AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ವಿವಾಹ ವಾರ್ಷಿಕೋತ್ಸವ; ಸ್ನೇಹಾ ರೆಡ್ಡಿ ಜತೆಗಿನ ದಾಂಪತ್ಯಕ್ಕೆ ಈಗ 13 ವರ್ಷ

‘ಪುಷ್ಪ 2’ ಸಿನಿಮಾದ ಶೂಟಿಂಗ್​ನಲ್ಲಿ ಅಲ್ಲು​ ಅರ್ಜುನ್​ ಬ್ಯುಸಿ ಆಗಿದ್ದಾರೆ. ಸಿನಿಮಾದ ಕೆಲಸಗಳ ಒತ್ತಡ ಎಷ್ಟೇ ಇದ್ದರೂ ಕೂಡ ಅವರು ಕುಟುಂಬಕ್ಕೆ ಸಮಯ ಮೀಸಲಿಡುವುದನ್ನು ತಪ್ಪಿಸುವುದಿಲ್ಲ. ಇಂದು (ಮಾರ್ಚ್​ 6) ಅಲ್ಲು ಅರ್ಜುನ್​ ಮತ್ತು ಸ್ನೇಹಾ ರೆಡ್ಡಿ ಅವರು 13ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸೆಲೆಬ್ರೇಟ್​ ಮಾಡಿದ್ದಾರೆ.

ಅಲ್ಲು ಅರ್ಜುನ್​ ವಿವಾಹ ವಾರ್ಷಿಕೋತ್ಸವ; ಸ್ನೇಹಾ ರೆಡ್ಡಿ ಜತೆಗಿನ ದಾಂಪತ್ಯಕ್ಕೆ ಈಗ 13 ವರ್ಷ
ಅಲ್ಲು ಅರ್ಜುನ್​, ಸ್ನೇಹಾ ರೆಡ್ಡಿ
Follow us
ಮದನ್​ ಕುಮಾರ್​
|

Updated on: Mar 06, 2024 | 4:23 PM

ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್ (Allu Arjun)​ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು 13 ವರ್ಷ ಕಳೆದಿದೆ. ಸ್ನೇಹಾ ರೆಡ್ಡಿ (Sneha Reddy) ಜೊತೆ ಅಲ್ಲು ಅರ್ಜುನ್ ಅವರ ವಿವಾಹ 2011ರ ಮಾರ್ಚ್​ 6ರಂದು ನಡೆದಿತ್ತು. ಇಂದು (ಮಾ.6) 13ನೇ ವರ್ಷದ ವಿವಾಹ ವಾರ್ಷಿಕೋತ್ಸವ (Wedding Anniversary) ಆಚರಿಸಿಕೊಂಡಿರುವ ಈ ದಂಪತಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಪ್ರೀತಿಯ ಪತ್ನಿ ಸ್ನೇಹಾ ರೆಡ್ಡಿಗೆ ಅಲ್ಲು ಅರ್ಜುನ್​ ಅವರು ವಿಶೇಷವಾಗಿ ವಿಶ್​ ಮಾಡಿದ್ದಾರೆ. ಮದುವೆಯ ಒಂದು ಸ್ಪೆಷಲ್​ ಫೋಟೋವನ್ನು ಕೂಡ ಅವರು ಶೇರ್​ ಮಾಡಿಕೊಂಡಿದ್ದಾರೆ. ಹೆಂಡತಿಯನ್ನು ಪ್ರೀತಿಯಿಂದ ಕ್ಯೂಟಿ ಎಂದು ಅಲ್ಲು ಅರ್ಜುನ್ ಕರೆದಿದ್ದಾರೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಅಲ್ಲು ಅರ್ಜುನ್​ ಅವರು ಪತ್ನಿ ಜೊತೆಗಿನ ಎರಡು ಫೋಟೋ ಹಂಚಿಕೊಂಡಿದ್ದಾರೆ. ‘ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಕ್ಯೂಟಿ. ಇಂದಿಗೆ 13 ವರ್ಷ ಆಯ್ತು. ನಿನ್ನ ಸಾಂಗತ್ಯದಿಂದ ನಾನು ಬೆಳೆದಿದ್ದೇನೆ. ನಿನ್ನಿಂದ ನಾನು ಶಕ್ತಿ ಪಡೆಯುತ್ತೇನೆ’ ಎಂದು ಪತ್ನಿಗೆ ಅಲ್ಲು ಅರ್ಜುನ್​ ಅವರು ಶುಭ ಕೋರಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗಿವೆ.

ಇದನ್ನೂ ಓದಿ: ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾರೆ ಅಲ್ಲು ಅರ್ಜುನ್ ಪುತ್ರ

ಅಲ್ಲು ಅರ್ಜುನ್​ ಮತ್ತು ಸ್ನೇಹಾ ರೆಡ್ಡಿ ಅವರದ್ದು ಲವ್ ಮ್ಯಾರೇಜ್​. ಅವರ ಲವ್​ ಸ್ಟೋರಿ ಕೂಡ ಸಿನಿಮಾದ ರೀತಿಯೇ ಇದೆ. ಆಪ್ತರೊಬ್ಬರ ಮದುವೆಯೊಂದರಲ್ಲಿ ಅಲ್ಲು ಅರ್ಜುನ್​ ಮತ್ತು ಸ್ನೇಹಾ ರೆಡ್ಡಿ ಅವರು ಮೊದಲ ಬಾರಿಗೆ ಭೇಟಿಯಾದರು. ಮೊದಲ ನೋಟದಲ್ಲೇ ಅಲ್ಲು ಅರ್ಜುನ್​ ಅವರಿಗೆ ಪ್ರೀತಿ ಚಿಗುರಿತು. ಸ್ನೇಹಿತರ ಸಹಾಯದಿಂದ ಸ್ನೇಹಾಗೆ ಅಲ್ಲು ಅರ್ಜುನ್​ ಮೆಸೇಜ್​ ಕಳಿಸಿದರು. ಬಳಿಕ ಇಬ್ಬರೂ ಡೇಟಿಂಗ್​ ಮಾಡಲು ಆರಂಭಿಸಿದರು. ಮೊದಲಿಗೆ ಇಬ್ಬರ ಪ್ರೀತಿಯನ್ನು ಕುಟುಂಬದವರು ಒಪ್ಪಿರಲಿಲ್ಲ. ನಂತರ ತಂದೆ-ತಾಯಿಯನ್ನು ಒಪ್ಪಿಸಿ ಸ್ನೇಹಾ ರೆಡ್ಡಿ ಮತ್ತು ಅಲ್ಲು ಅರ್ಜುನ್​ ಅವರು ಮದುವೆಯಾದರು.

ಇದನ್ನೂ ಓದಿ: ಅಲ್ಲು ಅರ್ಜುನ್​ಗೆ ಟಿವಿ9 ನಕ್ಷತ್ರ ಅವಾರ್ಡ್: ‘ಪುಷ್ಪ’ ಹೇಳಿದ್ದೇನು?

ಈ ಸ್ಟಾರ್​ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಅಲ್ಲು ಅರ್ಜುನ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ನಡುವೆ ಅವರು ಕುಟುಂಬಕ್ಕೆ ಹೆಚ್ಚು ಸಮಯ ನೀಡುತ್ತಾರೆ. ಪತ್ನಿ ಮತ್ತು ಮಕ್ಕಳ ಜೊತೆ ಕಾಲ ಕಳೆದ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ. ಸದ್ಯಕ್ಕೆ ಅಲ್ಲು ಅರ್ಜುನ್​ ಅವರು ‘ಪುಷ್ಪ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ಆಗಸ್ಟ್​ 15ರಂದು ರಿಲೀಸ್​ ಆಗಲಿರುವ ಈ ಸಿನಿಮಾಗೆ ಈಗಲೇ ಪ್ರಚಾರ ನೀಡಲಾಗುತ್ತಿದೆ. ಅಲ್ಲು ಅರ್ಜುನ್​ ಅವರು ಬರ್ಲಿನ್​ಗೆ ಹಾಗೂ ರಶ್ಮಿಕಾ ಮಂದಣ್ಣ ಅವರು ಜಪಾನ್​ಗೆ ತೆರಳಿ ಈ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು