AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಯಾರೂ ಸಿನಿಮಾ ಆಫರ್ ಮಾಡಿರಲಿಲ್ಲ’; ಸುಕುಮಾರ್ ಸಹಾಯ ನೆನೆದ ಅಲ್ಲು ಅರ್ಜುನ್

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮೊದಲ ಬಾರಿ ಒಂದಾಗಿದ್ದು ‘ಆರ್ಯ’ ಸಿನಿಮಾದಲ್ಲಿ. ಇದು ಅಲ್ಲು ಅರ್ಜುನ್ ಅವರ ಎರಡನೇ ಸಿನಿಮಾ ಆಗಿತ್ತು. ಸುಕುಮಾರ್​ಗೆ ಮೊದಲ ಸಿನಿಮಾ ಆಗಿತ್ತು. ಈ ಚಿತ್ರ ರಿಲೀಸ್ ಆಗಿದ್ದು 2004ರಲ್ಲಿ. ಆರಂಭದ ದಿನಗಳ ಬಗ್ಗೆ ಅಲ್ಲು ಅರ್ಜುನ್ ಮಾತನಾಡಿದ್ದಾರೆ.  

‘ನನಗೆ ಯಾರೂ ಸಿನಿಮಾ ಆಫರ್ ಮಾಡಿರಲಿಲ್ಲ’; ಸುಕುಮಾರ್ ಸಹಾಯ ನೆನೆದ ಅಲ್ಲು ಅರ್ಜುನ್
ಸುಕುಮಾರ್-ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on:Nov 25, 2024 | 2:47 PM

Share

ಅಲ್ಲು ಅರ್ಜುನ್ ಅವರು ಸ್ಟಾರ್ ಹೀರೋ ಆಗಿದ್ದಾರೆ. ಅವರಿಗೆ ಸಖತ್ ಜನಪ್ರಿಯತೆ ಇದೆ. ಕೇವಲ ಕರ್ನಾಟಕ ಮಾತ್ರವಲ್ಲದೆ ಭಾರತಾದ್ಯಂತ ಅವರಿಗೆ ಫ್ಯಾನ್ಸ್ ಇದ್ದಾರೆ. ಆರಂಭದಲ್ಲಿ ಅವರಿಗೆ ಆಫರ್​ಗಳೇ ಬರುತ್ತಿರಲಿಲ್ಲವಂತೆ. ಈ ಬಗ್ಗೆ ಅಲ್ಲು ಅರ್ಜುನ್ ಓಪನ್ ಆಗಿ ಹೇಳಿಕೊಂಡಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲಿ ಸಹಾಯಕ್ಕೆ ಬಂದಿದ್ದು ಸುಕುಮಾರ್ ಎಂಬುದನ್ನು ಹೇಳೋಕೆ ಅಲ್ಲು ಅರ್ಜುನ್ ಮರೆತಿಲ್ಲ.

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮೊದಲ ಬಾರಿ ಒಂದಾಗಿದ್ದು ‘ಆರ್ಯ’ ಸಿನಿಮಾದಲ್ಲಿ. ಇದು ಅಲ್ಲು ಅರ್ಜುನ್ ಅವರ ಎರಡನೇ ಸಿನಿಮಾ ಆಗಿತ್ತು. ಸುಕುಮಾರ್​ಗೆ ಮೊದಲ ಸಿನಿಮಾ ಆಗಿತ್ತು. ಈ ಚಿತ್ರ ರಿಲೀಸ್ ಆಗಿದ್ದು 2004ರಲ್ಲಿ. ಈ ಸಿನಿಮಾ ಸೂಪರ್ ಹಿಟ್ ಆಯಿತು. 2009ರಲ್ಲಿ ‘ಆರ್ಯ 2’ ಚಿತ್ರಕ್ಕಾಗಿ ಒಂದಾದರು. 2021ರಲ್ಲಿ ರಿಲೀಸ್ ಆದ ‘ಪುಷ್ಪ’ ಚಿತ್ರಕ್ಕೆ ಇವರು ಒಂದಾದರು. ಈಗ ನಾಲ್ಕನೇ ಬಾರಿಗೆ ಇವರು ಒಂದಾಗಿದ್ದಾರೆ. ಈ ವೇಳೆ ಆರಂಭದ ದಿನಗಳ ಬಗ್ಗೆ ಅಲ್ಲು ಅರ್ಜುನ್ ಮಾತನಾಡಿದ್ದಾರೆ.

ಚೆನ್ನೈನಲ್ಲಿ ‘ಪುಷ್ಪ 2’ ಈವೆಂಟ್ ನಡೆದಿದೆ. ಈ ವೇಳೆ ಮಾತನಾಡಿದ ಅಲ್ಲು ಅರ್ಜುನ್, ‘ಗಂಗೋತ್ರಿ ಸಿನಿಮಾ ಮೂಲಕ ನಾನು ಚಿತ್ರರಂಗಕ್ಕೆ ಕಾಲಿಟ್ಟೆ. ನಿರ್ದೇಶಕ ರಾಘವೇಂದ್ರ ರಾವ್ ಸೂಪರ್ ಹಿಟ್ ಆದರು. ಆದರೆ, ನಟನಾಗಿ ನಾನು ನಟನಾಗಿ ಯಶಸ್ಸು ಕಾಣಲಿಲ್ಲ’ ಎಂದಿದ್ದಾರೆ ಅವರು.

‘ಸಿನಿಮಾ ರಿಲೀಸ್ ಆದ ಬಳಿಕ ನನ್ನ ಜೊತೆ ಕೆಲಸ ಮಾಡಲು ಬರಲೇ ಇಲ್ಲ. ಆದರೆ, ಹೊಸ ನಿರ್ದೇಶಕ ಬಂದು ನನಗೆ ಆರ್ಯ ಸಿನಿಮಾದಲ್ಲಿ ಕೆಲಸ ಮಾಡಲು ಆಫರ್ ಕೊಟ್ಟರು. ಅದಾದ ಬಳಿಕ ನಾನು ತಿರುಗಿ ನೋಡಲೇ ಇಲ್ಲ’ ಎಂದಿದ್ದಾರೆ ಅವರು.

‘ನಾನು ನನ್ನ ಕರಿಯರ್​ನ ಹಿಂದಿರುಗಿ ನೋಡಿದಾಗ ಓರ್ವ ವ್ಯಕ್ತಿ ನನ್ನ ಮೇಲೇ ತುಂಬಾನೇ ಪರಿಣಾಮ ಬೀರಿದ್ದಾರೆ. ಆ ವ್ಯಕ್ತಿ ಸುಕುಮಾರ್. ಅವರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ನಾವು ಈ ಪ್ರಯಾಣದಲ್ಲಿ ಒಟ್ಟಿಗೆ ಇದ್ದೇವೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಕಟೌಟ್ ನಿರ್ಮಾಣದಲ್ಲೂ ಅಲ್ಲು ಅರ್ಜುನ್ ಫ್ಯಾನ್ಸ್ ದಾಖಲೆ; ತಲೆ ಎತ್ತಿತು 108 ಅಡಿ ಕಟೌಟ್

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಹೇಳಲಾಗಿತ್ತು. ಆದರೆ, ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮಧ್ಯೆ ಒಳ್ಳೆಯ ಗೆಳೆತನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:47 pm, Mon, 25 November 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ