AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ವಿವಾಹ ವಾರ್ಷಿಕೋತ್ಸವ; ಸ್ನೇಹಾ ರೆಡ್ಡಿ ಜತೆಗಿನ ದಾಂಪತ್ಯಕ್ಕೆ ಈಗ 13 ವರ್ಷ

‘ಪುಷ್ಪ 2’ ಸಿನಿಮಾದ ಶೂಟಿಂಗ್​ನಲ್ಲಿ ಅಲ್ಲು​ ಅರ್ಜುನ್​ ಬ್ಯುಸಿ ಆಗಿದ್ದಾರೆ. ಸಿನಿಮಾದ ಕೆಲಸಗಳ ಒತ್ತಡ ಎಷ್ಟೇ ಇದ್ದರೂ ಕೂಡ ಅವರು ಕುಟುಂಬಕ್ಕೆ ಸಮಯ ಮೀಸಲಿಡುವುದನ್ನು ತಪ್ಪಿಸುವುದಿಲ್ಲ. ಇಂದು (ಮಾರ್ಚ್​ 6) ಅಲ್ಲು ಅರ್ಜುನ್​ ಮತ್ತು ಸ್ನೇಹಾ ರೆಡ್ಡಿ ಅವರು 13ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ.

ಅಲ್ಲು ಅರ್ಜುನ್​ ವಿವಾಹ ವಾರ್ಷಿಕೋತ್ಸವ; ಸ್ನೇಹಾ ರೆಡ್ಡಿ ಜತೆಗಿನ ದಾಂಪತ್ಯಕ್ಕೆ ಈಗ 13 ವರ್ಷ
ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ
ಮದನ್​ ಕುಮಾರ್​
|

Updated on: Mar 06, 2024 | 4:23 PM

Share

ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್ (Allu Arjun)​ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 13 ವರ್ಷ ಕಳೆದಿದೆ. ಸ್ನೇಹಾ ರೆಡ್ಡಿ (Sneha Reddy) ಜೊತೆ ಅಲ್ಲು ಅರ್ಜುನ್ ಅವರ ವಿವಾಹ 2011ರ ಮಾರ್ಚ್​ 6ರಂದು ನಡೆದಿತ್ತು. ಇಂದು (ಮಾ.6) 13ನೇ ವರ್ಷದ ವಿವಾಹ ವಾರ್ಷಿಕೋತ್ಸವ (Wedding Anniversary) ಆಚರಿಸಿಕೊಂಡಿರುವ ಈ ದಂಪತಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಪ್ರೀತಿಯ ಪತ್ನಿ ಸ್ನೇಹಾ ರೆಡ್ಡಿಗೆ ಅಲ್ಲು ಅರ್ಜುನ್​ ಅವರು ವಿಶೇಷವಾಗಿ ವಿಶ್​ ಮಾಡಿದ್ದಾರೆ. ಮದುವೆಯ ಒಂದು ಸ್ಪೆಷಲ್​ ಫೋಟೋವನ್ನು ಕೂಡ ಅವರು ಶೇರ್​ ಮಾಡಿಕೊಂಡಿದ್ದಾರೆ. ಹೆಂಡತಿಯನ್ನು ಪ್ರೀತಿಯಿಂದ ಕ್ಯೂಟಿ ಎಂದು ಅಲ್ಲು ಅರ್ಜುನ್ ಕರೆದಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅಲ್ಲು ಅರ್ಜುನ್​ ಅವರು ಪತ್ನಿ ಜೊತೆಗಿನ ಎರಡು ಫೋಟೋ ಹಂಚಿಕೊಂಡಿದ್ದಾರೆ. ‘ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಕ್ಯೂಟಿ. ಇಂದಿಗೆ 13 ವರ್ಷ ಆಯ್ತು. ನಿನ್ನ ಸಾಂಗತ್ಯದಿಂದ ನಾನು ಬೆಳೆದಿದ್ದೇನೆ. ನಿನ್ನಿಂದ ನಾನು ಶಕ್ತಿ ಪಡೆಯುತ್ತೇನೆ’ ಎಂದು ಪತ್ನಿಗೆ ಅಲ್ಲು ಅರ್ಜುನ್​ ಅವರು ಶುಭ ಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿವೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾರೆ ಅಲ್ಲು ಅರ್ಜುನ್ ಪುತ್ರ

ಅಲ್ಲು ಅರ್ಜುನ್​ ಮತ್ತು ಸ್ನೇಹಾ ರೆಡ್ಡಿ ಅವರದ್ದು ಲವ್ ಮ್ಯಾರೇಜ್​. ಅವರ ಲವ್​ ಸ್ಟೋರಿ ಕೂಡ ಸಿನಿಮಾದ ರೀತಿಯೇ ಇದೆ. ಆಪ್ತರೊಬ್ಬರ ಮದುವೆಯೊಂದರಲ್ಲಿ ಅಲ್ಲು ಅರ್ಜುನ್​ ಮತ್ತು ಸ್ನೇಹಾ ರೆಡ್ಡಿ ಅವರು ಮೊದಲ ಬಾರಿಗೆ ಭೇಟಿಯಾದರು. ಮೊದಲ ನೋಟದಲ್ಲೇ ಅಲ್ಲು ಅರ್ಜುನ್​ ಅವರಿಗೆ ಪ್ರೀತಿ ಚಿಗುರಿತು. ಸ್ನೇಹಿತರ ಸಹಾಯದಿಂದ ಸ್ನೇಹಾಗೆ ಅಲ್ಲು ಅರ್ಜುನ್​ ಮೆಸೇಜ್​ ಕಳಿಸಿದರು. ಬಳಿಕ ಇಬ್ಬರೂ ಡೇಟಿಂಗ್​ ಮಾಡಲು ಆರಂಭಿಸಿದರು. ಮೊದಲಿಗೆ ಇಬ್ಬರ ಪ್ರೀತಿಯನ್ನು ಕುಟುಂಬದವರು ಒಪ್ಪಿರಲಿಲ್ಲ. ನಂತರ ತಂದೆ-ತಾಯಿಯನ್ನು ಒಪ್ಪಿಸಿ ಸ್ನೇಹಾ ರೆಡ್ಡಿ ಮತ್ತು ಅಲ್ಲು ಅರ್ಜುನ್​ ಅವರು ಮದುವೆಯಾದರು.

ಇದನ್ನೂ ಓದಿ: ಅಲ್ಲು ಅರ್ಜುನ್​ಗೆ ಟಿವಿ9 ನಕ್ಷತ್ರ ಅವಾರ್ಡ್: ‘ಪುಷ್ಪ’ ಹೇಳಿದ್ದೇನು?

ಈ ಸ್ಟಾರ್​ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಅಲ್ಲು ಅರ್ಜುನ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ನಡುವೆ ಅವರು ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಾರೆ. ಪತ್ನಿ ಮತ್ತು ಮಕ್ಕಳ ಜೊತೆ ಕಾಲ ಕಳೆದ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ. ಸದ್ಯಕ್ಕೆ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ಆಗಸ್ಟ್​ 15ರಂದು ರಿಲೀಸ್​ ಆಗಲಿರುವ ಈ ಸಿನಿಮಾಗೆ ಈಗಲೇ ಪ್ರಚಾರ ನೀಡಲಾಗುತ್ತಿದೆ. ಅಲ್ಲು ಅರ್ಜುನ್​ ಅವರು ಬರ್ಲಿನ್​ಗೆ ಹಾಗೂ ರಶ್ಮಿಕಾ ಮಂದಣ್ಣ ಅವರು ಜಪಾನ್​ಗೆ ತೆರಳಿ ಈ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು