‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​

Allu Arjun: ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಈ ನಡುವೆ ಒಂದಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​
ಅಲ್ಲು ಅರ್ಜುನ್
Follow us
| Updated By: ಮದನ್​ ಕುಮಾರ್​

Updated on: Apr 17, 2022 | 12:00 PM

ಇತ್ತೀಚಿನ ವರ್ಷಗಳಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಎನಿಸಿಕೊಂಡ ಸಿನಿಮಾಗಳಲ್ಲಿ ‘ಪುಷ್ಪ’ ಚಿತ್ರ (Pushpa Movie) ಕೂಡ ಪ್ರಮುಖವಾಗಿದೆ. ರಕ್ತಚಂದನ ಕಳ್ಳ ಸಾಗಣೆ ಕುರಿತ ಕಥೆ ಹೊಂದಿದ್ದ ಈ ಸಿನಿಮಾಗೆ ಸುಕುಮಾರ್​ ನಿರ್ದೇಶನವಿದೆ. ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಬಂಪರ್​ ಬೆಳೆ ತೆಗೆಯಿತು. ಈಗ ಇದರ ಎರಡನೇ ಪಾರ್ಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ವಿಶೇಷವಾಗಿತ್ತು. ಬೇರೆಲ್ಲ ಚಿತ್ರದಲ್ಲಿ ಸ್ಟೈಲಿಶ್​ ಆಗಿ ಕಾಣಿಸಿಕೊಳ್ಳುವ ಅವರು ‘ಪುಷ್ಪ’ ಚಿತ್ರದಲ್ಲಿ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಆದರೆ ಈಗ ಅವರು ಈ ಚಿತ್ರದ 2ನೇ ಪಾರ್ಟ್​ನಲ್ಲಿ (Pushpa 2 Movie) ಲುಕ್​ ಬದಲಾಯಿಸಿಕೊಳ್ಳುತ್ತಾರಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಈ ಕುರಿತು ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಅಷ್ಟಕ್ಕೂ ಜನರಿಗೆ ಈ ಅನುಮಾನ ಮೂಡಲು ಕಾರಣ ಆಗಿರುವುದು ಅಲ್ಲು ಅರ್ಜುನ್​ ಅವರ ಕೆಲವು ಹೊಸ ಫೋಟೋಗಳು.

ಅಲ್ಲು ಅರ್ಜುನ್ ಅವರು ಕುಟುಂಬದವರ ಜೊತೆ ವಿದೇಶಕ್ಕೆ ತೆರಳಿದ್ದಾರೆ. ಅವರ ಯುರೋಪ್ ಟ್ರಿಪ್​ನ ಕೆಲವು ಫೋಟೋಗಳು ವೈರಲ್​ ಆಗಿವೆ. ಅದರಲ್ಲಿ ಅಲ್ಲು ಅರ್ಜುನ್​ ಲುಕ್​ ಬದಲಾಗಿದೆ. ‘ಪುಷ್ಪ’ ಚಿತ್ರದಲ್ಲಿ ಉದ್ದ ಕೂಡಲು ಮತ್ತು ಗಡ್ಡ ಬಿಟ್ಟುಕೊಂಡು ಅವರು ನಟಿಸಿದ್ದರು. 2ನೇ ಪಾರ್ಟ್​ನ ಶೂಟಿಂಗ್​ ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈಗ ಅಲ್ಲು ಅರ್ಜುನ್​ ಅವರು ಉದ್ದ ಕೂದಲಿಗೆ ಕತ್ತರಿ ಹಾಕಿಕೊಂಡು, ಗಡ್ಡ ಟ್ರಿಮ್​ ಮಾಡಿಕೊಂಡಿದ್ದಾರೆ. ಹಾಗಾದರೆ ‘ಪುಷ್ಪ 2​’ ಚಿತ್ರದಲ್ಲಿ ಹಳೇ ಲುಕ್​ ಮುಂದುವರಿಯುವುದಿಲ್ಲವೇ ಎಂಬ ಅನುಮಾನ ಹುಟ್ಟಿಕೊಂಡಿದೆ.

ಒಂದು ವೇಳೆ ಅಲ್ಲು ಅರ್ಜುನ್​ ಅವರು ಮೊದಲ ಪಾರ್ಟ್​ ರೀತಿಯೇ ಎರಡನೇ ಪಾರ್ಟ್​ನಲ್ಲೂ ಕಾಣಿಸಿಕೊಳ್ಳಬೇಕು ಎಂದರೆ ಆ ರೀತಿ ಕೂದಲು ಬಿಡಲು, ಗಡ್ಡ ಬೆಳೆಸಿಕೊಳ್ಳಲು ಇನ್ನೂ ಎರಡು-ಮೂರು ತಿಂಗಳು ಬೇಕಾಗುತ್ತದೆ. ಹಾಗಾಗಿ ಜನರು ಎರಡು ಸಾಧ್ಯತೆಗಳನ್ನು ಊಹಿಸುತ್ತಿದ್ದಾರೆ. 2ನೇ ಪಾರ್ಟ್​ನಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ಬದಲಾಗಿರಬಹುದು ಅಥವಾ ಶೂಟಿಂಗ್​ ದಿನಾಂಕ ಮುಂದೂಡಿಕೆ ಆಗಿರಬಹುದು. ಆದರೆ ಈ ಕುರಿತು ಚಿತ್ರತಂಡದವರು ಯಾವುದೇ ಹೇಳಿಕೆ ನೀಡಿಲ್ಲ.

‘ಕೆಜಿಎಫ್​’ ಮತ್ತು ‘ಪುಷ್ಪ’ ಸಿನಿಮಾಗಳ ನಡುವೆ ಮೊದಲಿನಿಂದಲೂ ಹೋಲಿಕೆ ಮಾಡಲಾಗುತ್ತಿದೆ. ಈ ಸಿನಿಮಾಗಳ ನಡುವೆ ನೇರ ಪೈಪೋಟಿ ಇಲ್ಲದಿದ್ದರೂ ಕೂಡ ಯಾವ ಚಿತ್ರ ಎಷ್ಟು ರೆಕಾರ್ಡ್​ ಮಾಡಿತು ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ‘ಒಂದು ಪುಷ್ಪ ಸಿನಿಮಾ 10 ಕೆಜಿಎಫ್​ ಸಿನಿಮಾಗಳಿಗೆ ಸಮ’ ಎಂದು ಮಾತು ಟಾಲಿವುಡ್​ ಮಂದಿಯಿಂದ ಕೇಳಿಬಂದ ಬಳಿಕ ಈ ಹಣಾಹಣಿ ಶುರುವಾಯಿತು. ಈಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಊಹಿಸಲಾಗದಂತಹ ದಾಖಲೆಗಳನ್ನು ಮಾಡುತ್ತಿದೆ. ಎರಡನೇ ದಿನಕ್ಕೆ ಭಾರತದ ಮಾರುಕಟ್ಟೆಯಲ್ಲಿ ಬರೋಬ್ಬರಿ 240 ಕೋಟಿ ರೂಪಾಯಿ ರೂಪಾಯಿ ಗಳಿಸಿದೆ. ಈ ಗೆಲುವಿನಿಂದಾಗಿ ‘ಪುಷ್ಪ 2’ ತಂಡದ ಮೇಲೆ ಒತ್ತಡ ಹೆಚ್ಚಿದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:

ಅಲ್ಲು ಅರ್ಜುನ್​ ಜನ್ಮದಿನ: ಟಾಲಿವುಡ್​ ಸ್ಟಾರ್​ ನಟನ ಬಗ್ಗೆ ಇಲ್ಲಿವೆ 5 ವಿಶೇಷ ಮಾಹಿತಿ

ಅಲ್ಲು ಅರ್ಜುನ್ ರಿಜೆಕ್ಟ್ ಮಾಡಿದ್ದ ಈ ಚಿತ್ರಗಳು ಸೂಪರ್​ಹಿಟ್

ತಾಜಾ ಸುದ್ದಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ