ಸಿಹಿ ಸುದ್ದಿ ನೀಡಿದ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದರು. ಮಗುವಿಗೆ ಕ್ಲಿನ್ ಕಾರ (Klin Kaara Konidela) ಎಂದು ಹೆಸರು ಇಡಲಾಗಿದೆ. ಉಪಾಸನಾ ಅವರು ಸದ್ಯ ಕ್ಲಿನ್​ ಕಾರಳ  ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ಇನ್ನೊಂದೆಡೆ ರಾಮ್ ಚರಣ್ ಮತ್ತೆ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ಜ್ಯೂನಿಯರ್ ಎನ್​​ಟಿಆರ್ ಅವರು ರಾಮ್ ಚರಣ್ ಮಗಳಿಗೆ ಚಿನ್ನದ ಡಾಲರ್ ಉಡುಗೊರೆಯಾಗಿ ನೀಡಿದ್ದರು. ನಟ ಶರ್ವಾನಂದ್ ಕೂಡ ವಿಶೇಷ ಉಡುಗೊರೆ ಕಳುಹಿಸಿದ್ದಾರೆ ಎನ್ನಲಾಗಿತ್ತು. ಈಗ ಅಲ್ಲು ಅರ್ಜುನ್ ಸರದಿ.

ಅಲ್ಲು ಅರ್ಜುನ್ ಹಾಗೂ ರಾಮ್ ಚರಣ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಸಂಬಂಧಿಕರು. ಒಂದು ರೀತಿಯಲ್ಲಿ ಕುಟುಂಬದವರ ರೀತಿಯೇ. ಹೀಗಾಗಿ, ಕ್ಲಿನ್​ ಕಾರ ಮೇಲೆ ಅಲ್ಲು ಅರ್ಜುನ್​ಗೆ ವಿಶೇಷ ಪ್ರೀತಿ. ಈ ಕಾರಣಕ್ಕೆ ಆಕೆಗೆ ಚಿನ್ನದ ಬಟ್ಟಲನ್ನು ಉಡುಗೊರೆಯಾಗಿ ನೀಡಿದ್ದಾರೆ. ಆಕೆಯ ಹೆಸರು, ಜನ್ಮದಿನಾಂಕ ಮತ್ತು ಇತರ ವಿವರಗಳು ಈ ಪ್ಲೇಟ್ ಮೇಲೆ ಇದೆ ಎಂದು ವರದಿ ಆಗಿದೆ.

ಬನ್ನಿ ಕೊಟ್ಟ ಗಿಫ್ಟ್ ನೋಡಿ ರಾಮ್ ಚರಣ್ ದಂಪತಿ ಸಖತ್ ಖಷಿ ಆಗಿದ್ದಾರೆ. ಅವರು ಬನ್ನಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲು ಅರ್ಜುನ್ ಅವರು ಏನೇ ಮಾಡಿದರೂ ಟ್ರೆಂಡಿಂಗ್​ನಲ್ಲಿರುತ್ತಾರೆ. ಈಗ ಅವರು ಮಾಡಿರುವ ಕೆಲಸಕ್ಕೆKlin Kaara Konidela ಅಭಿಮಾನಿಗಳ ವಲಯದಲ್ಲಿ ಮೆಚ್ಚುಗೆ ಸಿಕ್ಕಿದೆ.

ಇದನ್ನೂ ಓದಿ: ‘ಜವಾನ್​’ ಸಿನಿಮಾದಲ್ಲಿ ನಟಿಸಲ್ವಾ ಅಲ್ಲು ಅರ್ಜುನ್​? ಶಾರುಖ್​ ಖಾನ್​ ಚಿತ್ರದ ಬಗ್ಗೆ ಹತ್ತಾರು ಗಾಸಿಪ್​

ಅಲ್ಲು ಅರ್ಜುನ್ ಅವರು ಪ್ರಸ್ತುತ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ನಿರ್ದೇಶಕ ಸುಕುಮಾರ್ ಅವರು ಹೆಚ್ಚು ಶ್ರಮ ಹಾಕುತ್ತಿದ್ದಾರೆ. ರಶ್ಮಿಕಾ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ಶ್ರೀಲೀಲಾ ವಿಶೇಷ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ‘ರಾಮ್ ಚರಣ್’ ಗೇಮ್ ಚೇಂಜರ್ ಶೂಟಿಂಗ್​​ನಲ್ಲಿ ತೊಡಗಿಕೊಂಡಿದ್ದಾರೆ. ಶಂಕರ್ ನಿರ್ದೇಶನದ ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ