
ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ತೆಲುಗು ಚಿತ್ರರಂಗದ ನಟರಾಗಿದ್ದರೂ ಸಹ ಅಲ್ಲು ಅರ್ಜುನ್ ಅವರಿಗೆ ಭಾರತದಾದ್ಯಂತ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಭಾರತದ ಹಲವು ಭಾಷೆಗಳಿಗೆ ಡಬ್ ಆಗುತ್ತದೆ. ಅಲ್ಲು ಅರ್ಜುನ್ ಅವರಿಗೆ ತೆಲುಗು ಮಾತ್ರವಲ್ಲದೆ ಭಾರತದ ಬಹುತೇಕ ಎಲ್ಲ ಚಿತ್ರರಂಗಗಳಲ್ಲಿಯೂ ಅವರಿಗೆ ಗೆಳೆಯರಿದ್ದಾರೆ. ಅಲ್ಲು ಅರ್ಜುನ್ ಅವರಿಗೆ ತೆಲುಗನಲ್ಲಿ ಮಾತ್ರವಲ್ಲ, ಬಾಲಿವುಡ್ನಿಂದಲೂ ಅವಕಾಶಗಳು ಬರುತ್ತಿವೆ. ಇದೀಗ ನಟ ಅಲ್ಲು ಅರ್ಜುನ್, ಹೈದರಾಬಾದ್ ಬಿಟ್ಟು ಮುಂಬೈಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ.
ಅಲ್ಲು ಅರ್ಜುನ್ ಚಿತ್ರರಂಗ ಬದಲಿಸುತ್ತಿಲ್ಲ ಬದಲಿಗೆ ತಮ್ಮ ವಾಸ್ತವ್ಯ ಬದಲಿಸಲಿದ್ದಾರೆ ಎಂಬ ಸುದ್ದಿ ಇದೆ. ಅಲ್ಲು ಅರ್ಜುನ್ ಅವರು ಪ್ರಸ್ತುತ ಕುಟುಂಬದೊಂದಿಗೆ ಹೈದರಾಬಾದ್ನಲ್ಲಿ ನೆಲೆಸಿದ್ದಾರೆ. ಹೈದರಾಬಾದ್ನ ಜೂಬ್ಲಿ ಹಿಲ್ಸ್ನಲ್ಲಿ ಐಶಾರಾಮಿ ಮನೆ ಹೊಂದಿದ್ದಾರೆ. ಅವರ ಇಬ್ಬರು ಮಕ್ಕಳು ಸಹ ಹೈದರಾಬಾದ್ನಲ್ಲೇ ಶಾಲೆಗೆ ತೆರಳುತ್ತಾರೆ. ಆದರೆ ಇದೀಗ ಅವರು ತಮ್ಮ ಕುಟುಂಬದೊಂದಿಗೆ ಹೈದರಾಬಾದ್ ತೊರೆದು ಮುಂಬೈಗೆ ಹೋಗಿ ನೆಲೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕಳೆದ ವರ್ಷ ನಡೆದ ಕೆಲವು ಘಟನೆಗಳಿಂದ ಬೇಸರಗೊಂಡು ಅವರು ಈ ನಿರ್ಧಾರ ತಳೆದಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ದೀಪಿಕಾಗಾಗಿ ಶೂಟಿಂಗ್ ಶೆಡ್ಯೂಲ್ ಬದಲಿಸಲಿರುವ ಅಲ್ಲು ಅರ್ಜುನ್, ಶಾರುಖ್ ಖಾನ್
ಈ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿರುವ ಅಲ್ಲು ಅರ್ಜುನ್ ತಂದೆ ಹಾಗೂ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್, ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಅಲ್ಲು ಅರ್ಜುನ್ ಮುಂಬೈಗೆ ಶಿಫ್ಟ್ ಆಗುವ ಯಾವುದೇ ಆಲೋಚನೆ ಇಲ್ಲ ಅವರು ಇಲ್ಲಿಯೇ (ಹೈದರಾಬಾದ್ನಲ್ಲಿ) ಇರಲಿದ್ದಾರೆ ಎಂದಿದ್ದಾರೆ. ಅಲ್ಲು ಅರ್ಜುನ್ ಮುಂಬೈನಲ್ಲಿ ಒಂದು ಆಫೀಸ್ ಅಥವಾ ಫ್ಲ್ಯಾಟ್ ಖರೀದಿಸಿರುವುದು ನಿಜ ಇರಬಹುದು, ಅದು ಕೇವಲ ಅವರ ಕೆಲಸದ ಕಾರಣಕ್ಕಾಗಿ ಆಗಿದೆಯೇ ಹೊರತು ಬೇರೆ ಉದ್ದೇಶಕ್ಕಲ್ಲ. ಅವರು ಹೈದರಾಬಾದ್ ಬಿಟ್ಟು ಎಲ್ಲಿಗೂ ಹೋಗುತ್ತಿಲ್ಲ ಎಂದು ಹೇಳಿದ್ದಾರೆ.
ಅಲ್ಲು ಅರ್ಜುನ್ ಪ್ರಸ್ತುತ ‘ರಾಕಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಅಟ್ಲಿ ನಿರ್ದೇಶಿಸುತ್ತಿದ್ದು ಸಿನಿಮಾನಲ್ಲಿ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್ ಮತ್ತು ರಶ್ಮಿಕಾ ಮಂದಣ್ಣ ನಾಯಕಿ. ಅದರ ಬಳಿಕ ಲೋಕೇಶ್ ಕನಗರಾಜ್ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಮಲಯಾಳಂನ ಬಾಸಿಲ್ ನಿರ್ದೇಶಿಸಲಿರುವ ಸಿನಿಮಾನಲ್ಲಿ ನಟಿಸಲಿದ್ದಾರೆ. ಅದರ ಬಳಿಕ ಮತ್ತೊಮ್ಮೆ ‘ಪುಷ್ಪ’ ನಿರ್ದೇಶಕ ಸುಕುಮಾರ್ ಜೊತೆಗೆ ಕೈ ಜೋಡಿಸಲಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ