Allu Arjun: ಪೊಲೀಸ್ ವಿಚಾರಣೆ ವೇಳೆ ಅಲ್ಲು ಅರ್ಜುನ್​ಗೆ ಕೇಳಿದ ಪ್ರಶ್ನೆಗಳಿವು

ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಡಿಸೆಂಬರ್ 23ರಂದು ನೋಟಿಸ್ ನೀಡಲಾಗಿತ್ತು. ಈ ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಅಲ್ಲು ಅರ್ಜುನ್ ಅವರನ್ನು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

Allu Arjun: ಪೊಲೀಸ್ ವಿಚಾರಣೆ ವೇಳೆ ಅಲ್ಲು ಅರ್ಜುನ್​ಗೆ ಕೇಳಿದ ಪ್ರಶ್ನೆಗಳಿವು
ಅಲ್ಲು ಅರ್ಜುನ್

Updated on: Dec 24, 2024 | 12:27 PM

ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತದ ಕೇಸ್​ಗೆ ಸಂಬಂಧಿಸಿ ಅಲ್ಲು ಅರ್ಜುನ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸರು ಅಲ್ಲು ಅರ್ಜುನ್​ಗೆ ಡಿಸೆಂಬರ್ 23ರಂದು ನೋಟಿಸ್ ಕಳುಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ಪೊಲೀಸರು ಹಲವು ಪ್ರಶ್ನೆಗಳನ್ನು ಎದುರಿಸಿದ್ದಾರೆ. ಇದಕ್ಕೆ ಅವರು ಯಾವ ರೀತಿಯಲ್ಲಿ ಉತ್ತರಿಸಿದರು ಎನ್ನುವ ಪ್ರಶ್ನೆ ಮೂಡಿದೆ.

ಅಲ್ಲು ಅರ್ಜುನ್ ಥಿಯೇಟರ್​ಗೆ ಬಂದಾಗ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ದರು. ಅಲ್ಲು ಅರ್ಜುನ್ ಅವರ ಬೌನ್ಸರ್‌ಗಳು ಪ್ರೇಕ್ಷಕರನ್ನು ಹಿಂದಕ್ಕೆ ತಳ್ಳಿದಾಗ ಕಾಲ್ತುಳಿತ ಉಂಟಾಯಿತು ಎನ್ನಲಾಗಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮಗನೂ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಥಿಯೇಟರ್ ಮಾಲೀಕರೊಂದಿಗೆ ಅಲ್ಲು ಅರ್ಜುನ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಅಲ್ಲು ಅರ್ಜುನ್ ಅವರು ಈ ಪ್ರಕರಣದಲ್ಲಿ A11 ಆಗಿದ್ದಾರೆ. ಈಗ ಅವರಿಗೆ ವಿಚಾರಣೆ ವೇಳೆ ಕೆಲವು ಪ್ರಶ್ನೆಗಳನ್ನು ಕೇಳಲಾಗಿದೆ.

  • ಥಿಯೇಟರ್‌ಗೆ ಬರುವ ಬಗ್ಗೆ ನೀವು ಯಾರಿಗೆ ತಿಳಿಸಿದ್ದಿರಿ?
  • ನೀವು ರೋಡ್ ಶೋಗೆ ಅನುಮತಿ ತೆಗೆದುಕೊಂಡಿದ್ದೀರಾ ಅಥವಾ ಇಲ್ಲವೇ?
  • ಅನುಮತಿ ನಿರಾಕರಿಸಲಾಗಿದೆ ಎಂದು ಯಾರೂ ಹೇಳಲಿಲ್ಲವೇ?
  • ನಿಮ್ಮ ಕುಟುಂಬದ ಯಾವ ಸದಸ್ಯರು ಥಿಯೇಟರ್​ಗೆ ಬಂದಿದ್ದರು?
  • ನೀವು ಥಿಯೇಟರ್​ನಲ್ಲಿ ಇದ್ದಾಗ ರೇವತಿ ಸತ್ತಿದ್ದು ಗೊತ್ತಿರಲಿಲ್ಲವೇ?
  • ಎಸಿಪಿ ಮತ್ತು ಸಿಐ ನಿಮ್ಮನ್ನು ಭೇಟಿ ಮಾಡಿದ್ದು ನಿಜವಲ್ಲವೇ?
  • ನಿಮ್ಮೊಂದಿಗೆ ಎಷ್ಟು ಬೌನ್ಸರ್‌ಗಳು ಬಂದರು? ನೀವು ಎಲ್ಲಿಂದ ಬಂದಿರಿ?
  • ಅಭಿಮಾನಿಗಳ ಮೇಲೆ ದಾಳಿ ಮಾಡಿದ ಬೌನ್ಸರ್‌ಗಳ ವಿವರಗಳೇನು?
  • ಪ್ರೆಸ್‌ಮೀಟ್‌ನಲ್ಲಿ ನೀವು ಹೇಳಿದ್ದಕ್ಕೆ ಅರ್ಥವೇನು?
  • ಮಹಿಳೆಯ ಸಾವಿನ ಬಗ್ಗೆ ನಿಮಗೆ ಯಾವಾಗ ಗೊತ್ತಾಯಿತು?
  • ನೀವು 2:45 ಕ್ಕೆ ಥಿಯೇಟರ್‌ನಲ್ಲಿದ್ದೀರಿ ಎಂಬುದು ನಿಜವಲ್ಲವೇ?
  • 850 ಮೀಟರ್ ರೋಡ್ ಶೋ ಮಾಡಿದ್ದು ಏಕೆ?
  • ಹೊರಡುವಾಗ ಮತ್ತೇಕೆ ಅಭಿಮಾನಿಗಳತ್ತ ಕೈ ಬೀಸಬೇಕಿತ್ತು?

ಇದನ್ನೂ ಓದಿ: ವಕೀಲರ ಜೊತೆಗೆ ಪೊಲೀಸರ ವಿಚಾರಣೆಗೆ ಹಾಜರಾದ ಅಲ್ಲು ಅರ್ಜುನ್

ಈ ಪ್ರಶ್ನೆಗಳನ್ನು ಅಲ್ಲು ಅರ್ಜುನ್ ಅವರು ಕೇಳಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅಲ್ಲು ಅರ್ಜುನ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ತಮ್ಮ ತಪ್ಪು ಇಲ್ಲ ಎಂದು ಹೇಳಿದ್ದರು. ಪೊಲೀಸರು ನನಗೆ ಏನು ಹೇಲೇ ಇಲ್ಲ ಎಂದು ಅಲ್ಲು ಅರ್ಜುನ್ ವಾದಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us