AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಲಚೇತನ ವ್ಯಕ್ತಿಗಾಗಿ ಬಾಹುಬಲಿ ಅವತಾರ ತಾಳಿದ ಅಲ್ಲು ಅರ್ಜುನ್; ಫೋಟೋ ವೈರಲ್

ವಿಶಾಖಪಟ್ಟಣದಲ್ಲಿ ’ಪುಷ್ಪ 2’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ವೇಳೆ ವಿಕಲಚೇತನ ವ್ಯಕ್ತಿ ಅಲ್ಲು ಅರ್ಜುನ್​ನ ಭೇಟಿ ಮಾಡಲು ಬಂದಿದ್ದರು.

ವಿಕಲಚೇತನ ವ್ಯಕ್ತಿಗಾಗಿ ಬಾಹುಬಲಿ ಅವತಾರ ತಾಳಿದ ಅಲ್ಲು ಅರ್ಜುನ್; ಫೋಟೋ ವೈರಲ್
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Feb 10, 2023 | 11:45 AM

Share

‘ಬಾಹುಬಲಿ’ (Bahubali) ಚಿತ್ರದಲ್ಲಿ ಈಶ್ವರನ ಲಿಂಗವನ್ನು ಪ್ರಭಾಸ್ ಎತ್ತಿಕೊಂಡು ಹೋಗುತ್ತಾರೆ. ಈ ದೃಶ್ಯ ಸಖತ್ ಫೇಮಸ್ ಆಗಿತ್ತು. ಅನೇಕ ಮೀಮ್​ಗಳಿಗೆ ಆ ದೃಶ್ಯ ಬಳಕೆ ಆಗಿತ್ತು. ಈಗ ಅಲ್ಲು ಅರ್ಜುನ್ ಅವರು ವಿಕಲಚೇತನ ವ್ಯಕ್ತಿಯನ್ನು ಎತ್ತಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದ್ದು, ಅಲ್ಲು ಅರ್ಜುನ್ (Allu Arjun) ಅವರನ್ನು ಎಲ್ಲರೂ ಬಾಹುಬಲಿಗೆ ಹೋಲಿಕೆ ಮಾಡುತ್ತಿದ್ದಾರೆ. ಅಭಿಮಾನಿಗೆ ಅಲ್ಲು ಅರ್ಜುನ್ ತೋರಿದ ಪ್ರೀತಿ ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಅಲ್ಲು ಅರ್ಜುನ್ ಅವರ ನಟನೆಯ ‘ಪುಷ್ಪ’ ಸಿನಿಮಾ ಹಿಟ್ ಆಯಿತು. ಈ ಚಿತ್ರದಿಂದ ಅಲ್ಲು ಅರ್ಜುನ್ ಅವರ ಖ್ಯಾತಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆಯಿತು. ಅಲ್ಲು ಅರ್ಜುನ್ ಅವರು ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಮೊದಲ ಪಾರ್ಟ್ ಹಿಟ್ ಆಗಿದ್ದರಿಂದ ಎರಡನೇ ಪಾರ್ಟ್​ಗೆ ಹೆಚ್ಚಿನ ಕಾಳಜಿ ವಹಿಸಿ ಶೂಟ್ ಮಾಡಲಾಗುತ್ತಿದೆ.  ಸದ್ಯ ವಿಶಾಖಪಟ್ಟಣದಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ವೇಳೆ ವಿಕಲಚೇತನ ವ್ಯಕ್ತಿ ಅಲ್ಲು ಅರ್ಜುನ್​ನ ಭೇಟಿ ಮಾಡಲು ಬಂದಿದ್ದರು.

ವಿಕಲಚೇತನ ವ್ಯಕ್ತಿಯನ್ನು ನೋಡುತ್ತಿದ್ದಂತೆ ಅಲ್ಲು ಅರ್ಜುನ್ ತಡ ಮಾಡಲಿಲ್ಲ. ಅಭಿಮಾನಿ ಬಳಿ ತೆರಳಿ ಅವರನ್ನು ಎತ್ತಿಕೊಂಡಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಲ್ಲು ಅರ್ಜುನ್ ಅವರನ್ನು ಅನೇಕರು ಬಾಹುಬಲಿಗೆ ಹೋಲಿಕೆ ಮಾಡುತ್ತಿದ್ದಾರೆ. ರಾಮ್ ಚರಣ್ ಫೋಟೋ ಕೂಡ ವೈರಲ್ ಆಗಿತ್ತು. 9 ವರ್ಷದ ಕ್ಯಾನ್ಸರ್​ ರೋಗಿಯನ್ನು ಭೇಟಿ ಮಾಡಿ ರಾಮ್ ಚರಣ್ ಕಷ್ಟಸುಖ ವಿಚಾರಿಸಿದ್ದರು. ರಾಮ್ ಚರಣ್​ನ ಭೇಟಿ ಮಾಡೋದು ಬಾಲಕನ ಆಸೆ ಆಗಿತ್ತು.

ಇದನ್ನೂ ಓದಿ
Image
150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
Image
ಮೂರೇ ದಿನಕ್ಕೆ ಅರ್ಧಶತಕ ಬಾರಿಸಿದ ಕಾರ್ತಿಕ್ ಆರ್ಯನ್ ಸಿನಿಮಾ; ಬಾಲಿವುಡ್​ಗೆ ಸಿಕ್ತು ಹೊಸ ಬೂಸ್ಟ್​
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಇದನ್ನೂ ಓದಿ:

‘ಪುಷ್ಪ 2’ ಸಿನಿಮಾ ಈ ವರ್ಷ ತೆರೆಗೆ ಬರುವ ನಿರೀಕ್ಷೆ ಇದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಎರಡನೇ ಪಾರ್ಟ್​ಗೆ ಪಾತ್ರವರ್ಗ ಹಿರಿದಾಗುವ ನಿರೀಕ್ಷೆ ಇದೆ. ಚಿತ್ರದ ಬಗ್ಗೆ ಸಾಕಷ್ಟು ಅಂತೆಕಂತೆಗಳು ಹುಟ್ಟಿಕೊಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್