AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಭಾವನೆ ಜತೆ ಬೋನಸ್ ಕೊಡ್ತೀನಿ ಅಂದ್ರೂ ಆಫರ್ ತಿರಸ್ಕರಿಸಿದ ಅಲ್ಲು ಅರ್ಜುನ್; ಭೇಷ್​ ಎಂದ ಫ್ಯಾನ್ಸ್

ಅಲ್ಲು ಅರ್ಜುನ್ ಪ್ರತಿ ಜಾಹೀರಾತಿಗೆ 7.5 ಕೋಟಿ ರೂಪಾಯಿ ಜೇಬಿಗೆ ಇಳಿಸಿಕೊಳ್ಳುತ್ತಾರೆ ಎನ್ನಲಾಗಿದೆ. ತಂಬಾಕು ಹಾಗೂ ಮದ್ಯದ ಕಂಪನಿಯವರು ಈ ಸಂಭಾವನೆಯ ಜತೆಗೆ 2.5 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಕೊಡುವ ಆಫರ್ ನೀಡಿದ್ದರು.

ಸಂಭಾವನೆ ಜತೆ ಬೋನಸ್ ಕೊಡ್ತೀನಿ ಅಂದ್ರೂ ಆಫರ್ ತಿರಸ್ಕರಿಸಿದ ಅಲ್ಲು ಅರ್ಜುನ್; ಭೇಷ್​ ಎಂದ ಫ್ಯಾನ್ಸ್
ಅಲ್ಲು ಅರ್ಜುನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 11, 2022 | 2:32 PM

Share

ಅಲ್ಲು ಅರ್ಜುನ್ (Allu Arjun) ಅವರು ಸ್ಟೈಲಿಶ್ ಸ್ಟಾರ್ ಎಂಬ ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ‘ಪುಷ್ಪ’ ಚಿತ್ರ (Pushpa Movie) ತೆರೆಕಂಡ ಬಳಿಕ ಬಾಲಿವುಡ್​​ನಲ್ಲಿ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಈ ಕಾರಣಕ್ಕೆ ಅವರಿಗೆ ಹಲವು ಆಫರ್​ಗಳು ಬರುತ್ತಿವೆ. ಕೇವಲ ಸಿನಿಮಾ ಮಾತ್ರವಲ್ಲದೆ ಜಾಹೀರಾತು ಕ್ಷೇತ್ರಗಳಿಂದಲೂ ಅಲ್ಲು ಅರ್ಜುನ್​ಗೆ ಹಲವು ಅವಕಾಶಗಳು ಹರಿದುಬರುತ್ತಿವೆ. ಆದರೆ, ಅವರು ಒಂದು ಜಾಹೀರಾತಿನಲ್ಲಿ ನಟಿಸಲು ನೋ ಎಂದಿದ್ದಾರೆ. ಈ ವಿಚಾರ ಫ್ಯಾನ್ಸ್ ಕಿವಿಗೂ ಬಿದ್ದಿದೆ. ಈ ಬಗ್ಗೆ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ.

ಅಲ್ಲು ಅರ್ಜುನ್​​ ಈಗಾಗಲೇ ಹಲವು ಜಾಹೀರಾತುಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ. ಇತ್ತೀಚೆಗೆ ಅವರು ಜೊಮ್ಯಾಟೋ ಆ್ಯಡ್​ನಲ್ಲಿ ಮಿಂಚಿದ್ದರು. ಇತ್ತೀಚೆಗೆ ತಂಬಾಕು ಹಾಗೂ ಮದ್ಯ ಕಂಪನಿಯೊಂದರ ಅಡ್ವಟೈಸ್​ಮೆಂಟ್​ನಲ್ಲಿ ನಟಿಸಲು ಸ್ಟೈಲಿಶ್​ ಸ್ಟಾರ್​​ಗೆ ಆಫರ್ ನೀಡಲಾಗಿತ್ತು. ಸಂಭಾವನೆ ಜತೆಗೆ ಬೋನಸ್​ ಕೊಡುವುದಾಗಿಯೂ ಕಂಪನಿ ಹೇಳಿತ್ತು. ಆದರೆ, ಹಣದ ಆಸೆಗೆ ಬೀಳದೆ ಅಲ್ಲು ಅರ್ಜುನ್ ಅವರು ಈ ಆಫರ್ ತಿರಸ್ಕರಿಸಿದ್ದಾರೆ.

ಅಲ್ಲು ಅರ್ಜುನ್ ಪ್ರತಿ ಜಾಹೀರಾತಿಗೆ 7.5 ಕೋಟಿ ರೂಪಾಯಿ ಜೇಬಿಗೆ ಇಳಿಸಿಕೊಳ್ಳುತ್ತಾರೆ ಎನ್ನಲಾಗಿದೆ. ತಂಬಾಕು ಹಾಗೂ ಮದ್ಯದ ಕಂಪನಿಯವರು ಈ ಸಂಭಾವನೆಯ ಜತೆಗೆ 2.5 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಕೊಡುವ ಆಫರ್ ನೀಡಿದ್ದರು. ಆದರೆ, ಇದಕ್ಕೆ ಅಲ್ಲು ಅರ್ಜುನ್ ನೋ ಎಂದಿದ್ದಾರೆ.

ಇದನ್ನೂ ಓದಿ
Image
ತಲೆ ಮೇಲೆ ಬಿಳಿ ಕೂದಲು, ಕೈಯಲ್ಲಿ ಸಿಗಾರ್​; ಅಬ್ಬಾ ಹೇಗೆ ಕಾಣ್ತಿದ್ದಾರೆ ನೋಡಿ ಅಲ್ಲು ಅರ್ಜುನ್
Image
‘ಪುಷ್ಪ 2’ ಮಾತ್ರವಲ್ಲ ‘ಪುಷ್ಪ 3’ ಕೂಡ ಬರಲಿದೆ: ಸುದ್ದಿ ಖಚಿತಪಡಿಸಿದ ಫಹಾದ್​ ಫಾಸಿಲ್​; ಇಲ್ಲಿದೆ ವಿವರ
Image
Pushpa 2: ಫಾರಿನ್​ ಹುಡುಗಿ ಜತೆ ಅಲ್ಲು ಅರ್ಜುನ್​​ ರೊಮ್ಯಾನ್ಸ್​; ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಪಾತ್ರಕ್ಕೆ ಬೀಳುತ್ತಾ ಕತ್ತರಿ?
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ತಂಬಾಕು, ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಸೆಲೆಬ್ರಿಟಿಗಳನ್ನು ಹಿಂಬಾಲಿಸುವವರು ಅನೇಕರು ಇರುತ್ತಾರೆ. ಹೀಗಾಗಿ ಸ್ಟಾರ್​ಗಳು ಈ ರೀತಿ ಜಾಹೀರಾತು ಮಾಡದಿರಲಿ ಎಂದು ಫ್ಯಾನ್ಸ್ ಬಯಸುತ್ತಾರೆ. ಆದಾಗ್ಯೂ ಈ ರೀತಿಯ ಜಾಹೀರಾತಿನಲ್ಲಿ ನಟ/ನಟಿಯರು ಕಾಣಿಸಿಕೊಂಡರೆ ಫ್ಯಾನ್ಸ್ ಆಕ್ರೋಶ ಹೊರ ಹಾಕುತ್ತಾರೆ. ಈಗ ಅಲ್ಲು ಅರ್ಜುನ್ ಅವರು ಈ ಜಾಹೀರಾತನ್ನು ರಿಜೆಕ್ಟ್ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್​ ಲುಕ್​ ಹೀಗಿರುತ್ತಾ? ವೈರಲ್​ ಆಗಿದೆ ಹೊಸ ಫೋಟೋ

ಇತ್ತೀಚೆಗೆ ಬಾಲಿವುಡ್​ ನಟ ಅಕ್ಷಯ್ ಕುಮಾರ್ ಅವರು ವಿಮಲ್ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕೆ ಛೀಮಾರಿ ಹಾಕಿಸಿಕೊಂಡಿದ್ದರು. ಅನೇಕರು ಅವರನ್ನು ಟ್ರೋಲ್ ಮಾಡಿದ್ದರು. ಆ ಬಳಿಕ ಅಕ್ಷಯ್ ಕುಮಾರ್ ಅವರು ಈ ಒಪ್ಪಂದವನ್ನು ರದ್ದು ಮಾಡಿಕೊಂಡರು. ಬಳಿಕ ಫ್ಯಾನ್ಸ್ ಬಳಿ ಕ್ಷಮೆ ಕೇಳಿದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ