AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಭಾವನೆ ಜತೆ ಬೋನಸ್ ಕೊಡ್ತೀನಿ ಅಂದ್ರೂ ಆಫರ್ ತಿರಸ್ಕರಿಸಿದ ಅಲ್ಲು ಅರ್ಜುನ್; ಭೇಷ್​ ಎಂದ ಫ್ಯಾನ್ಸ್

ಅಲ್ಲು ಅರ್ಜುನ್ ಪ್ರತಿ ಜಾಹೀರಾತಿಗೆ 7.5 ಕೋಟಿ ರೂಪಾಯಿ ಜೇಬಿಗೆ ಇಳಿಸಿಕೊಳ್ಳುತ್ತಾರೆ ಎನ್ನಲಾಗಿದೆ. ತಂಬಾಕು ಹಾಗೂ ಮದ್ಯದ ಕಂಪನಿಯವರು ಈ ಸಂಭಾವನೆಯ ಜತೆಗೆ 2.5 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಕೊಡುವ ಆಫರ್ ನೀಡಿದ್ದರು.

ಸಂಭಾವನೆ ಜತೆ ಬೋನಸ್ ಕೊಡ್ತೀನಿ ಅಂದ್ರೂ ಆಫರ್ ತಿರಸ್ಕರಿಸಿದ ಅಲ್ಲು ಅರ್ಜುನ್; ಭೇಷ್​ ಎಂದ ಫ್ಯಾನ್ಸ್
ಅಲ್ಲು ಅರ್ಜುನ್
TV9 Web
| Edited By: |

Updated on: Aug 11, 2022 | 2:32 PM

Share

ಅಲ್ಲು ಅರ್ಜುನ್ (Allu Arjun) ಅವರು ಸ್ಟೈಲಿಶ್ ಸ್ಟಾರ್ ಎಂಬ ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ‘ಪುಷ್ಪ’ ಚಿತ್ರ (Pushpa Movie) ತೆರೆಕಂಡ ಬಳಿಕ ಬಾಲಿವುಡ್​​ನಲ್ಲಿ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಈ ಕಾರಣಕ್ಕೆ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಕೇವಲ ಸಿನಿಮಾ ಮಾತ್ರವಲ್ಲದೆ ಜಾಹೀರಾತು ಕ್ಷೇತ್ರಗಳಿಂದಲೂ ಅಲ್ಲು ಅರ್ಜುನ್​ಗೆ ಹಲವು ಅವಕಾಶಗಳು ಹರಿದುಬರುತ್ತಿವೆ. ಆದರೆ, ಅವರು ಒಂದು ಜಾಹೀರಾತಿನಲ್ಲಿ ನಟಿಸಲು ನೋ ಎಂದಿದ್ದಾರೆ. ಈ ವಿಚಾರ ಫ್ಯಾನ್ಸ್ ಕಿವಿಗೂ ಬಿದ್ದಿದೆ. ಈ ಬಗ್ಗೆ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ.

ಅಲ್ಲು ಅರ್ಜುನ್​​ ಈಗಾಗಲೇ ಹಲವು ಜಾಹೀರಾತುಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ. ಇತ್ತೀಚೆಗೆ ಅವರು ಜೊಮ್ಯಾಟೋ ಆ್ಯಡ್​ನಲ್ಲಿ ಮಿಂಚಿದ್ದರು. ಇತ್ತೀಚೆಗೆ ತಂಬಾಕು ಹಾಗೂ ಮದ್ಯ ಕಂಪನಿಯೊಂದರ ಅಡ್ವಟೈಸ್​ಮೆಂಟ್​ನಲ್ಲಿ ನಟಿಸಲು ಸ್ಟೈಲಿಶ್​ ಸ್ಟಾರ್​​ಗೆ ಆಫರ್ ನೀಡಲಾಗಿತ್ತು. ಸಂಭಾವನೆ ಜತೆಗೆ ಬೋನಸ್​ ಕೊಡುವುದಾಗಿಯೂ ಕಂಪನಿ ಹೇಳಿತ್ತು. ಆದರೆ, ಹಣದ ಆಸೆಗೆ ಬೀಳದೆ ಅಲ್ಲು ಅರ್ಜುನ್ ಅವರು ಈ ಆಫರ್ ತಿರಸ್ಕರಿಸಿದ್ದಾರೆ.

ಅಲ್ಲು ಅರ್ಜುನ್ ಪ್ರತಿ ಜಾಹೀರಾತಿಗೆ 7.5 ಕೋಟಿ ರೂಪಾಯಿ ಜೇಬಿಗೆ ಇಳಿಸಿಕೊಳ್ಳುತ್ತಾರೆ ಎನ್ನಲಾಗಿದೆ. ತಂಬಾಕು ಹಾಗೂ ಮದ್ಯದ ಕಂಪನಿಯವರು ಈ ಸಂಭಾವನೆಯ ಜತೆಗೆ 2.5 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಕೊಡುವ ಆಫರ್ ನೀಡಿದ್ದರು. ಆದರೆ, ಇದಕ್ಕೆ ಅಲ್ಲು ಅರ್ಜುನ್ ನೋ ಎಂದಿದ್ದಾರೆ.

ಇದನ್ನೂ ಓದಿ
Image
ತಲೆ ಮೇಲೆ ಬಿಳಿ ಕೂದಲು, ಕೈಯಲ್ಲಿ ಸಿಗಾರ್​; ಅಬ್ಬಾ ಹೇಗೆ ಕಾಣ್ತಿದ್ದಾರೆ ನೋಡಿ ಅಲ್ಲು ಅರ್ಜುನ್
Image
‘ಪುಷ್ಪ 2’ ಮಾತ್ರವಲ್ಲ ‘ಪುಷ್ಪ 3’ ಕೂಡ ಬರಲಿದೆ: ಸುದ್ದಿ ಖಚಿತಪಡಿಸಿದ ಫಹಾದ್​ ಫಾಸಿಲ್​; ಇಲ್ಲಿದೆ ವಿವರ
Image
Pushpa 2: ಫಾರಿನ್​ ಹುಡುಗಿ ಜತೆ ಅಲ್ಲು ಅರ್ಜುನ್​​ ರೊಮ್ಯಾನ್ಸ್​; ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಪಾತ್ರಕ್ಕೆ ಬೀಳುತ್ತಾ ಕತ್ತರಿ?
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ತಂಬಾಕು, ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಸೆಲೆಬ್ರಿಟಿಗಳನ್ನು ಹಿಂಬಾಲಿಸುವವರು ಅನೇಕರು ಇರುತ್ತಾರೆ. ಹೀಗಾಗಿ ಸ್ಟಾರ್​ಗಳು ಈ ರೀತಿ ಜಾಹೀರಾತು ಮಾಡದಿರಲಿ ಎಂದು ಫ್ಯಾನ್ಸ್ ಬಯಸುತ್ತಾರೆ. ಆದಾಗ್ಯೂ ಈ ರೀತಿಯ ಜಾಹೀರಾತಿನಲ್ಲಿ ನಟ/ನಟಿಯರು ಕಾಣಿಸಿಕೊಂಡರೆ ಫ್ಯಾನ್ಸ್ ಆಕ್ರೋಶ ಹೊರ ಹಾಕುತ್ತಾರೆ. ಈಗ ಅಲ್ಲು ಅರ್ಜುನ್ ಅವರು ಈ ಜಾಹೀರಾತನ್ನು ರಿಜೆಕ್ಟ್ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ

ಇತ್ತೀಚೆಗೆ ಬಾಲಿವುಡ್​ ನಟ ಅಕ್ಷಯ್ ಕುಮಾರ್ ಅವರು ವಿಮಲ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕೆ ಛೀಮಾರಿ ಹಾಕಿಸಿಕೊಂಡಿದ್ದರು. ಅನೇಕರು ಅವರನ್ನು ಟ್ರೋಲ್ ಮಾಡಿದ್ದರು. ಆ ಬಳಿಕ ಅಕ್ಷಯ್ ಕುಮಾರ್ ಅವರು ಈ ಒಪ್ಪಂದವನ್ನು ರದ್ದು ಮಾಡಿಕೊಂಡರು. ಬಳಿಕ ಫ್ಯಾನ್ಸ್ ಬಳಿ ಕ್ಷಮೆ ಕೇಳಿದರು.

ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್