AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾರವಾನ್, ‘ಪುಷ್ಪ 2’ ಚಿತ್ರದ ಸೆಟ್ ಹೇಗಿದೆ ಎಂಬುದನ್ನು ವಿಡಿಯೋ ಮೂಲಕ ತೋರಿಸಿದ ಅಲ್ಲು ಅರ್ಜುನ್

ಈ ವಿಡಿಯೋ ವೈರಲ್ ಆಗಿದೆ. ಪೋಸ್ಟ್ ಮಾಡಿದ ಒಂದು ಗಂಟೆಯಲ್ಲಿ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ. ‘ಪುಷ್ಪ’ ರಿಲೀಸ್ ಆದ ಬಳಿಕ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಿದೆ. ಈಗ ‘ಪುಷ್ಪ 2’ ಚಿತ್ರಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಕ್ಯಾರವಾನ್, ‘ಪುಷ್ಪ 2’ ಚಿತ್ರದ ಸೆಟ್ ಹೇಗಿದೆ ಎಂಬುದನ್ನು ವಿಡಿಯೋ ಮೂಲಕ ತೋರಿಸಿದ ಅಲ್ಲು ಅರ್ಜುನ್
ಅಲ್ಲು ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Aug 30, 2023 | 11:18 AM

Share

ಅಲ್ಲು ಅರ್ಜುನ್ (Allu Arjun) ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಈಗ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಅಭಿಮಾನಿಗಳಿಗೆ ಸ್ಪೆಷಲ್ ಟ್ರೀಟ್ ನೀಡಿದ್ದಾರೆ. ತಮ್ಮ ದಿನಚರಿ ಹೇಗಿರುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ. ಮುಂಜಾನೆ ಎದ್ದಾಗಿನಿಂದ, ಶೂಟಿಂಗ್ ಮುಗಿಯುವವರೆಗೆ ಏನೆಲ್ಲ ಮಾಡಲಾಗುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ.

ಅಲ್ಲು ಅರ್ಜುನ್ ಹೈದರಾಬಾದ್ ಮನೆ ಸಾಕಷ್ಟು ವಿಸ್ತಾರವಾಗಿದೆ. ಅವರ ಮನೆಯಲ್ಲಿ ದೊಡ್ಡ ಗಾರ್ಡನ್ ಇದೆ. ಮುಂಜಾನೆ ಎದ್ದ ತಕ್ಷಣ ಅವರು ಗಾರ್ಡನ್​ಗೆ ಬರುತ್ತಾರೆ. ಬಂದು ಕೆಲ ಸಮಯ ಅಲ್ಲಿ ಕಳೆಯುತ್ತಾರೆ. ಏಕಾಂಗಿಯಾಗಿ ಸಮಯ ಕಳೆಯಲು ಅವರಿಗೆ ಸಿಗುವ ಏಕೈಕ ಅವಕಾಶ ಅದು. ಆ ಬಳಿಕ ಕಾಫಿ ಕುಡಿಯುತ್ತಾರೆ, ತಿಂಡಿ ತಿನ್ನುತ್ತಾರೆ. ನಂತರ ಶೂಟ್ ತೆರಳುತ್ತಾರೆ.

ಮಧ್ಯಾಹ್ನ 1 ಗಂಟೆಗೆ ಕುಟುಂಬದವರ ಜೊತೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಾರೆ. ‘ಪುಷ್ಪ 2’ ಚಿತ್ರೀಕರಣ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ನಡೆಯುತ್ತಿದೆ. ಅಲ್ಲಿಗೆ ಬರುತ್ತಿದ್ದಂತೆ ಅವರಿಗೆ ಅಭಿಮಾನಿಗಳು ಎದುರಾಗುತ್ತಾರೆ. ಅವರಿಗೆ ಶೇಕ್​ ಹ್ಯಾಂಡ್ ಮಾಡಿ ಕ್ಯಾರವಾನ್ ತೆರಳುತ್ತಾರೆ. ಅಲ್ಲಿ ಸುಕುಮಾರ್ ಅವರ ಭೇಟಿ ಆಗುತ್ತದೆ. ಸುಕುಮಾರ್ ಹಾಗೂ ಅಲ್ಲು ಅರ್ಜುನ್ ಪರಸ್ಪರ ಮಾತುಕತೆ ನಡೆಸುತ್ತಾರೆ. ನಂತರ ಶೂಟಿಂಗ್​ಗೋಸ್ಕರ ಅಲ್ಲು ಅರ್ಜುನ್ ರೆಡಿ ಆಗುತ್ತಾರೆ. ಈ ರೀತಿಯಲ್ಲಿ ಅಲ್ಲು ಅರ್ಜುನ್ ದಿನಚರಿ ಇರುತ್ತದೆ.

View this post on Instagram

A post shared by Instagram (@instagram)

ಇದನ್ನೂ ಓದಿ: ಟಾಲಿವುಡ್​ನಲ್ಲೇ ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ನಟ ಅಲ್ಲು ಅರ್ಜುನ್

ಸದ್ಯ ಈ ವಿಡಿಯೋ ವೈರಲ್ ಆಗಿದೆ. ಪೋಸ್ಟ್ ಮಾಡಿದ ಒಂದು ಗಂಟೆಯಲ್ಲಿ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ. ‘ಪುಷ್ಪ’ ರಿಲೀಸ್ ಆದ ಬಳಿಕ ಅಲ್ಲು ಅರ್ಜುನ್ ಖ್ಯಾತಿ ಹೆಚ್ಚಿದೆ. ಈಗ ‘ಪುಷ್ಪ 2’ ಚಿತ್ರಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಚಿತ್ರದ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?