Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ

ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಅಬ್ಬರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಅಭಿನಂದನೆ ತಿಳಿಸಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ
ರಣಬೀರ್​ ಕಪೂರ್​, ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
|

Updated on: Dec 08, 2023 | 7:04 PM

ಬಾಲಿವುಡ್​ ನಟ ರಣಬೀರ್​ ಕಪೂರ್​ ಅವರು ಅಭಿನಯಿಸಿರುವ ‘ಅನಿಮಲ್​’ ಸಿನಿಮಾ (Animal Movie) ಸೂಪರ್​ ಹಿಟ್​ ಆಗಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸಿದೆ. ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರದ ಯಶಸ್ಸಿನಿಂದ ರಶ್ಮಿಕಾ ಡಿಮ್ಯಾಂಡ್​ ಹೆಚ್ಚಾಗಿದೆ. ಕೆಲವರು ಈ ಸಿನಿಮಾವನ್ನು ಟೀಕಿಸಿದ್ದಾರೆ. ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರಿಗೆ ಈ ಸಿನಿಮಾ ಸಖತ್​ ಇಷ್ಟ ಆಗಿದೆ. ಈ ಸಿನಿಮಾವನ್ನು ಅವರು ಕ್ಲಾಸಿಕ್ ಎಂದು ಕರೆದಿದ್ದಾರೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗ, ನಟ ರಣಬೀರ್​ ಕಪೂರ್​ (Ranbir Kapoor) ಸೇರಿದಂತೆ ಅನೇಕರ ಕೆಲಸವನ್ನು ಅಲ್ಲು ಅರ್ಜುನ್ ಹೊಗಳಿದ್ದಾರೆ.

‘ಸಿನಿಮಾದ ಎಲ್ಲ ಮಿತಿಗಳನ್ನು ಇದು ಮೀರಿದೆ. ಈ ಸಿನಿಮಾದ ತೀವ್ರತೆಗೆ ಸಾಟಿಯೇ ಇಲ್ಲ. ಸಂದೀಪ್​ ರೆಡ್ಡಿ ವಂಗ ಅವರೇ.. ನೀವು ನಮ್ಮೆಲ್ಲರಿಗೂ ಮತ್ತೊಮ್ಮೆ ಹೆಮ್ಮೆ ತಂದಿದ್ದೀರಿ. ಈಗ ಮತ್ತು ಭವಿಷ್ಯದಲ್ಲಿ ಭಾರತೀಯ ಚಿತ್ರರಂಗದ ಚಹರೆಯನ್ನು ನಿಮ್ಮ ಸಿನಿಮಾಗಳು ಹೇಗೆ ಬದಲಾಯಿಸಲಿವೆ ಎಂಬುದು ನನಗೆ ಈಗಲೇ ಸ್ಪಷ್ಟವಾಗಿ ತಿಳಿಯುತ್ತಿದೆ’ ಎಂದು ಅಲ್ಲು ಅರ್ಜುನ್ ಹೊಗಳಿದ್ದಾರೆ.

‘ರಶ್ಮಿಕಾ ಮಂದಣ್ಣ ಅವರ ನಟನೆ ಅತ್ಯುತ್ತಮವಾಗಿದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಉದಯೋನ್ಮುಖ ಕಲಾವಿದೆ ತೃಪ್ತಿ ದಿಮ್ರಿ ಅವರಿಗೂ ಅಲ್ಲು ಅರ್ಜುನ್​ ಅವರಿಂದ ಮೆಚ್ಚುಗೆ ಸಿಕ್ಕಿದೆ. ರಣಬೀರ್​ ಕಪೂರ್​ ಅವರು ಭಾರತೀಯ ಚಿತ್ರರಂಗದಲ್ಲಿ ನಟನೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ ಎಂಬುದು ಅಲ್ಲು ಅರ್ಜುನ್​ ಅನಿಸಿಕೆ.

ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಅಬ್ಬರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಅಭಿನಂದನೆ ತಿಳಿಸಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ