AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್​; ಆಲಿಯಾ ಭಟ್​, ಕೃತಿ ಸನೋನ್​ಗೆ ‘ಅತ್ಯುತ್ತಮ ನಟಿ’ ಅವಾರ್ಡ್​

ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ’ ಚಿತ್ರದಲ್ಲಿನ ಅಭಿನಯಕ್ಕೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಕ್ಕಾಗಿ ಆಲಿಯಾ ಭಟ್​ ಮತ್ತು ‘ಮಿಮಿ’ ಸಿನಿಮಾಗಾಗಿ ಕೃತಿ ಸನೋನ್​ ಅವರು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್​; ಆಲಿಯಾ ಭಟ್​, ಕೃತಿ ಸನೋನ್​ಗೆ ‘ಅತ್ಯುತ್ತಮ ನಟಿ’ ಅವಾರ್ಡ್​
ಕೃತಿ ಸನೋನ್​, ಅಲ್ಲು ಅರ್ಜುನ್​, ಆಲಿಯಾ ಭಟ್​
ಮದನ್​ ಕುಮಾರ್​
|

Updated on: Aug 24, 2023 | 7:05 PM

Share

ಸಿನಿಪ್ರಿಯರು ಮತ್ತು ಸೆಲೆಬ್ರಿಟಿಗಳು ಬಹಳ ಕಾತರದಿಂದ ಕಾಯುತ್ತಿದ್ದ ರಾಷ್ಟ್ರ ಪ್ರಶಸ್ತಿ (69th National Film Award) ಪಟ್ಟಿ ಪ್ರಕಟ ಆಗಿದೆ. ಇಂದು (ಆಗಸ್ಟ್​ 24) ದೆಹಲಿಯಲ್ಲಿ 69ನೇ ನ್ಯಾಷನಲ್​ ಫಿಲ್ಮ್​ ಅವಾರ್ಡ್​ ಘೋಷಣೆ ಮಾಡಲಾಗಿದೆ. 2021ರಲ್ಲಿ ಸೆನ್ಸಾರ್​ ಪ್ರಮಾಣ ಪತ್ರ ಪಡೆದ ಸಿನಿಮಾಗಳನ್ನು ಈ ಸಾಲಿನ ಪ್ರಶಸ್ತಿಗೆ ಪರಿಗಣಿಸಲಾಗಿದೆ. ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರು ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರಿಗೆ ಈ ಗೌರವ ಸಂದಿದೆ. ಇನ್ನು, ನಟಿಯಾದ ಆಲಿಯಾ ಭಟ್​ ಮತ್ತು ಕೃತಿ ಸನೋನ್​ ಅವರು ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಈ ಸಾಧನೆ ಮಾಡಿದ್ದಕ್ಕಾಗಿ ಎಲ್ಲರೂ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಲ್ಲು ಅರ್ಜುನ್​, ಕೃತಿ ಸನೋನ್​ ಮತ್ತು ಆಲಿಯಾ ಭಟ್ (Alia Bhatt)​ ಅವರ ಅಭಿಮಾನಿಗಳು ಹಿರಿಹಿರಿ ಹಿಗ್ಗುತ್ತಿದ್ದಾರೆ.

‘ಪುಷ್ಪ’ ಸಿನಿಮಾಗೆ ಸುಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. 2021ರ ಡಿಸೆಂಬರ್​ 17ರಂದು ಈ ಸಿನಿಮಾ ಬಿಡುಗಡೆ ಆಯಿತು. ಅಲ್ಲು ಅರ್ಜುನ್​ ಅವರು ಭಿನ್ನವಾದ ಗೆಟಪ್​ನಲ್ಲಿ ಕಾಣಿಸಿಕೊಂಡರು. ಅವರ ಮ್ಯಾನರಿಸಂ ನೋಡಿ ಅಭಿಮಾನಿಗಳು ಫಿದಾ ಆದರು. ‘ಶ್ರೀವಲ್ಲಿ..’ ಹಾಡಿನಲ್ಲಿ ಅಲ್ಲು ಅರ್ಜುನ್​ ಮಾಡಿದ ಡ್ಯಾನ್ಸ್​ ಸ್ಟೆಪ್​ ಸಖತ್​ ವೈರಲ್​ ಆಯಿತು. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿದ್ದ ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತು. ಈಗ ಆ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಅಲ್ಲು ಅರ್ಜುನ್​ ಅವರಿಗೆ ನ್ಯಾಷನಲ್​ ಅವಾರ್ಡ್​ ಸಿಕ್ಕಿರುವುದರಿಂದ ‘ಪುಷ್ಪ 2’ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

ಇದನ್ನೂ ಓದಿ: ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​

ನಟಿ ಕೃತಿ ಸನೋನ್​ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬರೀ ಗ್ಲಾಮರ್ ಪಾತ್ರಗಳು ಮಾತ್ರವಲ್ಲದೇ ಅಭಿನಯಕ್ಕೆ ಮಹತ್ವ ಇರುವಂತಹ ಪಾತ್ರಗಳ ಮೂಲಕವೂ ಅವರು ಗಮನ ಸೆಳೆಯುತ್ತಾರೆ. ‘ಮಿಮಿ’ ಸಿನಿಮಾದಲ್ಲಿ ಕೃತಿ ಸನೋನ್​ ಅವರು ಬಾಡಿಗೆ ತಾಯಿ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ‘ಪರಮ ಸುಂದರಿ..’ ಹಾಡು ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಕೃತಿ ಸನೋನ್​ ಅವರ ನಟನೆಗೆ ಅಭಿಮಾನಿಗಳು ಫಿದಾ ಆದರು. ಈಗ 69ನೇ ರಾಷ್ಟ್ರ ಪ್ರಶಸ್ತಿಯಲ್ಲಿ ಆಲಿಯಾ ಭಟ್​ ಜೊತೆ ಕೃತಿ ಸನೋನ್​ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಯಾರಿಗೆಲ್ಲ ಸಿಕ್ಕಿದೆ ನ್ಯಾಷನಲ್​ ಅವಾರ್ಡ್​? ಇಲ್ಲಿದೆ ಲೈವ್​ ವಿಡಿಯೋ

ಆಲಿಯಾ ಭಟ್​ ಅವರ ನಟನೆ ಬಗ್ಗೆ ಹೊಸದಾಗಿ ಹೇಳಬೇಕಾಗಿದ್ದಿಲ್ಲ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ಅವರು ಗಂಗೂಬಾಯಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಖ್ಯಾತ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. 2022ರ ಫೆಬ್ರವರಿ 25ರಂದು ಈ ಸಿನಿಮಾ ಬಿಡುಗಡೆ ಆಯಿತು. ಈ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿತು. ಈಗ ಪ್ರಶಸ್ತಿ ಬಂದಿರುವುದು ಚಿತ್ರತಂಡಕ್ಕೆ ಸಂತಸ ತಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. 

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್