AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ
ಅಲ್ಲು ಅರ್ಜುನ್​-ಯಶ್​
TV9 Web
| Edited By: |

Updated on: Jun 15, 2021 | 7:53 AM

Share

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್​ಡೇಟ್​ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ.

ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ. ಈಗ ಸಿನಿಮಾವನ್ನು ಬುಚಿ ಬಾಬು ವೀಕ್ಷಣೆ ಮಾಡಿದ್ದು, ಶ್ಲಾಘಿಸಿದ್ದಾರೆ.

‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್​ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದಿದ್ದಾರೆ ಬುಚಿ ಬಾಬು.

ಈ ರೀತಿಯ ಸಿನಿಮಾಗಳಲ್ಲಿ ಸಂಗೀತ ಅನ್ನೋದು ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಬುಚಿ ಬಾಬು ಮಾಹಿತಿ ನೀಡಿದ್ದಾರೆ. ‘ದೇವಿ ಪ್ರಸಾದ್ ಈ ಚಿತ್ರದಲ್ಲಿ ಅದ್ಭುತ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿನಿಮಾದ ಕಥೆ ಅದ್ಭುತವಾಗಿ ಮೂಡಿ ಬಂದಿದೆ. ಇದು ಅಭಿಮಾನಿಗಳಿಗೆ ಇಷ್ಟವಾಗಲಿದೆ ಎಂದು ಹೇಳಿದ್ದಾರೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ರಂಗಸ್ಥಲಂ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ರಂಗಸ್ಥಲಂ ಸಿನಿಮಾ ಕತೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಿತ್ತು. ಪುಷ್ಪ ಸಿನಿಮಾ ಕಾಡಿನ ಹಿನ್ನೆಲೆ ಹೊಂದಿದೆ.

ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. ಇದೇ ಆಗಸ್ಟ್ 13ರಂದು ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ಒಂದು ಸಿಕ್ಕಿದೆ.

ಇದನ್ನೂ ಓದಿ:

 Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ