AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ನಿರ್ದೇಶಕರನ್ನು ಭೇಟಿ ಮಾಡಿ ವಿಶೇಷ ಕೋರಿಕೆ ಇಟ್ಟ ಅಲ್ಲು ಅರ್ಜುನ್

ಅಲ್ಲು ಸಿರಿಶ್ ಬಾಲ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2013ರಲ್ಲಿ ತೆರೆಗೆ ಬಂದ ‘ಗೌರವಂ’ ಚಿತ್ರದ ಮೂಲಕ ಹೀರೋ ಆಗಿ ಬಡ್ತಿ ಪಡೆದರು. ಅಲ್ಲಿಂದ ಇಲ್ಲಿವರೆಗೆ ಹಲವು ಚಿತ್ರಗಳಲ್ಲಿ ಅಲ್ಲು ಸಿರಿಶ್​ ನಟಿಸಿದ್ದಾರೆ. ಆದರೆ, ಯಶಸ್ಸು ಮಾತ್ರ ಸಿಕ್ಕಿಲ್ಲ.

ಬಾಲಿವುಡ್​ ನಿರ್ದೇಶಕರನ್ನು ಭೇಟಿ ಮಾಡಿ ವಿಶೇಷ ಕೋರಿಕೆ ಇಟ್ಟ ಅಲ್ಲು ಅರ್ಜುನ್
ಅಲ್ಲು ಅರ್ಜುನ್
TV9 Web
| Edited By: |

Updated on: Mar 20, 2022 | 5:11 PM

Share

ಸ್ಟಾರ್​ ನಟರ ಮಕ್ಕಳು ಚಿತ್ರರಂಗಕ್ಕೆ ಕಾಲಿಟ್ಟರೆ ಅವರನ್ನು ಅಭಿಮಾನಿಗಳು ಒಪ್ಪಿಕೊಂಡೇ ಬಿಡುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಈ ರೀತಿ ಪ್ರಯತ್ನ ಮಾಡಿ ಯಶಸ್ಸು ಸಿಗದೆ ಮೂಲೆಗುಂಪಾದ ಅನೇಕರಿದ್ದಾರೆ. ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಸಹೋದರ ಅಲ್ಲು ಸಿರಿಶ್ (Allu Sirish) ಅವರನ್ನು ಕೂಡ ಅಭಿಮಾನಿಗಳು ಅಷ್ಟಾಗಿ ಒಪ್ಪಿಕೊಂಡಿಲ್ಲ. ಅವರ ನಟನೆಯ ಯಾವ ಚಿತ್ರಗಳೂ ಇಲ್ಲಿವರೆಗೆ ದೊಡ್ಡ ಮಟ್ಟದಲ್ಲಿ ಹಿಟ್ ಆಗಿಲ್ಲ. ಇದು ಅಲ್ಲು ಅರ್ಜುನ್​ಗೆ (Allu Arjun) ಬೇಸರ ತಂದಿದೆ. ಹೀಗಾಗಿ, ಬಾಲಿವುಡ್​ನ (Bollywood) ದೊಡ್ಡ ಸ್ಟಾರ್​ ನಟರನ್ನು ಭೇಟಿ ಮಾಡಿ, ತಮ್ಮನಿಗೋಸ್ಕರ ಒಂದು ಸಿನಿಮಾ ಮಾಡುವಂತೆ ಕೋರಿದ್ದಾರೆ ಎಂದು ವರದಿ ಆಗಿದೆ. ಈ ಮೂಲಕ ತಮ್ಮನ ವೃತ್ತಿ ಜೀವನಕ್ಕೆ ಸಹಕಾರಿ ಆಗುತ್ತಿದ್ದಾರೆ.

ಅಲ್ಲು ಸಿರಿಶ್ ಬಾಲ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2013ರಲ್ಲಿ ತೆರೆಗೆ ಬಂದ ‘ಗೌರವಂ’ ಚಿತ್ರದ ಮೂಲಕ ಹೀರೋ ಆಗಿ ಬಡ್ತಿ ಪಡೆದರು. ಅಲ್ಲಿಂದ ಇಲ್ಲಿವರೆಗೆ ಹಲವು ಚಿತ್ರಗಳಲ್ಲಿ ಅಲ್ಲು ಸಿರಿಶ್​ ನಟಿಸಿದ್ದಾರೆ. ಹೀರೋ ಆಗಿ ಬಡ್ತಿ ಪಡೆದು 10 ವರ್ಷ ಕಳೆದರೂ ಅವರಿಗೆ ಒಂದು ದೊಡ್ಡ ಯಶಸ್ಸು ಸಿಕ್ಕಿಲ್ಲ. ಈ ಕಾರಣಕ್ಕೆ ತಮ್ಮನ ಬಗ್ಗೆ ಚಿಂತೆ ಮಾಡುತ್ತಿದ್ದಾರೆ ಅಲ್ಲು.

ಇತ್ತೀಚೆಗೆ ಅಲ್ಲು ಅರ್ಜುನ್​ ಮುಂಬೈಗೆ ತೆರಳಿದ್ದರು. ಸಂಜಯ್​ ಲೀಲಾ ಬನ್ಸಾಲಿ ಕಚೇರಿಯಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದರು. ಇದು ಹಲವು ಗಾಸಿಪ್​​ಗಳನ್ನು ಹುಟ್ಟುಹಾಕಿತ್ತು. ಅಲ್ಲು ಅರ್ಜುನ್​ ಅವರು ಬನ್ಸಾಲಿ ಜತೆ ಸಿನಿಮಾ ಮಾಡ್ತಾರಾ ಎನ್ನುವ ಪ್ರಶ್ನೆಗಳು ಮೂಡಿದ್ದವು. ಇದಾದ ಬೆನ್ನಲ್ಲೇ ಹಲವು ನಿರ್ದೇಶಕರನ್ನು ಅಲ್ಲು ಅರ್ಜುನ್​ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲು ಅರ್ಜುನ್​ ಅವರು ಕೆಲ ನಿರ್ದೇಶಕರ ಬಳಿ ಅಲ್ಲು ಸಿರಿಶ್​ಗೆ ಸಿನಿಮಾ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ. ಈ ಮೂಲಕ ಅಲ್ಲು ಸಿರಿಶ್​ಗೆ ಬಾಲಿವುಡ್​ನಲ್ಲಿ ಹೊಸ ಸ್ಟಾರ್ಟ್​ ಕೊಡೋಕೆ ಅವರು ಚಿಂತನೆ ನಡೆಸಿದ್ದಾರೆ. ಇದಕ್ಕೆ ಯಾವ ನಿರ್ದೇಶಕರು ಗ್ರೀನ್​ ಸಿಗ್ನಲ್ ನೀಡಿದ್ದಾರೆ, ಯಾರು ಸಿರಿಶ್​ಗೆ ಆ್ಯಕ್ಷನ್​ ಕಟ್​ ಹೇಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಲ್ಲು ಅರ್ಜುನ್​ ಅವರಿಗೆ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ‘ಪುಷ್ಪ’ ಸಿನಿಮಾ ಹಿಂದಿಗೆ ಡಬ್​ ಆಗಿ ತೆರೆಕಂಡು 100 ಕೋಟಿ ರೂಪಾಯಿಯನ್ನು ಹಿಂದಿ ವರ್ಷನ್​ನಿಂದಲೇ ಬಾಚಿಕೊಂಡಿದೆ. ಹೀಗಾಗಿ, ಬಾಲಿವುಡ್​ನ ಹಲವರಿಗೆ ಅವರು ಪರಿಚಿತರಾಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ

‘ಪುನೀತ್​ ರೀತಿ ನಾವು ಸ್ಟಂಟ್​ ಮಾಡೋದಿಲ್ಲ’; ನಿಜ ಒಪ್ಪಿಕೊಂಡಿದ್ದ ಅಲ್ಲು ಅರ್ಜುನ್​, ಜ್ಯೂ. ಎನ್​ಟಿಆರ್​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?