AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ

ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಅಬ್ಬರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಅಭಿನಂದನೆ ತಿಳಿಸಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ
ರಣಬೀರ್​ ಕಪೂರ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Dec 08, 2023 | 7:04 PM

Share

ಬಾಲಿವುಡ್​ ನಟ ರಣಬೀರ್​ ಕಪೂರ್​ ಅವರು ಅಭಿನಯಿಸಿರುವ ‘ಅನಿಮಲ್​’ ಸಿನಿಮಾ (Animal Movie) ಸೂಪರ್​ ಹಿಟ್​ ಆಗಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸಿದೆ. ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರದ ಯಶಸ್ಸಿನಿಂದ ರಶ್ಮಿಕಾ ಡಿಮ್ಯಾಂಡ್​ ಹೆಚ್ಚಾಗಿದೆ. ಕೆಲವರು ಈ ಸಿನಿಮಾವನ್ನು ಟೀಕಿಸಿದ್ದಾರೆ. ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರಿಗೆ ಈ ಸಿನಿಮಾ ಸಖತ್​ ಇಷ್ಟ ಆಗಿದೆ. ಈ ಸಿನಿಮಾವನ್ನು ಅವರು ಕ್ಲಾಸಿಕ್ ಎಂದು ಕರೆದಿದ್ದಾರೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗ, ನಟ ರಣಬೀರ್​ ಕಪೂರ್​ (Ranbir Kapoor) ಸೇರಿದಂತೆ ಅನೇಕರ ಕೆಲಸವನ್ನು ಅಲ್ಲು ಅರ್ಜುನ್ ಹೊಗಳಿದ್ದಾರೆ.

‘ಸಿನಿಮಾದ ಎಲ್ಲ ಮಿತಿಗಳನ್ನು ಇದು ಮೀರಿದೆ. ಈ ಸಿನಿಮಾದ ತೀವ್ರತೆಗೆ ಸಾಟಿಯೇ ಇಲ್ಲ. ಸಂದೀಪ್​ ರೆಡ್ಡಿ ವಂಗ ಅವರೇ.. ನೀವು ನಮ್ಮೆಲ್ಲರಿಗೂ ಮತ್ತೊಮ್ಮೆ ಹೆಮ್ಮೆ ತಂದಿದ್ದೀರಿ. ಈಗ ಮತ್ತು ಭವಿಷ್ಯದಲ್ಲಿ ಭಾರತೀಯ ಚಿತ್ರರಂಗದ ಚಹರೆಯನ್ನು ನಿಮ್ಮ ಸಿನಿಮಾಗಳು ಹೇಗೆ ಬದಲಾಯಿಸಲಿವೆ ಎಂಬುದು ನನಗೆ ಈಗಲೇ ಸ್ಪಷ್ಟವಾಗಿ ತಿಳಿಯುತ್ತಿದೆ’ ಎಂದು ಅಲ್ಲು ಅರ್ಜುನ್ ಹೊಗಳಿದ್ದಾರೆ.

‘ರಶ್ಮಿಕಾ ಮಂದಣ್ಣ ಅವರ ನಟನೆ ಅತ್ಯುತ್ತಮವಾಗಿದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಉದಯೋನ್ಮುಖ ಕಲಾವಿದೆ ತೃಪ್ತಿ ದಿಮ್ರಿ ಅವರಿಗೂ ಅಲ್ಲು ಅರ್ಜುನ್​ ಅವರಿಂದ ಮೆಚ್ಚುಗೆ ಸಿಕ್ಕಿದೆ. ರಣಬೀರ್​ ಕಪೂರ್​ ಅವರು ಭಾರತೀಯ ಚಿತ್ರರಂಗದಲ್ಲಿ ನಟನೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ ಎಂಬುದು ಅಲ್ಲು ಅರ್ಜುನ್​ ಅನಿಸಿಕೆ.

ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಅಬ್ಬರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಅಭಿನಂದನೆ ತಿಳಿಸಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್