AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸಂಕ್ರಾಂತಿಗೆ ಬಾಕ್ಸ್ ಆಫೀಸ್​ನಲ್ಲಿ ಅಲ್ಲು ಅರ್ಜುನ್​-ರಾಮ್ ಚರಣ್ ಮಧ್ಯೆ ಫೈಟ್​?

ಈ ಬಾರಿ ಸಂಕ್ರಾಂತಿಗೆ ರಿಲೀಸ್ ಆದ ಎಲ್ಲಾ ಚಿತ್ರಗಳು ಒಳ್ಳೆಯ ಕಲೆಕ್ಷನ್ ಮಾಡಿವೆ. ಈ ಕಾರಣಕ್ಕೆ ಅನೇಕರು ನಿರ್ಮಾಪಕರು 2024ರ ಸಂಕ್ರಾತಿ ಮೇಲೆ ಕಣ್ಣಿಟ್ಟಿದ್ದಾರೆ.

ಮುಂದಿನ ಸಂಕ್ರಾಂತಿಗೆ ಬಾಕ್ಸ್ ಆಫೀಸ್​ನಲ್ಲಿ ಅಲ್ಲು ಅರ್ಜುನ್​-ರಾಮ್ ಚರಣ್ ಮಧ್ಯೆ ಫೈಟ್​?
ರಾಮ್ ಚರಣ್-ಅಲ್ಲು ಅರ್ಜುನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 22, 2023 | 6:30 AM

Share

ಸಂಕ್ರಾಂತಿ ಸಂದರ್ಭದಲ್ಲಿ ಸಿನಿಮಾಗಳನ್ನು ರಿಲೀಸ್ ಮಾಡಲು ಅನೇಕ ನಿರ್ಮಾಪಕರು ಮುಂದೆ ಬರುತ್ತಾರೆ. ಈ ಬಾರಿ ತಮಿಳಿನಲ್ಲಿ ‘ವಾರಿಸು’ (Varisu Movie) ಹಾಗೂ ‘ತುನಿವು’ ಸಿನಿಮಾಗಳು (Tunivu Movie) ರಿಲೀಸ್ ಆದವು. ‘ ತೆಲುಗಿನಲ್ಲಿ ‘ವೀರ ಸಿಂಹ ರೆಡ್ಡಿ’ ಹಾಗೂ ‘ವಾಲ್ತೇರು ವೀರಯ್ಯ’ ಚಿತ್ರ ರಿಲೀಸ್ ಆಯಿತು. ಎಲ್ಲಾ ಚಿತ್ರಗಳು ಒಳ್ಳೆಯ ಕಲೆಕ್ಷನ್ ಮಾಡಿವೆ. ಈ ಕಾರಣಕ್ಕೆ ಅನೇಕ ನಿರ್ಮಾಪಕರು 2024ರ ಸಂಕ್ರಾತಿ ಮೇಲೆ ಕಣ್ಣಿಟ್ಟಿದ್ದಾರೆ.

‘ವೀರ ಸಿಂಹ ರೆಡ್ಡಿ’ ಹಾಗೂ ‘ವಾಲ್ತೇರು ವೀರಯ್ಯ’ ಚಿತ್ರಗಳನ್ನು ನಿರ್ಮಾಣ ಮಾಡಿದ್ದು ‘ಮೈತ್ರಿ ಮೂವಿ ಮೇಕರ್ಸ್​’. ಅವರ ನಿರ್ಮಾಣದಲ್ಲೇ ‘ಪುಷ್ಪ 2’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಈ ಕಾರಣಕ್ಕೆ ಮುಂದಿನ ಸಂಕ್ರಾತಿ ಮೇಲೆ ‘ಪುಷ್ಪ 2’ ತಂಡ ಕಣ್ಣಿಟ್ಟಿದೆ. ಸಂಕ್ರಾತಿ ಸಂದರ್ಭದಲ್ಲೇ ‘ಪುಷ್ಪ 2’ ಚಿತ್ರವನ್ನು ರಿಲೀಸ್ ಮಾಡಬೇಕು ಎಂದು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಪಕರು ಟಾರ್ಗೆಟ್ ಇಟ್ಟುಕೊಂಡಿದ್ದಾರೆ.

ರಾಮ್ ಚರಣ್ ನಟನೆಯ 15ನೇ ಚಿತ್ರಕ್ಕೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಈ ಚಿತ್ರವನ್ನು ದಿಲ್ ರಾಜು ನಿರ್ಮಾಣ ಮಾಡುತ್ತಿದ್ದಾರೆ. ಅವರ ನಿರ್ಮಾಣದ ‘ವಾರಿಸು’ ಸಿನಿಮಾ ಸಂಕ್ರಾಂತಿಗೆ ರಿಲೀಸ್ ಆಗಿ ಹಣ ಮಾಡಿದೆ. ಈ ಕಾರಣಕ್ಕೆ ದಿಲ್ ರಾಜು ಕೂಡ ಮುಂದಿನ ಸಂಕ್ರಾಂತಿ ಮೇಲೆ ಕಣ್ಣಿಟ್ಟಿದ್ದಾರೆ. ಈ ಎರಡೂ ಚಿತ್ರಗಳು ಈಗ ಸಂಕ್ರಾಂತಿಗೆ ರಿಲೀಸ್ ಆದರೆ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ​ ಕ್ಲ್ಯಾಶ್ ಏರ್ಪಡಲಿದೆ.

ರಾಮ್ ಚರಣ್ ಹಾಗೂ ಅಲ್ಲು ಅರ್ಜುನ್​ಗೆ ದೊಡ್ಡ ಅಭಿಮಾನ ಬಳಗ ಇದೆ. ರಾಮ್ ಚರಣ್​ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆಗಿದೆ. ವಿದೇಶದಲ್ಲಿ ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಹೀಗಾಗಿ ರಾಮ್ ಚರಣ್ ಅವರ ಇನ್ನೂ ಶೀರ್ಷಿಕೆ ಇಡದ 15ನೇ ಸಿನಿಮಾ ಬಗ್ಗೆ ಕುತೂಹಲ ಮೂಡಿದೆ. ಅದೇ ರೀತಿ ಅಲ್ಲು ಅರ್ಜುನ್ ಅವರು ‘ಪುಷ್ಪ’ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಸೂಪರ್ ಹಿಟ್ ಆಗಿದೆ. ಹೀಗಾಗಿ ‘ಪುಷ್ಪ 2’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಎರಡೂ ಸಿನಿಮಾಗಳು ಒಟ್ಟಿಗೆ ರಿಲೀಸ್ ಆದರೆ ಬಾಕ್ಸ್ ಆಫೀಸ್​ನಲ್ಲಿ ಧಮಾಕ ಏರ್ಪಡಲಿದೆ.

ಇದನ್ನೂ ಓದಿ: ಆಫ್ರಿಕಾದಲ್ಲಿ ದೇಸಿ ಸ್ಟೈಲ್​ನಲ್ಲಿ ವರ್ಕೌಟ್ ಮಾಡಿದ ರಾಮ್ ಚರಣ್; ಇಲ್ಲಿದೆ ವಿಡಿಯೋ  

ರಾಮ್ ಚರಣ್ ಅವರ 15ನೇ ಚಿತ್ರಕ್ಕೆ ಖ್ಯಾತ ನಿರ್ದೇಶಕ ಶಂಕರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅದೇ ರೀತಿ ‘ಪುಷ್ಪ 2’ ಚಿತ್ರಕ್ಕೆ ಸುಕುಮಾರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಎರಡೂ ಸಿನಿಮಾಗಳು ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!