AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಬಳಿಕ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಇದೆ ಮೂರು ಆಯ್ಕೆ

ತಂದೆ ಅಲ್ಲು ಅರವಿಂದ್ ನಿರ್ಮಾಣ ಸಂಸ್ಥೆ ಗೀತಾ ಆರ್ಟ್ಸ್ ಜೊತೆ ಅಲ್ಲು ಅರ್ಜುನ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬೋಯಪತಿ ಶ್ರೀನು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಅವರು ಅಲ್ಲು ಅರ್ಜುನ್​ಗೆ ಕಥೆ ಹೇಳಿದ್ದಾರೆ.

‘ಪುಷ್ಪ 2’ ಬಳಿಕ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಇದೆ ಮೂರು ಆಯ್ಕೆ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Jan 28, 2024 | 7:14 PM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಆಗಸ್ಟ್ 15ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಆ ಬಳಿಕ ಅಲ್ಲು ಅರ್ಜುನ್ ಅವರು ಕೈಗೆ ಎತ್ತಿಕೊಳ್ಳಲಿರುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಮೂಡಿದೆ. ಅಲ್ಲು ಅರ್ಜುನ್ ಅವರಿಗೆ ಮೂರು ಸಿನಿಮಾಗಳು ಇವೆ. ಈ ಪೈಕಿ ಒಂದು ಸಿನಿಮಾನ ಅವರು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

‘ಪುಷ್ಪ 2’ ಸಿನಿಮಾದ ಶೂಟಿಂಗ್​ನಲ್ಲಿ ಅಲ್ಲು ಅರ್ಜುನ್ ಬ್ಯುಸಿ ಇದ್ದಾರೆ. ಅವರು ‘ಪುಷ್ಪ’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಇದು ಅವರ ಖುಷಿ ಹೆಚ್ಚಿಸಿದೆ. ಈ ಕಾರಣದಿಂದಲೇ ಅವರಿಗೆ ‘ಪುಷ್ಪ 2’ ಸಿನಿಮಾದ ಕೆಲಸಗಳದಿಂದ ಭರದಿಂದ ಮಾಡುತ್ತಿದ್ದಾರೆ. ಇದಾದ ಬಳಿಕ ಅವರ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಮೂಡಿದೆ.

ತಂದೆ ಅಲ್ಲು ಅರವಿಂದ್ ನಿರ್ಮಾಣ ಸಂಸ್ಥೆ ಗೀತಾ ಆರ್ಟ್ಸ್ ಜೊತೆ ಅಲ್ಲು ಅರ್ಜುನ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬೋಯಪತಿ ಶ್ರೀನು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಅವರು ಅಲ್ಲು ಅರ್ಜುನ್​ಗೆ ಕಥೆ ಹೇಳಿದ್ದಾರೆ. ಇಬ್ಬರೂ ಈ ಮೊದಲು ‘ಸರೈನೋಡು’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಅಲ್ಲು ಅರ್ಜುನ್ ಅವರು ತ್ರಿವಿಕ್ರಂ ಶ್ರೀನಿವಾಸ್ ಜೊತೆ ಸಿನಿಮಾ ಮಾಡಬೇಕಿದೆ. ಆದರೆ, ‘ಗುಂಟೂರು ಖಾರಂ’ ಫಲಿತಾಂಶದಿಂದ ಅಲ್ಲು ಅರ್ಜುನ್ ಅವರು ಸ್ವಲ್ಪ ಆಲೋಚನೆ ಮಾಡುತ್ತಿದ್ದಾರೆ. ಈ ಬಗ್ಗೆ ಅವರು ಆಲೋಚನೆ ಮಾಡುತ್ತಿದ್ದಾರೆ.

ಅಟ್ಲಿ ಜೊತೆಯೂ ಅಲ್ಲು ಅರ್ಜುನ್ ಸಿನಿಮಾ ಮಾಡಬೇಕಿದೆ. ಇದು ಅಟ್ಲಿ ನಿರ್ದೇಶನದ ಮಾಡುತ್ತಿರುವ ಮೊದಲ ತೆಲುಗು ಸಿನಿಮಾ. ಈ ಚಿತ್ರವನ್ನು ಆಯ್ಕೆ ಮಾಡಿಕೊಳ್ಳಲೂ ಅಲ್ಲು ಅರ್ಜುನ್​ಗೆ ಅವಕಾಶ ಇದೆ. ಅಲ್ಲು ಅರ್ಜುನ್​ ಅವರಿಗೆ ಮೂರು ಅತ್ಯುತ್ತಮ ಅವಕಾಶ ಇದೆ. ಇದರಲ್ಲಿ ಯಾವುದನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ರಶ್ಮಿಕಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡೋದು ಯಾವಾಗ? ಸದ್ಯಕ್ಕಂತೂ ಸಿಗಲ್ಲ ಉತ್ತರ..

ಅಲ್ಲು ಅರ್ಜುನ್ ಅವರ ನಟನೆಯ ‘ಪುಷ್ಪ 2’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಜೊತೆಯಾಗಿದ್ದಾರೆ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ