AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ-ಅಲ್ಲು ಅರ್ಜುನ್ ಸಿನಿಮಾದಲ್ಲಿ ದುಬಾರಿ ಫೈಟ್; 40 ಕೋಟಿ ರೂ. ಚೆಲ್ಲಿದ ಪುಷ್ಪ ನಿರ್ಮಾಪಕರು

Pushpa Movie: ಪುಷ್ಪ ಸಿನಿಮಾದ ಕಥಾನಾಯಕನ ಇಂಟ್ರಡಕ್ಷನ್​ ಟೀಸರ್​​ ನೋಡಿ ಸಿನಿಪ್ರಿಯರು ಮೆಚ್ಚಿಕೊಂಡಿದ್ದರು. ಅದರಲ್ಲಿನ ಫೈಟಿಂಗ್​ ದೃಶ್ಯಗಳು ಮೈ ನವಿರೇಳಿಸುವಂತಿತ್ತು. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಲ್ಲರಲ್ಲೂ ಇನ್ನಷ್ಟು ಅಚ್ಚರಿ ಮೂಡಿಸಿದೆ.

ರಶ್ಮಿಕಾ-ಅಲ್ಲು ಅರ್ಜುನ್ ಸಿನಿಮಾದಲ್ಲಿ ದುಬಾರಿ ಫೈಟ್; 40 ಕೋಟಿ ರೂ. ಚೆಲ್ಲಿದ ಪುಷ್ಪ ನಿರ್ಮಾಪಕರು
ಅಲ್ಲು ಅರ್ಜುನ್​ - ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Apr 20, 2021 | 3:43 PM

Share

ಸ್ಟಾರ್​ ನಟರ ಸಿನಿಮಾ ಎಂದಾಗ ಅಲ್ಲೊಂದಷ್ಟು ಆ್ಯಕ್ಷನ್ ದೃಶ್ಯಗಳು ಇರಲೇಬೆಕು. ಈ ಫೈಟ್​ ದೃಶ್ಯಗಳಿಗಾಗಿ ಹೀರೋಗಳು ಕೆಲವೊಮ್ಮೆ ದೊಡ್ಡ ದೊಡ್ಡ ರಿಸ್ಕ್​ಗಳನ್ನೇ ತೆಗೆದುಕೊಳ್ಳುತ್ತಾರೆ. ಇನ್ನು, ಚಿತ್ರದ ನಿರ್ಮಾಪಕರೂ ಕೂಡ ಅಷ್ಟೇ, ಈ ರೀತಿಯ ದೃಶ್ಯಗಳು ಅದ್ದೂರಿಯಾಗಿ ಮೂಡಿಬರಲಿ ಎನ್ನುವ ಕಾರಣಕ್ಕೆ ದೊಡ್ಡ ಮೊತ್ತದ ಹಣವನ್ನೇ ಖರ್ಚು ಮಾಡುತ್ತಾರೆ. ಈಗ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸಿನಿಮಾದ ನಿರ್ಮಾಪಕ ಕೂಡ ದೊಡ್ಡ ರಿಸ್ಕ್​ ಒಂದನ್ನು ತೆಗೆದುಕೊಂಡಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ‘ಪುಷ್ಪ’ ಸಿನಿಮಾದ ಫೈಟಿಂಗ್​ ಸೀನ್​ಗಳ ಶೂಟಿಂಗ್​​ಗಾಗಿಯೆ ಬರೋಬ್ಬರಿ 40 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

‘ಅಲಾ ವೈಕುಂಠಪುರಂಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್​​ ಸಂಸ್ಥೆಯು ಈ ಸಿನಿಮಾ ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಕಾಡಿನ ಹಿನ್ನೆಲೆಯಲ್ಲಿ ಪುಷ್ಪ ಕಥೆ ಸಾಗಲಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಹೆಸರಿನ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ಇಂಟ್ರೊಡಕ್ಷನ್​ ಟೀಸರ್​ ತುಂಬಾನೇ ಮೆಚ್ಚುಗೆ ಪಡೆದುಕೊಂಡಿತ್ತು.

ಪುಷ್ಪರಾಜ್​ ಪಾತ್ರದ ಸಣ್ಣ ಝಲಕ್​ ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು. ಅಷ್ಟೇ ಅಲ್ಲದೆ, ಸಿನಿಮಾದ ಫೈಟಿಂಗ್​ ದೃಶ್ಯಗಳು ಮೈ ನವಿರೇಳಿಸುವಂತಿತ್ತು. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಮಾಹಿತಿ ಎಲ್ಲರನ್ನೂ ಅಚ್ಚರಿಪಡಿಸಿದೆ. ನಿರ್ಮಾಪಕರು ಸಿನಿಮಾದ ಫೈಟಿಂಗ್​ ಶೂಟಿಂಗ್​ಗೆ 40 ಕೋಟಿ ರೂ. ವ್ಯಯಿಸಿದ್ದಾರಂತೆ. ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಅದ್ಭುತವಾಗಿ ಮೂಡಿಬರಬೇಕು ಎನ್ನುವ ಕಾರಣಕ್ಕೆ ದೇಶದ ನಾನಾ ಕಡೆಗಳಿಂದ ನುರಿತ ಸ್ಟಂಟ್​ ಮಾಸ್ಟರ್​ಗಳನ್ನು ಕರೆಸಿಕೊಳ್ಳಲಾಗಿದೆ.

ಸದ್ಯ ಈ ಹೊಸ ವಿಚಾರ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ. ಸಿನಿಮಾದಲ್ಲಿ ಬರುವ ಆ್ಯಕ್ಷನ್​ ದೃಶ್ಯಗಳು ಎಷ್ಟು ಅದ್ದೂರಿಯಾಗಿ ಮೂಡಿ ಬರಬಹುದು ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಕೂಡ ಆಗುತ್ತಿದೆ. ಇಡೀ ಚಿತ್ರದಲ್ಲಿ ಆ್ಯಕ್ಷನ್​ ದೃಶ್ಯಗಳು ಹೆಚ್ಚು ಹೈಲೈಟ್​ ಆಗಲಿವೆ ಎಂದು ಕೂಡ ಹೇಳಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್​ 13ರಂದು ಸಿನಿಮಾ ತೆರೆಗೆ ಬರಲಿದೆ.

ಇದನ್ನೂ ಓದಿ: Allu Arjun: ಕೇವಲ 24 ಗಂಟೆಯಲ್ಲಿ ಬಾಹುಬಲಿ ದಾಖಲೆ ಮುರಿದ ಅಲ್ಲು ಅರ್ಜುನ್ ನಟನೆಯ ಪುಷ್ಪ​!

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!