AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ
ಅಲ್ಲು ಅರ್ಜುನ್​-ಯಶ್​
TV9 Web
| Edited By: |

Updated on: Jun 15, 2021 | 7:53 AM

Share

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್​ಡೇಟ್​ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ.

ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ. ಈಗ ಸಿನಿಮಾವನ್ನು ಬುಚಿ ಬಾಬು ವೀಕ್ಷಣೆ ಮಾಡಿದ್ದು, ಶ್ಲಾಘಿಸಿದ್ದಾರೆ.

‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್​ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದಿದ್ದಾರೆ ಬುಚಿ ಬಾಬು.

ಈ ರೀತಿಯ ಸಿನಿಮಾಗಳಲ್ಲಿ ಸಂಗೀತ ಅನ್ನೋದು ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಬುಚಿ ಬಾಬು ಮಾಹಿತಿ ನೀಡಿದ್ದಾರೆ. ‘ದೇವಿ ಪ್ರಸಾದ್ ಈ ಚಿತ್ರದಲ್ಲಿ ಅದ್ಭುತ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿನಿಮಾದ ಕಥೆ ಅದ್ಭುತವಾಗಿ ಮೂಡಿ ಬಂದಿದೆ. ಇದು ಅಭಿಮಾನಿಗಳಿಗೆ ಇಷ್ಟವಾಗಲಿದೆ ಎಂದು ಹೇಳಿದ್ದಾರೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ರಂಗಸ್ಥಲಂ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ರಂಗಸ್ಥಲಂ ಸಿನಿಮಾ ಕತೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಿತ್ತು. ಪುಷ್ಪ ಸಿನಿಮಾ ಕಾಡಿನ ಹಿನ್ನೆಲೆ ಹೊಂದಿದೆ.

ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. ಇದೇ ಆಗಸ್ಟ್ 13ರಂದು ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ಒಂದು ಸಿಕ್ಕಿದೆ.

ಇದನ್ನೂ ಓದಿ:

 Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ