AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟ ಘಟನೆ ಮರೆತು ಮುಂದೆ ಬಂದ ಅಲ್ಲು ಅರ್ಜುನ್; ಬನ್ಸಾಲಿ ಜೊತೆ ಸಿನಿಮಾ

ಅಲ್ಲು ಅರ್ಜುನ್ ಅವರು ಇತ್ತೀಚೆಗೆ ಸಂಜಯ್ ಲೀಲಾ ಬನ್ಸಾಲಿ ಅವರನ್ನು ಭೇಟಿಯಾಗಿದ್ದಾರೆ. ಬಹುನಿರೀಕ್ಷಿತ ಸಿನಿಮಾ ಸಹಯೋಗದ ಬಗ್ಗೆ ಮಾತುಕತೆ ನಡೆದಿರಬಹುದು ಎಂದು ಊಹಿಸಲಾಗಿದೆ. ಈ ಸುದ್ದಿ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಬನ್ಸಾಲಿ ಅವರ 'ಲವ್ ಆ್ಯಂಡ್ ವಾರ್' ಚಿತ್ರಕ್ಕೆ ಅಲ್ಲು ಅರ್ಜುನ್ ಅವರು ಸೇರಿಕೊಳ್ಳುವ ಸಾಧ್ಯತೆಯಿದೆ ಎಂಬ ಮಾತೂ ಇದೆ.

ಕೆಟ್ಟ ಘಟನೆ ಮರೆತು ಮುಂದೆ ಬಂದ ಅಲ್ಲು ಅರ್ಜುನ್; ಬನ್ಸಾಲಿ ಜೊತೆ ಸಿನಿಮಾ
ಕೆಟ್ಟ ಘಟನೆ ಮರೆತು ಮುಂದೆ ಬಂದ ಅಲ್ಲು ಅರ್ಜುನ್; ಬನ್ಸಾಲಿ ಜೊತೆ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jan 10, 2025 | 12:06 PM

Share

ಅಲ್ಲು ಅರ್ಜುನ್ ಅವರಿಗೆ ಇತ್ತೀಚೆಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತ್ತು. ಅವರು ‘ಪುಷ್ಪ’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಕೂಡ ಪಡೆದರು. ಆದರೆ, ರಾತ್ರೋ ರಾತ್ರಿ ಎಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಆಯಿತು. ‘ಪುಷ್ಪ 2’ ಚಿತ್ರದ ವೀಕ್ಷಣೆಗೆ ಅವರು ಹೈದರಾಬಾದ್​​ನ ಸಂಧ್ಯಾ ಥಿಯೇಟರ್​​ಗೆ ತೆರಳಿದ್ದರು. ಈ ವೇಳೆ ಉಂಟಾದ ಕಾಲ್ತುಳಿತದಲ್ಲಿ ಅವರ ಅಭಿಮಾನಿ ಮೃತಪಟ್ಟರು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನ ಕೂಡ ಆಯಿತು. ಕಳೆದ ಒಂದು ತಿಂಗಳಿಂದ ಅಲ್ಲು ಅರ್ಜುನ್ ಸಾಕಷ್ಟು ಕಂಡಿದ್ದಾರೆ. ಈಗ ಅವರು ಇದೆಲ್ಲವನ್ನೂ ಮರೆತು ಮುಂದಕ್ಕೆ ಸಾಗುವ ಆಲೋಚನೆಯಲ್ಲಿ ಇದ್ದಾರೆ.

ಅಲ್ಲು ಅರ್ಜುನ್ ಹಾಗೂ ಬಾಲಿವುಡ್​ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಈ ಮೊದಲಿನಿಂದಲೂ ಚರ್ಚೆಯಲ್ಲಿ ಇತ್ತು. ಆದರೆ, ಯಾವ ವಿಚಾರವೂ ಫೈನಲ್ ಆಗಿರಲಿಲ್ಲ. ಆ ಬಳಿಕ ಸುದ್ದಿ ತಣ್ಣಗಾಗಿತ್ತು. ಈಗ ಅಲ್ಲು ಅರ್ಜುನ್ ಅವರು ಬನ್ಸಾಲಿನ ಭೇಟಿ ಮಾಡಿದ್ದಾರೆ.

ಅಲ್ಲು ಅರ್ಜುನ್ ಅವರು ಇತ್ತೀಚೆಗೆ ಮುಂಬೈಗೆ ತೆರಳಿದ್ದರು. ಬನ್ಸಾಲಿ ಕಚೇರಿಯಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಸಿನಿಮಾ ಬಗ್ಗೆ ಇವರು ಮಾತುಕತೆ ನಡೆಸಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಸದ್ಯ ಬನ್ಸಾಲಿ ಅವರು ‘ಲವ್ ಆ್ಯಂಡ್ ವಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅಲ್ಲು ಅರ್ಜುನ್ ಮಾತುಕತೆ ನಡೆಸುತ್ತಿರುವುದು ಇದೇ ಚಿತ್ರಕ್ಕೋ ಅಥವಾ ಇದು ಬೇರೆಯದೇ ಸಿನಿಮಾ ಆಗಿರಲಿದೆಯೇ ಎನ್ನುವ ಕುತೂಹಲ ಇದೆ.

ಇದನ್ನೂ ಓದಿ: ‘ನಾನಿದ್ದೇನೆ’; ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿಗೆ ಭರವಸೆ ನೀಡಿದ ಅಲ್ಲು ಅರ್ಜುನ್

ದಕ್ಷಿಣದ ಸ್ಟಾರ್ ಹೀರೋ ಜೊತೆ ಸಿನಿಮಾ ಮಾಡಬೇಕು ಎಂಬುದು ಬನ್ಸಾಲಿ ಅವರ ಕನಸಾಗಿತ್ತು. ಈ ಕನಸು ನನಸಾಗಿದೆ ಎಂದು ಕೆಲವರು ಮಾತನಾಡಿಕೊಂಡಿದ್ದಾರೆ. ಅಲ್ಲು ಅರ್ಜುನ್ ಅವರು ಈ ಮೊದಲು ಅಟ್ಲಿ ಜೊತೆ ಸಿನಿಮಾ ಮಾಡುತ್ತಾರೆ ಎಂದು ಸುದ್ದಿ ಆಗಿತ್ತು. ಆದರೆ, ಅದು ನಿಜವಾಗಿಲ್ಲ. ಈಗ ಅವರು ಬನ್ಸಾಲಿ ಜೊತೆ ಸಿನಿಮಾ ಮಾಡಿದ್ದೇ ಆದರೆ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ