AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​

Allu Arjun: ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಈ ನಡುವೆ ಒಂದಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​
ಅಲ್ಲು ಅರ್ಜುನ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 17, 2022 | 12:00 PM

ಇತ್ತೀಚಿನ ವರ್ಷಗಳಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಎನಿಸಿಕೊಂಡ ಸಿನಿಮಾಗಳಲ್ಲಿ ‘ಪುಷ್ಪ’ ಚಿತ್ರ (Pushpa Movie) ಕೂಡ ಪ್ರಮುಖವಾಗಿದೆ. ರಕ್ತಚಂದನ ಕಳ್ಳ ಸಾಗಣೆ ಕುರಿತ ಕಥೆ ಹೊಂದಿದ್ದ ಈ ಸಿನಿಮಾಗೆ ಸುಕುಮಾರ್​ ನಿರ್ದೇಶನವಿದೆ. ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಬಂಪರ್​ ಬೆಳೆ ತೆಗೆಯಿತು. ಈಗ ಇದರ ಎರಡನೇ ಪಾರ್ಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ವಿಶೇಷವಾಗಿತ್ತು. ಬೇರೆಲ್ಲ ಚಿತ್ರದಲ್ಲಿ ಸ್ಟೈಲಿಶ್​ ಆಗಿ ಕಾಣಿಸಿಕೊಳ್ಳುವ ಅವರು ‘ಪುಷ್ಪ’ ಚಿತ್ರದಲ್ಲಿ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಆದರೆ ಈಗ ಅವರು ಈ ಚಿತ್ರದ 2ನೇ ಪಾರ್ಟ್​ನಲ್ಲಿ (Pushpa 2 Movie) ಲುಕ್​ ಬದಲಾಯಿಸಿಕೊಳ್ಳುತ್ತಾರಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಈ ಕುರಿತು ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಅಷ್ಟಕ್ಕೂ ಜನರಿಗೆ ಈ ಅನುಮಾನ ಮೂಡಲು ಕಾರಣ ಆಗಿರುವುದು ಅಲ್ಲು ಅರ್ಜುನ್​ ಅವರ ಕೆಲವು ಹೊಸ ಫೋಟೋಗಳು.

ಅಲ್ಲು ಅರ್ಜುನ್ ಅವರು ಕುಟುಂಬದವರ ಜೊತೆ ವಿದೇಶಕ್ಕೆ ತೆರಳಿದ್ದಾರೆ. ಅವರ ಯುರೋಪ್ ಟ್ರಿಪ್​ನ ಕೆಲವು ಫೋಟೋಗಳು ವೈರಲ್​ ಆಗಿವೆ. ಅದರಲ್ಲಿ ಅಲ್ಲು ಅರ್ಜುನ್​ ಲುಕ್​ ಬದಲಾಗಿದೆ. ‘ಪುಷ್ಪ’ ಚಿತ್ರದಲ್ಲಿ ಉದ್ದ ಕೂಡಲು ಮತ್ತು ಗಡ್ಡ ಬಿಟ್ಟುಕೊಂಡು ಅವರು ನಟಿಸಿದ್ದರು. 2ನೇ ಪಾರ್ಟ್​ನ ಶೂಟಿಂಗ್​ ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈಗ ಅಲ್ಲು ಅರ್ಜುನ್​ ಅವರು ಉದ್ದ ಕೂದಲಿಗೆ ಕತ್ತರಿ ಹಾಕಿಕೊಂಡು, ಗಡ್ಡ ಟ್ರಿಮ್​ ಮಾಡಿಕೊಂಡಿದ್ದಾರೆ. ಹಾಗಾದರೆ ‘ಪುಷ್ಪ 2​’ ಚಿತ್ರದಲ್ಲಿ ಹಳೇ ಲುಕ್​ ಮುಂದುವರಿಯುವುದಿಲ್ಲವೇ ಎಂಬ ಅನುಮಾನ ಹುಟ್ಟಿಕೊಂಡಿದೆ.

ಒಂದು ವೇಳೆ ಅಲ್ಲು ಅರ್ಜುನ್​ ಅವರು ಮೊದಲ ಪಾರ್ಟ್​ ರೀತಿಯೇ ಎರಡನೇ ಪಾರ್ಟ್​ನಲ್ಲೂ ಕಾಣಿಸಿಕೊಳ್ಳಬೇಕು ಎಂದರೆ ಆ ರೀತಿ ಕೂದಲು ಬಿಡಲು, ಗಡ್ಡ ಬೆಳೆಸಿಕೊಳ್ಳಲು ಇನ್ನೂ ಎರಡು-ಮೂರು ತಿಂಗಳು ಬೇಕಾಗುತ್ತದೆ. ಹಾಗಾಗಿ ಜನರು ಎರಡು ಸಾಧ್ಯತೆಗಳನ್ನು ಊಹಿಸುತ್ತಿದ್ದಾರೆ. 2ನೇ ಪಾರ್ಟ್​ನಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ಬದಲಾಗಿರಬಹುದು ಅಥವಾ ಶೂಟಿಂಗ್​ ದಿನಾಂಕ ಮುಂದೂಡಿಕೆ ಆಗಿರಬಹುದು. ಆದರೆ ಈ ಕುರಿತು ಚಿತ್ರತಂಡದವರು ಯಾವುದೇ ಹೇಳಿಕೆ ನೀಡಿಲ್ಲ.

‘ಕೆಜಿಎಫ್​’ ಮತ್ತು ‘ಪುಷ್ಪ’ ಸಿನಿಮಾಗಳ ನಡುವೆ ಮೊದಲಿನಿಂದಲೂ ಹೋಲಿಕೆ ಮಾಡಲಾಗುತ್ತಿದೆ. ಈ ಸಿನಿಮಾಗಳ ನಡುವೆ ನೇರ ಪೈಪೋಟಿ ಇಲ್ಲದಿದ್ದರೂ ಕೂಡ ಯಾವ ಚಿತ್ರ ಎಷ್ಟು ರೆಕಾರ್ಡ್​ ಮಾಡಿತು ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ‘ಒಂದು ಪುಷ್ಪ ಸಿನಿಮಾ 10 ಕೆಜಿಎಫ್​ ಸಿನಿಮಾಗಳಿಗೆ ಸಮ’ ಎಂದು ಮಾತು ಟಾಲಿವುಡ್​ ಮಂದಿಯಿಂದ ಕೇಳಿಬಂದ ಬಳಿಕ ಈ ಹಣಾಹಣಿ ಶುರುವಾಯಿತು. ಈಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಊಹಿಸಲಾಗದಂತಹ ದಾಖಲೆಗಳನ್ನು ಮಾಡುತ್ತಿದೆ. ಎರಡನೇ ದಿನಕ್ಕೆ ಭಾರತದ ಮಾರುಕಟ್ಟೆಯಲ್ಲಿ ಬರೋಬ್ಬರಿ 240 ಕೋಟಿ ರೂಪಾಯಿ ರೂಪಾಯಿ ಗಳಿಸಿದೆ. ಈ ಗೆಲುವಿನಿಂದಾಗಿ ‘ಪುಷ್ಪ 2’ ತಂಡದ ಮೇಲೆ ಒತ್ತಡ ಹೆಚ್ಚಿದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:

ಅಲ್ಲು ಅರ್ಜುನ್​ ಜನ್ಮದಿನ: ಟಾಲಿವುಡ್​ ಸ್ಟಾರ್​ ನಟನ ಬಗ್ಗೆ ಇಲ್ಲಿವೆ 5 ವಿಶೇಷ ಮಾಹಿತಿ

ಅಲ್ಲು ಅರ್ಜುನ್ ರಿಜೆಕ್ಟ್ ಮಾಡಿದ್ದ ಈ ಚಿತ್ರಗಳು ಸೂಪರ್​ಹಿಟ್

ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ