AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಅಂದುಕೊಂಡಿದ್ದಕಿಂತಲೂ ಮುನ್ನವೇ ‘ಪುಷ್ಪ’ ರಿಲೀಸ್​; ಅಲ್ಲು ಅರ್ಜುನ್​-ರಶ್ಮಿಕಾ ಚಿತ್ರದ ಬಿಡುಗಡೆ ದಿನಾಂಕ ಪ್ರಕಟ

Pushpa Release Date: ಪಾತ್ರವರ್ಗದ ಕಾರಣದಿಂದ ‘ಪುಷ್ಪ’ ಚಿತ್ರ ಹೈಪ್​ ಸೃಷ್ಟಿಮಾಡಿದೆ. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ಮಾತ್ರವಲ್ಲದೇ ಡಾಲಿ ಧನಂಜಯ, ಪ್ರಕಾಶ್​ ರೈ, ಫಹಾದ್​ ಫಾಸಿಲ್​, ಜಗಪತಿ ಬಾಬು ಮುಂತಾದವರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Rashmika Mandanna: ಅಂದುಕೊಂಡಿದ್ದಕಿಂತಲೂ ಮುನ್ನವೇ ‘ಪುಷ್ಪ’ ರಿಲೀಸ್​; ಅಲ್ಲು ಅರ್ಜುನ್​-ರಶ್ಮಿಕಾ ಚಿತ್ರದ ಬಿಡುಗಡೆ ದಿನಾಂಕ ಪ್ರಕಟ
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Oct 02, 2021 | 12:00 PM

Share

ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳು ‘ಪುಷ್ಪ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಅಲ್ಲು ಅರ್ಜುನ್​ ನಾಯಕತ್ವದ ಈ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಬಾರಿಯ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ‘ಪುಷ್ಪ’ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ನಿರ್ದಿಷ್ಟ ದಿನಾಂಕವನ್ನು ಚಿತ್ರತಂಡ ತಿಳಿಸಿರಲಿಲ್ಲ. ಈಗ ದಿನಾಂಕ ಕೂಡ ನಿಗದಿ ಆಗಿದೆ. ಆ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಡಿ.17ರಂದು ವಿಶ್ವಾದ್ಯಂತ ‘ಪುಷ್ಪ’ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಅನೌನ್ಸ್​ ಮಾಡಿದೆ.

ಪುಷ್ಪ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳಿವೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರು ಲಾರಿ ಡ್ರೈವರ್​ ಪಾತ್ರ ಮಾಡಿದ್ದಾರೆ. ಅವರ ಲುಕ್​ ರಗಡ್​ ಆಗಿದೆ. ಖ್ಯಾತ ನಿರ್ದೇಶಕ ಸುಕುಮಾರ್​ ಅವರು ರಕ್ತಚಂದನ ಕಳ್ಳಸಾಗಾಣಿಕೆಯ ಹಿನ್ನೆಲೆಯಲ್ಲಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಎರಡು ಪಾರ್ಟ್​ನಲ್ಲಿ ‘ಪುಷ್ಪ’ ಮೂಡಿಬರುತ್ತಿದ್ದು, ಸಿನಿಪ್ರಿಯರಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.

ಪಾತ್ರವರ್ಗದ ಕಾರಣದಿಂದಲೂ ‘ಪುಷ್ಪ’ ಚಿತ್ರ ಹೈಪ್​ ಸೃಷ್ಟಿಮಾಡಿದೆ. ಡಾಲಿ ಧನಂಜಯ, ಪ್ರಕಾಶ್​ ರೈ, ಫಹಾದ್​ ಫಾಸಿಲ್​, ಜಗಪತಿ ಬಾಬು ಮುಂತಾದವರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಗೂ ಡಬ್​ ಆಗಿ ಈ ಸಿನಿಮಾ ತೆರೆಕಾಣುತ್ತಿದೆ.

ರಶ್ಮಿಕಾ ನಿಭಾಯಿಸುತ್ತಿರುವ ಶ್ರೀವಲ್ಲಿ ಎಂಬ ಪಾತ್ರದ ಫಸ್ಟ್​ ಲುಕ್​ ಕೂಡ ಇತ್ತೀಚೆಗೆ ಬಿಡುಗಡೆ ಆಗಿದೆ. ಆದರೆ ಅದು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಈ ಪೋಸ್ಟರ್​ ಕೆಲವರಿಗೆ ಇಷ್ಟ ಆಗಿಲ್ಲ. ಅದನ್ನು ಮೀಮ್​ಗಳ ರೂಪದಲ್ಲಿ ತಿಳಿಸಲಾಗುತ್ತಿದೆ. ಆ ಫೋಟೋವನ್ನು ಹಲವು ಬಗೆಯಲ್ಲಿ ಎಡಿಟ್​ ಮಾಡಿ ಹರಿಬಿಡಲಾಗುತ್ತಿದೆ. ರಶ್ಮಿಕಾ ಟಾಯ್ಲೆಟ್​ನಲ್ಲಿ ಕುಳಿತಿರುವಂತೆ, ಮಾರ್ಕೆಟ್​ನಲ್ಲಿ ಮೀನು ಮಾರುತ್ತಿರುವಂತೆ, ಹೊಲ ಗದ್ದೆಯಲ್ಲಿ ಕುಳಿತು ಕೆಲಸ ಮಾಡುತ್ತಿರುವಂತೆ, ದುಂಡು ಪಾಳ್ಯ ಸಿನಿಮಾದಲ್ಲಿ ಪೂಜಾ ಗಾಂಧಿಯ ಪಕ್ಕ ಕುಳಿತಿರುವಂತೆ.. ಹೀಗೆ ನಾನಾ ಬಗೆಯಲ್ಲಿ ಮೀಮ್​ಗಳನ್ನು ತಯಾರಿಸಲಾಗಿದೆ. ಇದರಿಂದ ‘ಪುಷ್ಪ’ ಚಿತ್ರಕ್ಕೆ ಭರ್ಜರಿ ಪ್ರಚಾರ ಸಿಗುತ್ತಿದೆ.

ಇದನ್ನೂ ಓದಿ:

ಗೋವಾದಲ್ಲಿ ಹೊಸ ಮನೆ ಖರೀದಿಸಿದ ರಶ್ಮಿಕಾ ಮಂದಣ್ಣ; ಎಲ್ಲಿಂದ ಬರುತ್ತಿದೆ ಇಷ್ಟೊಂದು ದುಡ್ಡು?

ಪುರುಷರ ಒಳಉಡುಪು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ; ಇದರ ಕಾನ್ಸೆಪ್ಟ್​ ನೋಡಿ ಹೆಣ್ಮಕ್ಕಳು ಸಹಿಸ್ತಾರಾ?

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ