AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ.

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ
ಅಲ್ಲು ಅರ್ಜುನ್​-ಯಶ್​
TV9 Web
| Edited By: |

Updated on: Jun 15, 2021 | 7:53 AM

Share

ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದ ಬಗ್ಗೆ ನಿತ್ಯ ಹೊಸ ಹೊಸ ಅಪ್​ಡೇಟ್​ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ರಿಲೀಸ್​ ಆಗಿದ್ದ ಸಿನಿಮಾದ ಟೀಸರ್ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಹೇಗಿರಲಿದೆ ಎನ್ನುವ ಬಗ್ಗೆ ಉಪ್ಪೇನಾ ನಿರ್ದೇಶಕ ಬುಚಿ ಬಾಬು ಈ ರೀತಿಯ ಹೇಳಿಕೆ ನೀಡಿದ್ದಾರೆ.

ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಈಗಾಗಲೇ ಅಲ್ಲು ಅರ್ಜುನ್ ಲುಕ್​ ಹೇಗಿರಲಿದೆ ಎಂಬುದನ್ನು ಚಿತ್ರತಂಡ ಅನಾವರಣ ಮಾಡಿದೆ. ಈಗ ಸಿನಿಮಾವನ್ನು ಬುಚಿ ಬಾಬು ವೀಕ್ಷಣೆ ಮಾಡಿದ್ದು, ಶ್ಲಾಘಿಸಿದ್ದಾರೆ.

‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್​ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದಿದ್ದಾರೆ ಬುಚಿ ಬಾಬು.

ಈ ರೀತಿಯ ಸಿನಿಮಾಗಳಲ್ಲಿ ಸಂಗೀತ ಅನ್ನೋದು ತುಂಬಾನೇ ಪ್ರಾಮುಖ್ಯತೆ ಪಡೆದುಕೊಳ್ಳುತ್ತೆ. ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಬುಚಿ ಬಾಬು ಮಾಹಿತಿ ನೀಡಿದ್ದಾರೆ. ‘ದೇವಿ ಪ್ರಸಾದ್ ಈ ಚಿತ್ರದಲ್ಲಿ ಅದ್ಭುತ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿನಿಮಾದ ಕಥೆ ಅದ್ಭುತವಾಗಿ ಮೂಡಿ ಬಂದಿದೆ. ಇದು ಅಭಿಮಾನಿಗಳಿಗೆ ಇಷ್ಟವಾಗಲಿದೆ ಎಂದು ಹೇಳಿದ್ದಾರೆ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. 2018ರಲ್ಲಿ ತೆರೆಕಂಡ ರಂಗಸ್ಥಲಂ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ರಂಗಸ್ಥಲಂ ಸಿನಿಮಾ ಕತೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಿತ್ತು. ಪುಷ್ಪ ಸಿನಿಮಾ ಕಾಡಿನ ಹಿನ್ನೆಲೆ ಹೊಂದಿದೆ.

ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಟ್ರಕ್ ಡ್ರೈವರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ. ಇದೇ ಆಗಸ್ಟ್ 13ರಂದು ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ. ಹೀಗಿರುವಾಗಲೇ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ಒಂದು ಸಿಕ್ಕಿದೆ.

ಇದನ್ನೂ ಓದಿ:

 Pushpa: ರಶ್ಮಿಕಾ-ಅಲ್ಲು ಅರ್ಜುನ್ ನಟನೆಯ​ ‘ಪುಷ್ಪ’ ಚಿತ್ರಕ್ಕೆ ಹೆಸರು ಚೇಂಜ್​; ಯಾಕಿಂಥ ನಿರ್ಧಾರ?

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ