AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಅಂದುಕೊಂಡಿದ್ದಕಿಂತಲೂ ಮುನ್ನವೇ ‘ಪುಷ್ಪ’ ರಿಲೀಸ್​; ಅಲ್ಲು ಅರ್ಜುನ್​-ರಶ್ಮಿಕಾ ಚಿತ್ರದ ಬಿಡುಗಡೆ ದಿನಾಂಕ ಪ್ರಕಟ

Pushpa Release Date: ಪಾತ್ರವರ್ಗದ ಕಾರಣದಿಂದ ‘ಪುಷ್ಪ’ ಚಿತ್ರ ಹೈಪ್​ ಸೃಷ್ಟಿಮಾಡಿದೆ. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ಮಾತ್ರವಲ್ಲದೇ ಡಾಲಿ ಧನಂಜಯ, ಪ್ರಕಾಶ್​ ರೈ, ಫಹಾದ್​ ಫಾಸಿಲ್​, ಜಗಪತಿ ಬಾಬು ಮುಂತಾದವರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Rashmika Mandanna: ಅಂದುಕೊಂಡಿದ್ದಕಿಂತಲೂ ಮುನ್ನವೇ ‘ಪುಷ್ಪ’ ರಿಲೀಸ್​; ಅಲ್ಲು ಅರ್ಜುನ್​-ರಶ್ಮಿಕಾ ಚಿತ್ರದ ಬಿಡುಗಡೆ ದಿನಾಂಕ ಪ್ರಕಟ
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Oct 02, 2021 | 12:00 PM

Share

ನಟಿ ರಶ್ಮಿಕಾ ಮಂದಣ್ಣ ಅಭಿಮಾನಿಗಳು ‘ಪುಷ್ಪ’ ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಅಲ್ಲು ಅರ್ಜುನ್​ ನಾಯಕತ್ವದ ಈ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಬಾರಿಯ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ‘ಪುಷ್ಪ’ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ನಿರ್ದಿಷ್ಟ ದಿನಾಂಕವನ್ನು ಚಿತ್ರತಂಡ ತಿಳಿಸಿರಲಿಲ್ಲ. ಈಗ ದಿನಾಂಕ ಕೂಡ ನಿಗದಿ ಆಗಿದೆ. ಆ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಡಿ.17ರಂದು ವಿಶ್ವಾದ್ಯಂತ ‘ಪುಷ್ಪ’ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಅನೌನ್ಸ್​ ಮಾಡಿದೆ.

ಪುಷ್ಪ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಹಲವು ಕಾರಣಗಳಿವೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್​ ಅವರು ಲಾರಿ ಡ್ರೈವರ್​ ಪಾತ್ರ ಮಾಡಿದ್ದಾರೆ. ಅವರ ಲುಕ್​ ರಗಡ್​ ಆಗಿದೆ. ಖ್ಯಾತ ನಿರ್ದೇಶಕ ಸುಕುಮಾರ್​ ಅವರು ರಕ್ತಚಂದನ ಕಳ್ಳಸಾಗಾಣಿಕೆಯ ಹಿನ್ನೆಲೆಯಲ್ಲಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ. ಎರಡು ಪಾರ್ಟ್​ನಲ್ಲಿ ‘ಪುಷ್ಪ’ ಮೂಡಿಬರುತ್ತಿದ್ದು, ಸಿನಿಪ್ರಿಯರಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.

ಪಾತ್ರವರ್ಗದ ಕಾರಣದಿಂದಲೂ ‘ಪುಷ್ಪ’ ಚಿತ್ರ ಹೈಪ್​ ಸೃಷ್ಟಿಮಾಡಿದೆ. ಡಾಲಿ ಧನಂಜಯ, ಪ್ರಕಾಶ್​ ರೈ, ಫಹಾದ್​ ಫಾಸಿಲ್​, ಜಗಪತಿ ಬಾಬು ಮುಂತಾದವರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಗೂ ಡಬ್​ ಆಗಿ ಈ ಸಿನಿಮಾ ತೆರೆಕಾಣುತ್ತಿದೆ.

ರಶ್ಮಿಕಾ ನಿಭಾಯಿಸುತ್ತಿರುವ ಶ್ರೀವಲ್ಲಿ ಎಂಬ ಪಾತ್ರದ ಫಸ್ಟ್​ ಲುಕ್​ ಕೂಡ ಇತ್ತೀಚೆಗೆ ಬಿಡುಗಡೆ ಆಗಿದೆ. ಆದರೆ ಅದು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಈ ಪೋಸ್ಟರ್​ ಕೆಲವರಿಗೆ ಇಷ್ಟ ಆಗಿಲ್ಲ. ಅದನ್ನು ಮೀಮ್​ಗಳ ರೂಪದಲ್ಲಿ ತಿಳಿಸಲಾಗುತ್ತಿದೆ. ಆ ಫೋಟೋವನ್ನು ಹಲವು ಬಗೆಯಲ್ಲಿ ಎಡಿಟ್​ ಮಾಡಿ ಹರಿಬಿಡಲಾಗುತ್ತಿದೆ. ರಶ್ಮಿಕಾ ಟಾಯ್ಲೆಟ್​ನಲ್ಲಿ ಕುಳಿತಿರುವಂತೆ, ಮಾರ್ಕೆಟ್​ನಲ್ಲಿ ಮೀನು ಮಾರುತ್ತಿರುವಂತೆ, ಹೊಲ ಗದ್ದೆಯಲ್ಲಿ ಕುಳಿತು ಕೆಲಸ ಮಾಡುತ್ತಿರುವಂತೆ, ದುಂಡು ಪಾಳ್ಯ ಸಿನಿಮಾದಲ್ಲಿ ಪೂಜಾ ಗಾಂಧಿಯ ಪಕ್ಕ ಕುಳಿತಿರುವಂತೆ.. ಹೀಗೆ ನಾನಾ ಬಗೆಯಲ್ಲಿ ಮೀಮ್​ಗಳನ್ನು ತಯಾರಿಸಲಾಗಿದೆ. ಇದರಿಂದ ‘ಪುಷ್ಪ’ ಚಿತ್ರಕ್ಕೆ ಭರ್ಜರಿ ಪ್ರಚಾರ ಸಿಗುತ್ತಿದೆ.

ಇದನ್ನೂ ಓದಿ:

ಗೋವಾದಲ್ಲಿ ಹೊಸ ಮನೆ ಖರೀದಿಸಿದ ರಶ್ಮಿಕಾ ಮಂದಣ್ಣ; ಎಲ್ಲಿಂದ ಬರುತ್ತಿದೆ ಇಷ್ಟೊಂದು ದುಡ್ಡು?

ಪುರುಷರ ಒಳಉಡುಪು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ; ಇದರ ಕಾನ್ಸೆಪ್ಟ್​ ನೋಡಿ ಹೆಣ್ಮಕ್ಕಳು ಸಹಿಸ್ತಾರಾ?

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!