AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್‌ನಿಂದ ಮುಂಬೈಗೆ ಶಿಫ್ಟ್ ಆಗ್ತಾರಾ ಅಲ್ಲು ಅರ್ಜುನ್?

Allu Arjun movie: ಅಲ್ಲು ಅರ್ಜುನ್ ಅವರಿಗೆ ತೆಲುಗು ಮಾತ್ರವಲ್ಲದೆ ಭಾರತದ ಬಹುತೇಕ ಎಲ್ಲ ಚಿತ್ರರಂಗಗಳಲ್ಲಿಯೂ ಅವರಿಗೆ ಗೆಳೆಯರಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ತೆಲುಗನಲ್ಲಿ ಮಾತ್ರವಲ್ಲ, ಬಾಲಿವುಡ್​ನಿಂದಲೂ ಅವಕಾಶಗಳು ಬರುತ್ತಿವೆ. ಇದೀಗ ನಟ ಅಲ್ಲು ಅರ್ಜುನ್, ಹೈದರಾಬಾದ್ ಬಿಟ್ಟು ಮುಂಬೈಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ.

ಹೈದರಾಬಾದ್‌ನಿಂದ ಮುಂಬೈಗೆ ಶಿಫ್ಟ್ ಆಗ್ತಾರಾ ಅಲ್ಲು ಅರ್ಜುನ್?
Allu Arjun With Family
ಮಂಜುನಾಥ ಸಿ.
|

Updated on: Apr 21, 2026 | 3:43 PM

Share

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ತೆಲುಗು ಚಿತ್ರರಂಗದ ನಟರಾಗಿದ್ದರೂ ಸಹ ಅಲ್ಲು ಅರ್ಜುನ್ ಅವರಿಗೆ ಭಾರತದಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಭಾರತದ ಹಲವು ಭಾಷೆಗಳಿಗೆ ಡಬ್ ಆಗುತ್ತದೆ. ಅಲ್ಲು ಅರ್ಜುನ್ ಅವರಿಗೆ ತೆಲುಗು ಮಾತ್ರವಲ್ಲದೆ ಭಾರತದ ಬಹುತೇಕ ಎಲ್ಲ ಚಿತ್ರರಂಗಗಳಲ್ಲಿಯೂ ಅವರಿಗೆ ಗೆಳೆಯರಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ತೆಲುಗನಲ್ಲಿ ಮಾತ್ರವಲ್ಲ, ಬಾಲಿವುಡ್​ನಿಂದಲೂ ಅವಕಾಶಗಳು ಬರುತ್ತಿವೆ. ಇದೀಗ ನಟ ಅಲ್ಲು ಅರ್ಜುನ್, ಹೈದರಾಬಾದ್ ಬಿಟ್ಟು ಮುಂಬೈಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ.

ಅಲ್ಲು ಅರ್ಜುನ್ ಚಿತ್ರರಂಗ ಬದಲಿಸುತ್ತಿಲ್ಲ ಬದಲಿಗೆ ತಮ್ಮ ವಾಸ್ತವ್ಯ ಬದಲಿಸಲಿದ್ದಾರೆ ಎಂಬ ಸುದ್ದಿ ಇದೆ. ಅಲ್ಲು ಅರ್ಜುನ್ ಅವರು ಪ್ರಸ್ತುತ ಕುಟುಂಬದೊಂದಿಗೆ ಹೈದರಾಬಾದ್​​ನಲ್ಲಿ ನೆಲೆಸಿದ್ದಾರೆ. ಹೈದರಾಬಾದ್​​ನ ಜೂಬ್ಲಿ ಹಿಲ್ಸ್​​ನಲ್ಲಿ ಐಶಾರಾಮಿ ಮನೆ ಹೊಂದಿದ್ದಾರೆ. ಅವರ ಇಬ್ಬರು ಮಕ್ಕಳು ಸಹ ಹೈದರಾಬಾದ್​​ನಲ್ಲೇ ಶಾಲೆಗೆ ತೆರಳುತ್ತಾರೆ. ಆದರೆ ಇದೀಗ ಅವರು ತಮ್ಮ ಕುಟುಂಬದೊಂದಿಗೆ ಹೈದರಾಬಾದ್ ತೊರೆದು ಮುಂಬೈಗೆ ಹೋಗಿ ನೆಲೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳೆದ ವರ್ಷ ನಡೆದ ಕೆಲವು ಘಟನೆಗಳಿಂದ ಬೇಸರಗೊಂಡು ಅವರು ಈ ನಿರ್ಧಾರ ತಳೆದಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ದೀಪಿಕಾಗಾಗಿ ಶೂಟಿಂಗ್ ಶೆಡ್ಯೂಲ್ ಬದಲಿಸಲಿರುವ ಅಲ್ಲು ಅರ್ಜುನ್, ಶಾರುಖ್ ಖಾನ್

ಈ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿರುವ ಅಲ್ಲು ಅರ್ಜುನ್ ತಂದೆ ಹಾಗೂ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್, ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಅಲ್ಲು ಅರ್ಜುನ್ ಮುಂಬೈಗೆ ಶಿಫ್ಟ್ ಆಗುವ ಯಾವುದೇ ಆಲೋಚನೆ ಇಲ್ಲ ಅವರು ಇಲ್ಲಿಯೇ (ಹೈದರಾಬಾದ್​​ನಲ್ಲಿ) ಇರಲಿದ್ದಾರೆ ಎಂದಿದ್ದಾರೆ. ಅಲ್ಲು ಅರ್ಜುನ್ ಮುಂಬೈನಲ್ಲಿ ಒಂದು ಆಫೀಸ್ ಅಥವಾ ಫ್ಲ್ಯಾಟ್ ಖರೀದಿಸಿರುವುದು ನಿಜ ಇರಬಹುದು, ಅದು ಕೇವಲ ಅವರ ಕೆಲಸದ ಕಾರಣಕ್ಕಾಗಿ ಆಗಿದೆಯೇ ಹೊರತು ಬೇರೆ ಉದ್ದೇಶಕ್ಕಲ್ಲ. ಅವರು ಹೈದರಾಬಾದ್ ಬಿಟ್ಟು ಎಲ್ಲಿಗೂ ಹೋಗುತ್ತಿಲ್ಲ ಎಂದು ಹೇಳಿದ್ದಾರೆ.

ಅಲ್ಲು ಅರ್ಜುನ್ ಪ್ರಸ್ತುತ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಅಟ್ಲಿ ನಿರ್ದೇಶಿಸುತ್ತಿದ್ದು ಸಿನಿಮಾನಲ್ಲಿ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಮತ್ತು ರಶ್ಮಿಕಾ ಮಂದಣ್ಣ ನಾಯಕಿ. ಅದರ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಮಲಯಾಳಂನ ಬಾಸಿಲ್ ನಿರ್ದೇಶಿಸಲಿರುವ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಮತ್ತೊಮ್ಮೆ ‘ಪುಷ್ಪ’ ನಿರ್ದೇಶಕ ಸುಕುಮಾರ್ ಜೊತೆಗೆ ಕೈ ಜೋಡಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ