AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ

ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಅಬ್ಬರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಅಭಿನಂದನೆ ತಿಳಿಸಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ
ರಣಬೀರ್​ ಕಪೂರ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Dec 08, 2023 | 7:04 PM

Share

ಬಾಲಿವುಡ್​ ನಟ ರಣಬೀರ್​ ಕಪೂರ್​ ಅವರು ಅಭಿನಯಿಸಿರುವ ‘ಅನಿಮಲ್​’ ಸಿನಿಮಾ (Animal Movie) ಸೂಪರ್​ ಹಿಟ್​ ಆಗಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಅಬ್ಬರಿಸಿದೆ. ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರದ ಯಶಸ್ಸಿನಿಂದ ರಶ್ಮಿಕಾ ಡಿಮ್ಯಾಂಡ್​ ಹೆಚ್ಚಾಗಿದೆ. ಕೆಲವರು ಈ ಸಿನಿಮಾವನ್ನು ಟೀಕಿಸಿದ್ದಾರೆ. ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಅವರಿಗೆ ಈ ಸಿನಿಮಾ ಸಖತ್​ ಇಷ್ಟ ಆಗಿದೆ. ಈ ಸಿನಿಮಾವನ್ನು ಅವರು ಕ್ಲಾಸಿಕ್ ಎಂದು ಕರೆದಿದ್ದಾರೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗ, ನಟ ರಣಬೀರ್​ ಕಪೂರ್​ (Ranbir Kapoor) ಸೇರಿದಂತೆ ಅನೇಕರ ಕೆಲಸವನ್ನು ಅಲ್ಲು ಅರ್ಜುನ್ ಹೊಗಳಿದ್ದಾರೆ.

‘ಸಿನಿಮಾದ ಎಲ್ಲ ಮಿತಿಗಳನ್ನು ಇದು ಮೀರಿದೆ. ಈ ಸಿನಿಮಾದ ತೀವ್ರತೆಗೆ ಸಾಟಿಯೇ ಇಲ್ಲ. ಸಂದೀಪ್​ ರೆಡ್ಡಿ ವಂಗ ಅವರೇ.. ನೀವು ನಮ್ಮೆಲ್ಲರಿಗೂ ಮತ್ತೊಮ್ಮೆ ಹೆಮ್ಮೆ ತಂದಿದ್ದೀರಿ. ಈಗ ಮತ್ತು ಭವಿಷ್ಯದಲ್ಲಿ ಭಾರತೀಯ ಚಿತ್ರರಂಗದ ಚಹರೆಯನ್ನು ನಿಮ್ಮ ಸಿನಿಮಾಗಳು ಹೇಗೆ ಬದಲಾಯಿಸಲಿವೆ ಎಂಬುದು ನನಗೆ ಈಗಲೇ ಸ್ಪಷ್ಟವಾಗಿ ತಿಳಿಯುತ್ತಿದೆ’ ಎಂದು ಅಲ್ಲು ಅರ್ಜುನ್ ಹೊಗಳಿದ್ದಾರೆ.

‘ರಶ್ಮಿಕಾ ಮಂದಣ್ಣ ಅವರ ನಟನೆ ಅತ್ಯುತ್ತಮವಾಗಿದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ. ಉದಯೋನ್ಮುಖ ಕಲಾವಿದೆ ತೃಪ್ತಿ ದಿಮ್ರಿ ಅವರಿಗೂ ಅಲ್ಲು ಅರ್ಜುನ್​ ಅವರಿಂದ ಮೆಚ್ಚುಗೆ ಸಿಕ್ಕಿದೆ. ರಣಬೀರ್​ ಕಪೂರ್​ ಅವರು ಭಾರತೀಯ ಚಿತ್ರರಂಗದಲ್ಲಿ ನಟನೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದ್ದಾರೆ ಎಂಬುದು ಅಲ್ಲು ಅರ್ಜುನ್​ ಅನಿಸಿಕೆ.

ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಅಬ್ಬರಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಈ ಚಿತ್ರ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಅದಕ್ಕಾಗಿ ಅಲ್ಲು ಅರ್ಜುನ್​ ಅವರು ಅಭಿನಂದನೆ ತಿಳಿಸಿದ್ದಾರೆ. ಡಿಸೆಂಬರ್​ 1ರಂದು ಬಿಡುಗಡೆ ಆದ ಈ ಸಿನಿಮಾ ಇನ್ನೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ