ಸತತ ಸೋಲು; ಬಾಲಿವುಡ್​ನ ಖ್ಯಾತ ನಿರ್ದೇಶಕನಿಗೆ ಕಿವಿಮಾತು ಹೇಳಿದ ಅಲ್ಲು ಅರ್ಜುನ್

ಇತ್ತೀಚೆಗೆ ಬಾಲಿವುಡ್ ನಿರ್ಮಾಪಕರು ಹೀರೋಗಳ ಬಗ್ಗೆ ದೂರು ತರುತ್ತಿದ್ದಾರೆ. ಸಿನಿಮಾಗಳು ಗೆಲ್ಲದೆ ಇದ್ದರೂ ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಾರೆ ಎಂದು ಕೆಲವು ನಿರ್ಮಾಪಕರು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಅಲ್ಲು ಅರ್ಜುನ್ ಹಾಗೂ ನಿಖಿಲ್ ಅಡ್ವಾಣಿ ಪರಸ್ಪರ ಭೇಟಿ ಆಗಿದ್ದರು. ಆಗ ಅಲ್ಲು ಅರ್ಜುನ್ ಅವರು ಬಾಲಿವುಡ್​ನಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರು.

ಸತತ ಸೋಲು; ಬಾಲಿವುಡ್​ನ ಖ್ಯಾತ ನಿರ್ದೇಶಕನಿಗೆ ಕಿವಿಮಾತು ಹೇಳಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್-ನಿಖಿಲ್
Follow us
|

Updated on: Aug 01, 2024 | 7:02 AM

ದಕ್ಷಿಣ ಭಾರತದ ಸಿನಿಮಾಗಳಿಗೆ ಹೋಲಿಕೆ ಮಾಡಿದರೆ ಬಾಲಿವುಡ್​ ಸಿನಿಮಾಗಳ ಬಜೆಟ್ ಹೆಚ್ಚು. ಅದೇ ರೀತಿ ಬಾಲಿವುಡ್​ ಸಿನಿಮಾಗಳು ಹೆಚ್ಚು ಫ್ಲಾಪ್ ಎನಿಸಿಕೊಳ್ಳುತ್ತಿವೆ. 2023ರಲ್ಲಿ ಹಿಂದಿಯಲ್ಲಿ ರಿಲೀಸ್ ಆದ  ‘ಜವಾನ್’, ‘ಪಠಾಣ್’, ‘ಅನಿಮಲ್’ ರೀತಿಯ ಚಿತ್ರಗಳು ದೊಡ್ಡ ಗೆಲುವು ಕಂಡವು. ಈಗ ಚಿತ್ರರಂಗಕ್ಕೆ ಮತ್ತದೇ ಸ್ಥಿತಿ ಬಂದಿದೆ. ಯಾರೂ ಹಿಂದಿ ಚಿತ್ರ ವೀಕ್ಷಿಸುತ್ತಿಲ್ಲ. ಈ ಸ್ಥಿತಿಗೆ ಕಾರಣ ಏನು ಎಂಬುದನ್ನು ಒಬ್ಬೊಬ್ಬರು ಒಂದೊಂದು ರೀತಿ ಬಿಂಬಿಸಿದ್ದಾರೆ. ಈಗ ಬಾಲಿವುಡ್ ನಿರ್ದೇಶಕ ನಿಖಿಲ್ ಅಡ್ವಾಣಿ ಅವರು ಅಲ್ಲು ಅರ್ಜುನ್ ಹೇಳಿದ ಕಿವಿಮಾತಿನ ವಿಚಾರವನ್ನು ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಅಲ್ಲು ಅರ್ಜುನ್ ಹಾಗೂ ನಿಖಿಲ್ ಅಡ್ವಾಣಿ ಪರಸ್ಪರ ಭೇಟಿ ಆಗಿದ್ದರು. ಆಗ ಅಲ್ಲು ಅರ್ಜುನ್ ಅವರು ಬಾಲಿವುಡ್​ನಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದ್ದರಂತೆ. ‘ಹೀರೋ ಆಗೋದು ಹೇಗೆ ಅನ್ನೋದನ್ನು ನೀವೆಲ್ಲ ಮರೆತಿದ್ದೀರಿ’ ಎಂದು ಅಲ್ಲು ಅರ್ಜುನ್ ಅವರು ಬಾಲಿವುಡ್​ನ ವೀಕ್ ಪಾಯಿಂಟ್​ನ ಎತ್ತಿ ಹಿಡಿದಿದ್ದರು.

‘ದಕ್ಷಿಣದ ಸಿನಿಮಾಗಳು ಹೀರೋಯಿಸಂನ ಮುಖ್ಯವಾಗಿ ಇಟ್ಟುಕೊಂಡು ಸಿನಿಮಾ ಮಾಡುತ್ತಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತವೆ. ಹೀರೋಯಿಸಂ ಚೆನ್ನಾಗಿ ತೋರಿಸುತ್ತಾರೆ’ ಎಂದಿದ್ದಾರೆ ಅವರು. ಈ ಮೊದಲು ಬಾಲಿವುಡ್​ನಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳು ಬಂದಿವೆ. ‘ಕೂಲಿ’ ಸಿನಿಮಾದಲ್ಲಿ ಅಮಿತಾ ಭಚ್ಚನ್ ಪಾತ್ರ, ‘ಕಭಿ ಹಾ ಕಭಿ ನಾ’ ಸಿನಿಮಾದಲ್ಲಿ ಶಾರುಖ್ ಖಾನ್ ಪಾತ್ರಗಳನ್ನು ನಿಖಿಲ್ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್

ಇತ್ತೀಚೆಗೆ ಬಾಲಿವುಡ್ ನಿರ್ಮಾಪಕರು ಹೀರೋಗಳ ಬಗ್ಗೆ ದೂರು ತರುತ್ತಿದ್ದಾರೆ. ಸಿನಿಮಾಗಳು ಗೆಲ್ಲದೆ ಇದ್ದರೂ ದೊಡ್ಡ ಮೊತ್ತದ ಸಂಭಾವನೆ ಕೇಳುತ್ತಾರೆ ಎಂದು ಕೆಲವು ನಿರ್ಮಾಪಕರು ಹೇಳಿಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕರಣ್ ಜೋಹರ್ ಅವರು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ನಿಖಿಲ್ ಅಡ್ವಾಣಿ ಅವರು ‘ವೇದ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಜಾನ್ ಅಬ್ರಹಾಂ ಹೀರೋ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ