AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​

Allu Arjun: ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಚಿತ್ರದ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆದರೆ ಈ ನಡುವೆ ಒಂದಷ್ಟು ಅನುಮಾನಗಳು ಹುಟ್ಟಿಕೊಂಡಿವೆ.

‘ಪುಷ್ಪ 2’ ಚಿತ್ರದ ಬಗ್ಗೆ ಮೂಡಿದೆ ಎರಡು ಅನುಮಾನ; ಇದಕ್ಕೆಲ್ಲ ಕಾರಣ ಅಲ್ಲು ಅರ್ಜುನ್​ ಹೊಸ ಲುಕ್​
ಅಲ್ಲು ಅರ್ಜುನ್
TV9 Web
| Edited By: |

Updated on: Apr 17, 2022 | 12:00 PM

Share

ಇತ್ತೀಚಿನ ವರ್ಷಗಳಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಎನಿಸಿಕೊಂಡ ಸಿನಿಮಾಗಳಲ್ಲಿ ‘ಪುಷ್ಪ’ ಚಿತ್ರ (Pushpa Movie) ಕೂಡ ಪ್ರಮುಖವಾಗಿದೆ. ರಕ್ತಚಂದನ ಕಳ್ಳ ಸಾಗಣೆ ಕುರಿತ ಕಥೆ ಹೊಂದಿದ್ದ ಈ ಸಿನಿಮಾಗೆ ಸುಕುಮಾರ್​ ನಿರ್ದೇಶನವಿದೆ. ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಬಂಪರ್​ ಬೆಳೆ ತೆಗೆಯಿತು. ಈಗ ಇದರ ಎರಡನೇ ಪಾರ್ಟ್​ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ವಿಶೇಷವಾಗಿತ್ತು. ಬೇರೆಲ್ಲ ಚಿತ್ರದಲ್ಲಿ ಸ್ಟೈಲಿಶ್​ ಆಗಿ ಕಾಣಿಸಿಕೊಳ್ಳುವ ಅವರು ‘ಪುಷ್ಪ’ ಚಿತ್ರದಲ್ಲಿ ರಗಡ್​ ಆಗಿ ಕಾಣಿಸಿಕೊಂಡಿದ್ದರು. ಆದರೆ ಈಗ ಅವರು ಈ ಚಿತ್ರದ 2ನೇ ಪಾರ್ಟ್​ನಲ್ಲಿ (Pushpa 2 Movie) ಲುಕ್​ ಬದಲಾಯಿಸಿಕೊಳ್ಳುತ್ತಾರಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಈ ಕುರಿತು ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಅಷ್ಟಕ್ಕೂ ಜನರಿಗೆ ಈ ಅನುಮಾನ ಮೂಡಲು ಕಾರಣ ಆಗಿರುವುದು ಅಲ್ಲು ಅರ್ಜುನ್​ ಅವರ ಕೆಲವು ಹೊಸ ಫೋಟೋಗಳು.

ಅಲ್ಲು ಅರ್ಜುನ್ ಅವರು ಕುಟುಂಬದವರ ಜೊತೆ ವಿದೇಶಕ್ಕೆ ತೆರಳಿದ್ದಾರೆ. ಅವರ ಯುರೋಪ್ ಟ್ರಿಪ್​ನ ಕೆಲವು ಫೋಟೋಗಳು ವೈರಲ್​ ಆಗಿವೆ. ಅದರಲ್ಲಿ ಅಲ್ಲು ಅರ್ಜುನ್​ ಲುಕ್​ ಬದಲಾಗಿದೆ. ‘ಪುಷ್ಪ’ ಚಿತ್ರದಲ್ಲಿ ಉದ್ದ ಕೂಡಲು ಮತ್ತು ಗಡ್ಡ ಬಿಟ್ಟುಕೊಂಡು ಅವರು ನಟಿಸಿದ್ದರು. 2ನೇ ಪಾರ್ಟ್​ನ ಶೂಟಿಂಗ್​ ಕೆಲವೇ ದಿನಗಳಲ್ಲಿ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈಗ ಅಲ್ಲು ಅರ್ಜುನ್​ ಅವರು ಉದ್ದ ಕೂದಲಿಗೆ ಕತ್ತರಿ ಹಾಕಿಕೊಂಡು, ಗಡ್ಡ ಟ್ರಿಮ್​ ಮಾಡಿಕೊಂಡಿದ್ದಾರೆ. ಹಾಗಾದರೆ ‘ಪುಷ್ಪ 2​’ ಚಿತ್ರದಲ್ಲಿ ಹಳೇ ಲುಕ್​ ಮುಂದುವರಿಯುವುದಿಲ್ಲವೇ ಎಂಬ ಅನುಮಾನ ಹುಟ್ಟಿಕೊಂಡಿದೆ.

ಒಂದು ವೇಳೆ ಅಲ್ಲು ಅರ್ಜುನ್​ ಅವರು ಮೊದಲ ಪಾರ್ಟ್​ ರೀತಿಯೇ ಎರಡನೇ ಪಾರ್ಟ್​ನಲ್ಲೂ ಕಾಣಿಸಿಕೊಳ್ಳಬೇಕು ಎಂದರೆ ಆ ರೀತಿ ಕೂದಲು ಬಿಡಲು, ಗಡ್ಡ ಬೆಳೆಸಿಕೊಳ್ಳಲು ಇನ್ನೂ ಎರಡು-ಮೂರು ತಿಂಗಳು ಬೇಕಾಗುತ್ತದೆ. ಹಾಗಾಗಿ ಜನರು ಎರಡು ಸಾಧ್ಯತೆಗಳನ್ನು ಊಹಿಸುತ್ತಿದ್ದಾರೆ. 2ನೇ ಪಾರ್ಟ್​ನಲ್ಲಿ ಅಲ್ಲು ಅರ್ಜುನ್​ ಅವರ ಲುಕ್​ ಬದಲಾಗಿರಬಹುದು ಅಥವಾ ಶೂಟಿಂಗ್​ ದಿನಾಂಕ ಮುಂದೂಡಿಕೆ ಆಗಿರಬಹುದು. ಆದರೆ ಈ ಕುರಿತು ಚಿತ್ರತಂಡದವರು ಯಾವುದೇ ಹೇಳಿಕೆ ನೀಡಿಲ್ಲ.

‘ಕೆಜಿಎಫ್​’ ಮತ್ತು ‘ಪುಷ್ಪ’ ಸಿನಿಮಾಗಳ ನಡುವೆ ಮೊದಲಿನಿಂದಲೂ ಹೋಲಿಕೆ ಮಾಡಲಾಗುತ್ತಿದೆ. ಈ ಸಿನಿಮಾಗಳ ನಡುವೆ ನೇರ ಪೈಪೋಟಿ ಇಲ್ಲದಿದ್ದರೂ ಕೂಡ ಯಾವ ಚಿತ್ರ ಎಷ್ಟು ರೆಕಾರ್ಡ್​ ಮಾಡಿತು ಎಂಬ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ‘ಒಂದು ಪುಷ್ಪ ಸಿನಿಮಾ 10 ಕೆಜಿಎಫ್​ ಸಿನಿಮಾಗಳಿಗೆ ಸಮ’ ಎಂದು ಮಾತು ಟಾಲಿವುಡ್​ ಮಂದಿಯಿಂದ ಕೇಳಿಬಂದ ಬಳಿಕ ಈ ಹಣಾಹಣಿ ಶುರುವಾಯಿತು. ಈಗ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಊಹಿಸಲಾಗದಂತಹ ದಾಖಲೆಗಳನ್ನು ಮಾಡುತ್ತಿದೆ. ಎರಡನೇ ದಿನಕ್ಕೆ ಭಾರತದ ಮಾರುಕಟ್ಟೆಯಲ್ಲಿ ಬರೋಬ್ಬರಿ 240 ಕೋಟಿ ರೂಪಾಯಿ ರೂಪಾಯಿ ಗಳಿಸಿದೆ. ಈ ಗೆಲುವಿನಿಂದಾಗಿ ‘ಪುಷ್ಪ 2’ ತಂಡದ ಮೇಲೆ ಒತ್ತಡ ಹೆಚ್ಚಿದೆ ಎಂದು ಸಿನಿಪ್ರಿಯರು ಮಾತನಾಡಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್​ ಅಭಿಮಾನಿಗಳು ‘ಪುಷ್ಪ 2’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:

ಅಲ್ಲು ಅರ್ಜುನ್​ ಜನ್ಮದಿನ: ಟಾಲಿವುಡ್​ ಸ್ಟಾರ್​ ನಟನ ಬಗ್ಗೆ ಇಲ್ಲಿವೆ 5 ವಿಶೇಷ ಮಾಹಿತಿ

ಅಲ್ಲು ಅರ್ಜುನ್ ರಿಜೆಕ್ಟ್ ಮಾಡಿದ್ದ ಈ ಚಿತ್ರಗಳು ಸೂಪರ್​ಹಿಟ್

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?