AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದ ಮಧ್ಯೆಯೂ ಕಮಾಯಿ ನಿಲ್ಲಿಸದ ‘ಪುಷ್ಪ 2’; ಗಳಿಕೆಯಲ್ಲಿ ದಾಖಲೆ

‘ಪುಷ್ಪ 2’ ಸಿನಿಮಾ ಭಾನುವಾರ (ಡಿಸೆಂಬರ್ 16) ಒಳ್ಳೆಯ ಗಳಿಕೆ ಮಾಡಿದೆ. ಈ ಚಿತ್ರ ಎರಡನೇ ಭಾನುವಾr 75 ಕೋಟಿ ರೂಪಾಯಿ ಗಳಿಕೆ ಮಾಡಿದೆ. 11ನೇ ದಿನ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುತ್ತದೆ ಎಂದರೆ ಅದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಚಿತ್ರದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ.

ವಿವಾದದ ಮಧ್ಯೆಯೂ ಕಮಾಯಿ ನಿಲ್ಲಿಸದ ‘ಪುಷ್ಪ 2’; ಗಳಿಕೆಯಲ್ಲಿ ದಾಖಲೆ
Pushpa 2
ರಾಜೇಶ್ ದುಗ್ಗುಮನೆ
|

Updated on:Dec 16, 2024 | 11:57 AM

Share

‘ಪುಷ್ಪ 2’ ಸಿನಿಮಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಹಲವು. ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿರುವುದು ಒಂದು ಕಡೆಯಾದರೆ, ಈ ಸಿನಿಮಾದ ಹೀರೋ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದು ಮತ್ತೊಂದು ಕಡೆ. ಸಿನಿಮಾ ವಿವಾದಗಳ ಮಧ್ಯೆಯೂ ಭರ್ಜರಿ ಗಳಿಕೆ ಮಾಡುವುದನ್ನು ಮುಂದುವರಿಸಿದೆ. ಈ ಸಿನಿಮಾ ಭಾನುವಾರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿದೆ. ಚಿತ್ರದ ಒಟ್ಟಾರೆ ಗಳಿಕೆ 1,322 ರೂಪಾಯಿ ಆಗಿದೆ ಅನ್ನೋದು ವಿಶೇಷ.

‘ಪುಷ್ಪ 2’ ಸಿನಿಮಾ ಭಾನುವಾರ (ಡಿಸೆಂಬರ್ 16) ಒಳ್ಳೆಯ ಗಳಿಕೆ ಮಾಡಿದೆ. ಈ ಚಿತ್ರ ಎರಡನೇ ಭಾನುವಾr 75 ಕೋಟಿ ರೂಪಾಯಿ ಗಳಿಕೆ ಮಾಡಿದೆ. 11ನೇ ದಿನ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುತ್ತದೆ ಎಂದರೆ ಅದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾ ಭಾನುವಾರ ತೆಲುಗು ವರ್ಷನ್ 16 ಕೋಟಿ ರೂಪಾಯಿ ಬಾಚಿಕೊಂಡರೆ, ಹಿಂದಿ ವರ್ಷನ್​ನಿಂದ 55 ಕೋಟಿ ರೂಪಾಯಿ ಆಗಿದೆ.

ಸದ್ಯ ಭಾರತದ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾದ ಗಳಿಕೆ 900 ಕೋಟಿ ರೂಪಾಯಿ ಆಗಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಚಿತ್ರ 1300 ಕೋಟಿ ರೂಪಾಯಿ ಬಾಚಿಕೊಂಡಿದೆ. ಶೀಘ್ರವೇ ಭಾರತದ ಕಲೆಕ್ಷನ್​ನಲ್ಲಿ ಚಿತ್ರ 1000 ಕೋಟಿ ರೂಪಾಯಿ ಬಾಚಿಕೊಳ್ಳೋ ಸಾಧ್ಯತೆ ಇದೆ. ಈ ಮೂಲಕ ಸಿನಿಮಾ ದಾಖಲೆ ಬರೆಯಲಿದೆ.

ಸದ್ಯ ಎದ್ದಿರೋ ವಿವಾದ ಚಿತ್ರದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಈ ಚಿತ್ರವನ್ನು ವೀಕ್ಷಣೆ ಮಾಡುವವರು ನಿರಂತರವಾಗಿ ಸಿನಿಮಾ ನೋಡುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಉತ್ತರ ಭಾರತದ ಮಂದಿ ಚಿತ್ರಕ್ಕೆ ಹೆಚ್ಚು ಆಕರ್ಷಿತರಾಗಿದ್ದಾರೆ. ಈ ಕಾರಣಕ್ಕೆ ಉತ್ತರ ಭಾರತದಲ್ಲಿ ಸಿನಿಮಾ ಹೆಚ್ಚು ಕಲೆಕ್ಷನ್ ಮಾಡುತ್ತಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ಜಾತರ ಸೀನ್​ ಬಗ್ಗೆ ನಟ ತಾರಕ್ ಪೊನ್ನಪ್ಪ ಮಾತು

ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತಕ್ಕೂ ಅಲ್ಲು ಅರ್ಜುನ್​ಗೂ ಲಿಂಕ್ ಮಾಡಲಾಗಿತ್ತು. ಈ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು. ಸದ್ಯ ಅವರು ಮಧ್ಯಂತರ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ. ಜನರು ತೋರಿದ ಪ್ರೀತಿಗೆ ಧನ್ಯವಾದ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:57 am, Mon, 16 December 24

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು