AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಿ ಸಿನಿಮಾದಲ್ಲೂ ಆ ಸಂತ್ರಸ್ತೆಗೆ ಅವಕಾಶ ಕೊಡ್ತೀನಿ’; ಜಾನಿ ಮಾಸ್ಟರ್ ವಿರುದ್ಧ ತಿರುಗಿಬಿದ್ದ ಅಲ್ಲು ಅರ್ಜುನ್

ರಾಷ್ಟ್ರ ಪ್ರಶಸ್ತಿ ವಿಜೇತ ಕೊರಿಯೋಗ್ರಾಫರ್ ಶೇಖ್ ಜಾನಿ ಬಾಷಾ ಅವರ ಪರಿಚಯ ಅನೇಕರಿಗೆ ಇದೆ. ಅವರು ಜಾನಿ ಮಾಸ್ಟರ್ ಎಂದೇ ಫೇಮಸ್. ಈಗ ಅವರ ವಿರುದ್ಧ ಸೈಬೆರಾಬಾದ್ ಪೊಲೀಸರು ಅತ್ಯಾಚಾರ ಆರೋಪದಡಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈಗ ಅಲ್ಲು ಅರ್ಜುನ್ ಅವರು ಸಂತ್ರಸ್ತೆಯ ಸಹಾಯಕ್ಕೆ ನಿಂತಿದ್ದಾರೆ.

‘ಪ್ರತಿ ಸಿನಿಮಾದಲ್ಲೂ ಆ ಸಂತ್ರಸ್ತೆಗೆ ಅವಕಾಶ ಕೊಡ್ತೀನಿ’; ಜಾನಿ ಮಾಸ್ಟರ್ ವಿರುದ್ಧ ತಿರುಗಿಬಿದ್ದ ಅಲ್ಲು ಅರ್ಜುನ್
ಜಾನಿ-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Sep 18, 2024 | 7:31 AM

Share

ಡ್ಯಾನ್ಸ್ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅವರು 21 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಅನೇಕರು ಜಾನಿ ಮಾಸ್ಟರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಸೂಕ್ತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಹೀಗಿರುವಾಗಲೇ ಅಲ್ಲು ಅರ್ಜುನ್ ಅವರು ಸಂತ್ರಸ್ತೆಯ ನೆರವಿಗೆ ಬಂದಿದ್ದಾರೆ. ಹೋಂ ಬ್ಯಾನರ್ (ಗೀತಾ ಆರ್ಟ್ಸ್​) ಅಡಿ ನಿರ್ಮಾಣ ಆಗುವ ಪ್ರತೀ ಚಿತ್ರದಲ್ಲೂ ಆ ಸಂತ್ರಸ್ತೆಗೆ ಅವಕಾಶ ನೀಡೋದಾಗಿ ಅಲ್ಲು ಅರ್ಜುನ್ ಶಪಥ ಮಾಡಿದ್ದಾರೆ.

ಜಾನಿ ಮಾಸ್ಟರ್ ಹಾಗೂ ಅಲ್ಲು ಅರ್ಜುನ್ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಚಿತ್ರದ ‘ಶ್ರೀವಲ್ಲಿ..’ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದು ಇದೇ ಜಾನಿ ಮಾಸ್ಟರ್. ಹೀಗಾಗಿ, ಅಲ್ಲು ಅರ್ಜುನ್​ಗೆ ಅವರ ಜೊತೆ ಒಳ್ಳೆಯ ಗೆಳೆತನ ಇದೆ. ಹಾಗಂದ ಮಾತ್ರಕ್ಕೆ ಅವರು ಸುಮ್ಮನೆ ಕುಳಿತಿಲ್ಲ. ಅವರು ಸಂತ್ರಸ್ತೆಯ ಸಹಾಯಕ್ಕೆ ನಿಂತಿದ್ದಾರೆ.

ಜಾನಿ ಮಾಸ್ಟರ್ ಜೊತೆ ಸಹಾಯಕಿ ಆಗಿದ್ದ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ. ಆ ಯುವತಿಯ ಪರಿಚಯ ಅಲ್ಲು ಅರ್ಜುನ್ ಅವರಿಗೂ ಇದೆ. ಈ ಕಾರಣದಿಂದಲೇ ಅಲ್ಲು ಅರ್ಜುನ್ ಅವರು ಯುವತಿಯ ಸಹಾಯಕ್ಕೆ ಮುಂದಾಗಿದ್ದಾರೆ. ಅವರ ನಡೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಈಗಾಗಲೇ ಈ ಸಂತ್ರಸ್ತೆ ‘ಪುಷ್ಪ 2’ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ.

ಶೇಖ್ ಜಾನಿ ಬಾಷಾ ಅನ್ನೋದು ಜಾನಿ ಮಾಸ್ಟರ್​ ಅವರ ನಿಜವಾದ ಹೆಸರು. ಅವರು ಇಂಡಸ್ಟ್ರಿಯಲ್ಲಿ ಜಾನಿ ಮಾಸ್ಟರ್ ಎಂದೇ ಫೇಮಸ್ ಆಗಿದ್ದಾರೆ. ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಸದ್ಯ ನರ್ಸಿಂಗಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ಇದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳಾ ಸಂಘಟನೆಗಳು ಸಂತ್ರಸ್ತೆಯ ಸಹಾಯಕ್ಕೆ ಧಾವಿಸಿವೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ರೀತಿಯಲ್ಲಿ ಗಣಪನ ಮೂರ್ತಿ ಕೂರಿಸಿದ ಅಭಿಮಾನಿಗಳು

ಸಿನಿಮಾ ವಿಚಾರಕ್ಕೆ ಬರೋದಾದರೆ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:29 am, Wed, 18 September 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್