ಬಿಡುಗಡೆಗೂ ಮುನ್ನ 420 ಕೋಟಿ ರೂಪಾಯಿ ಗಳಿಸಿದ ‘ಪುಷ್ಪ 2’ ಸಿನಿಮಾ

ಪುಷ್ಪ 2 ಚಿತ್ರದ ಪೂರ್ವ ಬಿಡುಗಡೆ ವ್ಯಾಪಾರ 420 ಕೋಟಿ ರೂಪಾಯಿಗಳನ್ನು ದಾಟಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ. ಡಿಸೆಂಬರ್ 5 ರಂದು ಬಿಡುಗಡೆಯಾಗಲಿರುವ ಈ ಸಿನಿಮಾ, ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅವರ ಅಭಿನಯದಿಂದಾಗಿ ಅಪಾರ ನಿರೀಕ್ಷೆಯಲ್ಲಿದೆ. ಸಿನಿಮಾದ ಯಶಸ್ಸಿನ ಬಗ್ಗೆ ಚಿತ್ರತಂಡ ಭಾರಿ ವಿಶ್ವಾಸ ವ್ಯಕ್ತಪಡಿಸಿದೆ.

ಬಿಡುಗಡೆಗೂ ಮುನ್ನ 420 ಕೋಟಿ ರೂಪಾಯಿ ಗಳಿಸಿದ ‘ಪುಷ್ಪ 2’ ಸಿನಿಮಾ
ಅಲ್ಲು ಅರ್ಜುನ್
Follow us
|

Updated on: Oct 24, 2024 | 4:00 PM

ಸಿನಿಪ್ರಿಯರು ‘ಪುಷ್ಪ 2’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಟಾಲಿವುಡ್​ ನಟ ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ನಟಿಸಿರುವ ಈ ಸಿನಿಮಾ ಡಿಸೆಂಬರ್​ 5ರಂದು ಬಿಡುಗಡೆ ಆಗಲಿದೆ. ಈಗ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಿರೀಕ್ಷೆ ಜಾಸ್ತಿ ಇರುವುದರಿಂದ ಬಿಡುಗಡೆಗೂ ಮುನ್ನವೇ ನೂರಾರು ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ. ಈ ಬಗ್ಗೆ ಸಿನಿಮಾದ ನಿರ್ಮಾಪಕರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ನಾನ್​-ಥಿಯೆಟ್ರಿಕಲ್ ಹಕ್ಕುಗಳ ಮೂಲಕ ಬರೋಬ್ಬರಿ 420 ಕೋಟಿ ರೂಪಾಯಿ ಸಿಕ್ಕಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

‘ಪುಷ್ಪ 2’ ಸಿನಿಮಾದ ನಿರ್ಮಾಪಕರು ಮತ್ತು ವಿತರಕರು ಇಂದು (ಅಕ್ಟೋಬರ್​ 24) ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸಿನಿಮಾದ ಬಿಸ್ನೆಸ್​ ಬಗ್ಗೆ ಮಾತನಾಡಿದ್ದಾರೆ. ಎಲ್ಲರಿಗೂ ಅಚ್ಚರಿ ಆಗುವಂತಹ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ. ‘ಈವರೆಗಿನ ಬೇರೆಲ್ಲ ಸಿನಿಮಾಗಳಿಂತ ಅತಿ ಹೆಚ್ಚಿನ ಮೊತ್ತಕ್ಕೆ ಪ್ರೀ-ರಿಲೀಸ್​ ಬಿಸ್ನೆಸ್ ಆಗಿದೆ. ಬಿಡುಗಡೆ ಬಳಿಕ ಆರಾಮಾಗಿ 1000 ಕೋಟಿ ರೂಪಾಯಿ ಬಿಸ್ನೆಸ್​ ಆಗಲಿದೆ’ ಎಂದಿದ್ದಾರೆ ನಿರ್ಮಾಪಕರು.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಆಗಸ್ಟ್ ತಿಂಗಳಲ್ಲೇ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾದ ಕೆಲಸಗಳು ಬಾಕಿ ಇರುವ ಕಾರಣದಿಂದ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಈಗ ಡಿಸೆಂಬರ್​ 5ರಂದು ಸಿನಿಮಾ ರಿಲೀಸ್ ಆಗಲಿದೆ ಎಂಬುದನ್ನು ತಿಳಿಸಲು ಚಿತ್ರತಂಡದವರು ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಮೊದಲ ದಿನ ಈ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಅಲ್ಲು ಅರ್ಜುನ್​ ಅವರ ವೃತ್ತಿ ಜೀವನದಲ್ಲೇ ಅತಿ ದೊಡ್ಡ ಸಿನಿಮಾವಾಗಿ ‘ಪುಷ್ಪ 2’ ಚಿತ್ರ ಧೂಳೆಬ್ಬಿಸುವ ಸೂಚನೆ ಸಿಕ್ಕಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ವಿವಿಧ ಭಾಷೆಗಳಲ್ಲಿ ಡಬ್ ಆಗಿ ಈ ಸಿನಿಮಾ ತೆರೆಕಾಣಲಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಹೈಕೋರ್ಟ್ ಮೆಟ್ಟಿಲೇರಿದ ಅಲ್ಲು ಅರ್ಜುನ್: ಕಾರಣ?

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ‘ಪುಷ್ಪ 2’ ಸಿನಿಮಾವನ್ನು ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಮಾಡಿದೆ. ಈ ಚಿತ್ರಕ್ಕೆ ಸುಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ‘ಪುಷ್ಪ’ ಸಿನಿಮಾಗೆ ಅಲ್ಲು ಅರ್ಜುನ್ ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಹಾಗಾಗಿ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ದೊಡ್ಡದಾಗಿ. ಫಹಾದ್ ಫಾಸಿಲ್, ಡಾಲಿ ಧನಂಜಯ ಮುಂತಾದವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು