AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ ನಿರ್ದೇಶಕರನ್ನು ಭೇಟಿ ಮಾಡಿ ವಿಶೇಷ ಕೋರಿಕೆ ಇಟ್ಟ ಅಲ್ಲು ಅರ್ಜುನ್

ಅಲ್ಲು ಸಿರಿಶ್ ಬಾಲ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2013ರಲ್ಲಿ ತೆರೆಗೆ ಬಂದ ‘ಗೌರವಂ’ ಚಿತ್ರದ ಮೂಲಕ ಹೀರೋ ಆಗಿ ಬಡ್ತಿ ಪಡೆದರು. ಅಲ್ಲಿಂದ ಇಲ್ಲಿವರೆಗೆ ಹಲವು ಚಿತ್ರಗಳಲ್ಲಿ ಅಲ್ಲು ಸಿರಿಶ್​ ನಟಿಸಿದ್ದಾರೆ. ಆದರೆ, ಯಶಸ್ಸು ಮಾತ್ರ ಸಿಕ್ಕಿಲ್ಲ.

ಬಾಲಿವುಡ್​ ನಿರ್ದೇಶಕರನ್ನು ಭೇಟಿ ಮಾಡಿ ವಿಶೇಷ ಕೋರಿಕೆ ಇಟ್ಟ ಅಲ್ಲು ಅರ್ಜುನ್
ಅಲ್ಲು ಅರ್ಜುನ್
TV9 Web
| Edited By: |

Updated on: Mar 20, 2022 | 5:11 PM

Share

ಸ್ಟಾರ್​ ನಟರ ಮಕ್ಕಳು ಚಿತ್ರರಂಗಕ್ಕೆ ಕಾಲಿಟ್ಟರೆ ಅವರನ್ನು ಅಭಿಮಾನಿಗಳು ಒಪ್ಪಿಕೊಂಡೇ ಬಿಡುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ. ಈ ರೀತಿ ಪ್ರಯತ್ನ ಮಾಡಿ ಯಶಸ್ಸು ಸಿಗದೆ ಮೂಲೆಗುಂಪಾದ ಅನೇಕರಿದ್ದಾರೆ. ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಸಹೋದರ ಅಲ್ಲು ಸಿರಿಶ್ (Allu Sirish) ಅವರನ್ನು ಕೂಡ ಅಭಿಮಾನಿಗಳು ಅಷ್ಟಾಗಿ ಒಪ್ಪಿಕೊಂಡಿಲ್ಲ. ಅವರ ನಟನೆಯ ಯಾವ ಚಿತ್ರಗಳೂ ಇಲ್ಲಿವರೆಗೆ ದೊಡ್ಡ ಮಟ್ಟದಲ್ಲಿ ಹಿಟ್ ಆಗಿಲ್ಲ. ಇದು ಅಲ್ಲು ಅರ್ಜುನ್​ಗೆ (Allu Arjun) ಬೇಸರ ತಂದಿದೆ. ಹೀಗಾಗಿ, ಬಾಲಿವುಡ್​ನ (Bollywood) ದೊಡ್ಡ ಸ್ಟಾರ್​ ನಟರನ್ನು ಭೇಟಿ ಮಾಡಿ, ತಮ್ಮನಿಗೋಸ್ಕರ ಒಂದು ಸಿನಿಮಾ ಮಾಡುವಂತೆ ಕೋರಿದ್ದಾರೆ ಎಂದು ವರದಿ ಆಗಿದೆ. ಈ ಮೂಲಕ ತಮ್ಮನ ವೃತ್ತಿ ಜೀವನಕ್ಕೆ ಸಹಕಾರಿ ಆಗುತ್ತಿದ್ದಾರೆ.

ಅಲ್ಲು ಸಿರಿಶ್ ಬಾಲ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2013ರಲ್ಲಿ ತೆರೆಗೆ ಬಂದ ‘ಗೌರವಂ’ ಚಿತ್ರದ ಮೂಲಕ ಹೀರೋ ಆಗಿ ಬಡ್ತಿ ಪಡೆದರು. ಅಲ್ಲಿಂದ ಇಲ್ಲಿವರೆಗೆ ಹಲವು ಚಿತ್ರಗಳಲ್ಲಿ ಅಲ್ಲು ಸಿರಿಶ್​ ನಟಿಸಿದ್ದಾರೆ. ಹೀರೋ ಆಗಿ ಬಡ್ತಿ ಪಡೆದು 10 ವರ್ಷ ಕಳೆದರೂ ಅವರಿಗೆ ಒಂದು ದೊಡ್ಡ ಯಶಸ್ಸು ಸಿಕ್ಕಿಲ್ಲ. ಈ ಕಾರಣಕ್ಕೆ ತಮ್ಮನ ಬಗ್ಗೆ ಚಿಂತೆ ಮಾಡುತ್ತಿದ್ದಾರೆ ಅಲ್ಲು.

ಇತ್ತೀಚೆಗೆ ಅಲ್ಲು ಅರ್ಜುನ್​ ಮುಂಬೈಗೆ ತೆರಳಿದ್ದರು. ಸಂಜಯ್​ ಲೀಲಾ ಬನ್ಸಾಲಿ ಕಚೇರಿಯಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದರು. ಇದು ಹಲವು ಗಾಸಿಪ್​​ಗಳನ್ನು ಹುಟ್ಟುಹಾಕಿತ್ತು. ಅಲ್ಲು ಅರ್ಜುನ್​ ಅವರು ಬನ್ಸಾಲಿ ಜತೆ ಸಿನಿಮಾ ಮಾಡ್ತಾರಾ ಎನ್ನುವ ಪ್ರಶ್ನೆಗಳು ಮೂಡಿದ್ದವು. ಇದಾದ ಬೆನ್ನಲ್ಲೇ ಹಲವು ನಿರ್ದೇಶಕರನ್ನು ಅಲ್ಲು ಅರ್ಜುನ್​ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲು ಅರ್ಜುನ್​ ಅವರು ಕೆಲ ನಿರ್ದೇಶಕರ ಬಳಿ ಅಲ್ಲು ಸಿರಿಶ್​ಗೆ ಸಿನಿಮಾ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ. ಈ ಮೂಲಕ ಅಲ್ಲು ಸಿರಿಶ್​ಗೆ ಬಾಲಿವುಡ್​ನಲ್ಲಿ ಹೊಸ ಸ್ಟಾರ್ಟ್​ ಕೊಡೋಕೆ ಅವರು ಚಿಂತನೆ ನಡೆಸಿದ್ದಾರೆ. ಇದಕ್ಕೆ ಯಾವ ನಿರ್ದೇಶಕರು ಗ್ರೀನ್​ ಸಿಗ್ನಲ್ ನೀಡಿದ್ದಾರೆ, ಯಾರು ಸಿರಿಶ್​ಗೆ ಆ್ಯಕ್ಷನ್​ ಕಟ್​ ಹೇಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಲ್ಲು ಅರ್ಜುನ್​ ಅವರಿಗೆ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ‘ಪುಷ್ಪ’ ಸಿನಿಮಾ ಹಿಂದಿಗೆ ಡಬ್​ ಆಗಿ ತೆರೆಕಂಡು 100 ಕೋಟಿ ರೂಪಾಯಿಯನ್ನು ಹಿಂದಿ ವರ್ಷನ್​ನಿಂದಲೇ ಬಾಚಿಕೊಂಡಿದೆ. ಹೀಗಾಗಿ, ಬಾಲಿವುಡ್​ನ ಹಲವರಿಗೆ ಅವರು ಪರಿಚಿತರಾಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ಪೂಜಾ ಬಳಿಕ ಅಲ್ಲು ಅರ್ಜುನ್​ ಜತೆ ತೆರೆ ಹಂಚಿಕೊಂಡ ಮತ್ತೋರ್ವ ಕನ್ನಡದ ನಟಿ

‘ಪುನೀತ್​ ರೀತಿ ನಾವು ಸ್ಟಂಟ್​ ಮಾಡೋದಿಲ್ಲ’; ನಿಜ ಒಪ್ಪಿಕೊಂಡಿದ್ದ ಅಲ್ಲು ಅರ್ಜುನ್​, ಜ್ಯೂ. ಎನ್​ಟಿಆರ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್