AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Allu Arjun: ‘ಪುಷ್ಪ 2’ ಚಿತ್ರದ ಎಲ್ಲ ಹಕ್ಕುಗಳಿಗೆ 1050 ಕೋಟಿ ರೂ. ಕೇಳ್ತಿದ್ದಾರಾ ಅಲ್ಲು ಅರ್ಜುನ್​?

Pushpa 2 | Kamaal R Khan: ಕಮಾಲ್​ ಆರ್. ಖಾನ್​ ಅವರು ಒಮ್ಮೆ ಜೈಲಿಗೆ ಹೋಗಿಬಂದರೂ ಸೈಲೆಂಟ್​ ಆಗಿಲ್ಲ. ಸದ್ಯ ಅವರು ‘ಪುಷ್ಪ 2’ ಚಿತ್ರದ ಬಗ್ಗೆ ಅಚ್ಚರಿಯ ರೀತಿಯಲ್ಲಿ ಟ್ವೀಟ್​ ಮಾಡಿದ್ದಾರೆ.

Allu Arjun: ‘ಪುಷ್ಪ 2’ ಚಿತ್ರದ ಎಲ್ಲ ಹಕ್ಕುಗಳಿಗೆ 1050 ಕೋಟಿ ರೂ. ಕೇಳ್ತಿದ್ದಾರಾ ಅಲ್ಲು ಅರ್ಜುನ್​?
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: Mar 02, 2023 | 11:03 AM

Share

2023ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ಪುಷ್ಪ 2’ ಚಿತ್ರ ಮುಂಚೂಣಿಯಲ್ಲಿದೆ. ಅಲ್ಲು ಅರ್ಜುನ್​ (Allu Arjun) ನಟನೆಯ ಈ ಸಿನಿಮಾಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಖ್ಯಾತ ನಿರ್ದೇಶಕ ಸುಕುಮಾರ್​ ಅವರು ಅದ್ದೂರಿಯಾಗಿ ಈ ಚಿತ್ರವನ್ನು ಕಟ್ಟಿಕೊಡುತ್ತಿದ್ದಾರೆ. ಈಗಾಗಲೇ ಶೂಟಿಂಗ್​ ಆರಂಭವಾಗಿದೆ. ಘಟಾನುಘಟಿ ಕಲಾವಿದರು ‘ಪುಷ್ಪ 2’ (Pushpa 2) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಎಷ್ಟು ಕಮಾಯಿ ಮಾಡಬಹುದು ಎಂಬ ಕೌತುಕ ಸಿನಿಪ್ರಿಯರ ಮನದಲ್ಲಿದೆ. ಅಚ್ಚರಿ ಏನೆಂದರೆ, ಬಿಡುಗಡೆಗೂ ಮುನ್ನವೇ ‘ಪುಷ್ಪ 2’ ಚಿತ್ರದಿಂದ ಅಲ್ಲು ಅರ್ಜುನ್​ ಅವರು 1050 ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎಂದು ಕಮಾಲ್​ ಆರ್​. ಖಾನ್​ ಮಾಹಿತಿ (Kamaal R Khan) ಹಂಚಿಕೊಂಡಿದ್ದಾರೆ.

ಟ್ವಿಟರ್​ನಲ್ಲಿ ಕಮಾಲ್​ ಆರ್​. ಖಾನ್​ ಅವರು ಆ್ಯಕ್ಟೀವ್​ ಆಗಿದ್ದಾರೆ. ಅವರಿವರ ಬಗ್ಗೆ ಇಲ್ಲಸಲ್ಲದ ಟ್ವೀಟ್​ ಮಾಡಿದ ಕಾರಣಕ್ಕೆ ಅವರು ಈಗಾಗಲೇ ಒಂದು ಬಾರಿ ಜೈಲಿಗೂ ಹೋಗಿಬಂದಿದ್ದಾರೆ. ಆದರೂ ಅವರು ಸೈಲೆಂಟ್​ ಆಗಿಲ್ಲ. ಸದ್ಯ ಅವರು ‘ಪುಷ್ಪ 2’ ಚಿತ್ರದ ಬಗ್ಗೆ ಅಚ್ಚರಿಯ ರೀತಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಇದನ್ನೂ ಓದಿ: Allu Arjun: ಅಲ್ಲು ಅರ್ಜುನ್​​ಗೆ ಯುಎಇ ಇಂದ ಸಿಕ್ತು ಗೋಲ್ಡನ್ ವೀಸಾ; ಇದರ ವಿಶೇಷತೆ ಏನು?

‘ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಚಿತ್ರದ ಎಲ್ಲ ಹಕ್ಕುಗಳಿಗೆ 1050 ಕೋಟಿ ರೂಪಾಯಿ ಕೇಳುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರದ ಹಕ್ಕುಗಳು ಮಾರಾಟ ಆಗಿದ್ದು 750 ಕೋಟಿ ರೂಪಾಯಿಗಳಿಗೆ. ಅಂದರೆ, ತಮ್ಮ ಸಿನಿಮಾ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ದೊಡ್ಡದು ಎಂಬುದು ಅಲ್ಲು ಅರ್ಜುನ್​ ನಂಬಿಕೆ. ಸರಿ ಬಿಡಿ’ ಎಂದು ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

ಏಪ್ರಿಲ್ 8ರಂದು ‘ಪುಷ್ಪ 2’ ಟೀಸರ್​:

‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಗಿದ್ದರಿಂದ ಅದರ ಸೀಕ್ವೆಲ್​ ಮೇಲೆ ನಿರೀಕ್ಷೆ ಜೋರಾಗಿದೆ. ಎರಡನೇ ಪಾರ್ಟ್​ಗೆ ಶೂಟಿಂಗ್​ ನಡೆಯುತ್ತಿದೆ. ಆದಷ್ಟು ಬೇಗ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡ ಪ್ರಯತ್ನಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್​ 8ರಂದು ‘ಪುಷ್ಪ 2’ ಚಿತ್ರದ ಟೀಸರ್​ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಆದರೂ ಗಾಸಿಪ್​ ಬಲವಾಗಿ ಹಬ್ಬಿದೆ.

ಇದನ್ನೂ ಓದಿ: Allu Arjun: ‘ಪುಷ್ಪ 2’ ಚಿತ್ರದ ಶೂಟಿಂಗ್​ಗೆ ಬಂದ ಅಲ್ಲು ಅರ್ಜುನ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

ಏಪ್ರಿಲ್​ 8ರಂದು ಅಲ್ಲು ಅರ್ಜುನ್​ ಜನ್ಮದಿನ. ಆ ವಿಶೇಷ ದಿನದಂದು ಖಂಡಿತವಾಗಿಯೂ ನಿರ್ದೇಶಕ ಸುಕುಮಾರ್​ ಅವರು ಅಭಿಮಾನಿಗಳಿಗೆ ನಿರಾಸೆ ಮಾಡುವುದಿಲ್ಲ ಎಂಬುದು ಹಲವರ ನಂಬಿಕೆ. ಹಾಗಾಗಿ ಆ ದಿನಾಂಕದ ಮೇಲೆ ಕಣ್ಣಿಡಲಾಗಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಜೊತೆಗೆ ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ