AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಬಳಿಕ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಇದೆ ಮೂರು ಆಯ್ಕೆ

ತಂದೆ ಅಲ್ಲು ಅರವಿಂದ್ ನಿರ್ಮಾಣ ಸಂಸ್ಥೆ ಗೀತಾ ಆರ್ಟ್ಸ್ ಜೊತೆ ಅಲ್ಲು ಅರ್ಜುನ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬೋಯಪತಿ ಶ್ರೀನು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಅವರು ಅಲ್ಲು ಅರ್ಜುನ್​ಗೆ ಕಥೆ ಹೇಳಿದ್ದಾರೆ.

‘ಪುಷ್ಪ 2’ ಬಳಿಕ ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಇದೆ ಮೂರು ಆಯ್ಕೆ
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Jan 28, 2024 | 7:14 PM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಆಗಸ್ಟ್ 15ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಆ ಬಳಿಕ ಅಲ್ಲು ಅರ್ಜುನ್ ಅವರು ಕೈಗೆ ಎತ್ತಿಕೊಳ್ಳಲಿರುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಮೂಡಿದೆ. ಅಲ್ಲು ಅರ್ಜುನ್ ಅವರಿಗೆ ಮೂರು ಸಿನಿಮಾಗಳು ಇವೆ. ಈ ಪೈಕಿ ಒಂದು ಸಿನಿಮಾನ ಅವರು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

‘ಪುಷ್ಪ 2’ ಸಿನಿಮಾದ ಶೂಟಿಂಗ್​ನಲ್ಲಿ ಅಲ್ಲು ಅರ್ಜುನ್ ಬ್ಯುಸಿ ಇದ್ದಾರೆ. ಅವರು ‘ಪುಷ್ಪ’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಇದು ಅವರ ಖುಷಿ ಹೆಚ್ಚಿಸಿದೆ. ಈ ಕಾರಣದಿಂದಲೇ ಅವರಿಗೆ ‘ಪುಷ್ಪ 2’ ಸಿನಿಮಾದ ಕೆಲಸಗಳದಿಂದ ಭರದಿಂದ ಮಾಡುತ್ತಿದ್ದಾರೆ. ಇದಾದ ಬಳಿಕ ಅವರ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಮೂಡಿದೆ.

ತಂದೆ ಅಲ್ಲು ಅರವಿಂದ್ ನಿರ್ಮಾಣ ಸಂಸ್ಥೆ ಗೀತಾ ಆರ್ಟ್ಸ್ ಜೊತೆ ಅಲ್ಲು ಅರ್ಜುನ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬೋಯಪತಿ ಶ್ರೀನು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಅವರು ಅಲ್ಲು ಅರ್ಜುನ್​ಗೆ ಕಥೆ ಹೇಳಿದ್ದಾರೆ. ಇಬ್ಬರೂ ಈ ಮೊದಲು ‘ಸರೈನೋಡು’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.

ಅಲ್ಲು ಅರ್ಜುನ್ ಅವರು ತ್ರಿವಿಕ್ರಂ ಶ್ರೀನಿವಾಸ್ ಜೊತೆ ಸಿನಿಮಾ ಮಾಡಬೇಕಿದೆ. ಆದರೆ, ‘ಗುಂಟೂರು ಖಾರಂ’ ಫಲಿತಾಂಶದಿಂದ ಅಲ್ಲು ಅರ್ಜುನ್ ಅವರು ಸ್ವಲ್ಪ ಆಲೋಚನೆ ಮಾಡುತ್ತಿದ್ದಾರೆ. ಈ ಬಗ್ಗೆ ಅವರು ಆಲೋಚನೆ ಮಾಡುತ್ತಿದ್ದಾರೆ.

ಅಟ್ಲಿ ಜೊತೆಯೂ ಅಲ್ಲು ಅರ್ಜುನ್ ಸಿನಿಮಾ ಮಾಡಬೇಕಿದೆ. ಇದು ಅಟ್ಲಿ ನಿರ್ದೇಶನದ ಮಾಡುತ್ತಿರುವ ಮೊದಲ ತೆಲುಗು ಸಿನಿಮಾ. ಈ ಚಿತ್ರವನ್ನು ಆಯ್ಕೆ ಮಾಡಿಕೊಳ್ಳಲೂ ಅಲ್ಲು ಅರ್ಜುನ್​ಗೆ ಅವಕಾಶ ಇದೆ. ಅಲ್ಲು ಅರ್ಜುನ್​ ಅವರಿಗೆ ಮೂರು ಅತ್ಯುತ್ತಮ ಅವಕಾಶ ಇದೆ. ಇದರಲ್ಲಿ ಯಾವುದನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ರಶ್ಮಿಕಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡೋದು ಯಾವಾಗ? ಸದ್ಯಕ್ಕಂತೂ ಸಿಗಲ್ಲ ಉತ್ತರ..

ಅಲ್ಲು ಅರ್ಜುನ್ ಅವರ ನಟನೆಯ ‘ಪುಷ್ಪ 2’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಜೊತೆಯಾಗಿದ್ದಾರೆ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?